ಬ್ರೇಕಿಂಗ್ ನ್ಯೂಸ್
18-02-22 08:17 pm Mangalore Correspondent ಕರಾವಳಿ
ಮಂಗಳೂರು, ಫೆ.18 : ಕಳ್ಳತನ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಯುವಕನೊಬ್ಬ ನಗರದ ಬಂದರು ಠಾಣೆಯ ಪೊಲೀಸರ ವಶದಲ್ಲಿದ್ದಾಗ ಮೃತಪಟ್ಟಿದ್ದು, ವೆನ್ಲಾಕ್ ಆಸ್ಪತ್ರೆಯ ಬಳಿ ಜನರು ಜಮಾಯಿಸಿದ್ದಾರೆ.
ಉರ್ವಾ ಸ್ಟೋರ್ ನಿವಾಸಿ ರಾಜೇಶ್ ಕರ್ಕೇರ(32) ಮೃತ ಯುವಕ. ಇಂದು ಮಧ್ಯಾಹ್ನ ಬಂದರು ಠಾಣೆಯ ಸೆಲ್ ನಲ್ಲಿದ್ದಾಗ ತೀವ್ರ ಎದೆನೋವು ಉಂಟಾಗಿದ್ದು, ಕೂಡಲೇ ಪೊಲೀಸರು ವೆನ್ಲಾಕ್ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಅದಾಗಲೇ ಯುವಕ ಮೃತಪಟ್ಟಿದ್ದ. ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಆದರೆ, ಪೊಲೀಸರ ವಿಚಾರಣೆಗೆ ಹೆದರಿ ಯುವಕನಿಗೆ ಹೃದಯಾಘಾತ ಆಗಿದೆಯೇ, ಬೇರಾವುದೇ ಕಾರಣ ಇರಬಹುದೇ ಎಂಬ ಬಗ್ಗೆ ಪೋಸ್ಟ್ ಮಾರ್ಟಂ ವರದಿಯಲ್ಲಿ ತಿಳಿದುಬರಬೇಕು.
ನಗರದ ಜ್ಯೋತಿ ಸರ್ಕಲ್ ಬಳಿ ಸ್ಮಾರ್ಟ್ ಸಿಟಿ ಕಾಮಗಾರಿಗೆಂದು ಇರಿಸಿದ್ದ ಕಬ್ಬಿಣದ ಸಲಕರಣೆಗಳನ್ನು ಕದ್ದೊಯ್ಯುವ ಪ್ರಯತ್ನದಲ್ಲಿದ್ದ ಎಂಬ ಆರೋಪದಲ್ಲಿ ಬೀಟ್ ಪೊಲೀಸರು ರಾಜೇಶ್ ಕರ್ಕೇರ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಇಂದು ನಸುಕಿನಲ್ಲಿ ಬಂಧಿಸಿದ್ದರು. ಆನಂತರ, ಇಬ್ಬರನ್ನೂ ಬಂದರು ಠಾಣೆಯ ಪೊಲೀಸರ ವಶಕ್ಕೆ ಒಪ್ಪಿಸಿದ್ದರು. ಇಂದು ಮಧ್ಯಾಹ್ನ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದಾಗಲೇ ರಾಜೇಶನಿಗೆ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗುತ್ತಿದ್ದು, ಬಳಿಕ ಆಸ್ಪತ್ರೆಗೆ ಕರೆತಂದಿದ್ದರು. ಆಸ್ಪತ್ರೆಗೆ ತಲುಪಿದಾಗಲೇ ಯುವಕ ಮೃತಪಟ್ಟಿದ್ದ.
ರಾಜೇಶ್ ಕರ್ಕೇರ ಮನೆಗೆ ಸರಿಯಾಗಿ ಹೋಗುತ್ತಿರಲಿಲ್ಲ. ಬೀದಿಯಲ್ಲಿ ಅಲೆಯುತ್ತಿದ್ದುದಲ್ಲದೆ, ಕುಡಿತದ ಚಟ ಅಂಟಿಸಿಕೊಂಡಿದ್ದ. ಮನೆಮಂದಿ ತೀರಾ ಬಡವರಾಗಿದ್ದು, ಮಗನಿಗೆ ಆಗಿರುವ ಆಘಾತದ ಬಗ್ಗೆ ಸರಿಯಾದ ಮಾಹಿತಿ ಹೊಂದಿಲ್ಲ. ಪೊಲೀಸರ ವಿಚಾರಣೆಯಿಂದ ಆಘಾತಗೊಂಡು ಸಾವು ಸಂಭವಿಸಿದೆಯೇ ಎಂಬ ಬಗ್ಗೆ ಪೋಸ್ಟ್ ಮಾರ್ಟಂ ವರದಿಯಲ್ಲೇ ಮಾಹಿತಿ ಬರಬೇಕಷ್ಟೆ.
Mangalore accused dies in Police station of Heart attack in Bunder Police station. The deceased has been identified as 32 year old Rajesh Karkera from Urwa Store. He was arrested on the charges of stealing steel near Jyothi circle. It is said he got chest pain and then died in the hospital.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm