ಬ್ರೇಕಿಂಗ್ ನ್ಯೂಸ್
22-02-22 08:53 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ವೈಯಕ್ತಿಕವಾಗಿ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದೇ ವೇಳೆ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ತನ್ನ ಒಂದು ತಿಂಗಳ ವೇತನವನ್ನು ಹರ್ಷ ಕುಟುಂಬಕ್ಕೆ ನೀಡುವುದಾಗಿ ಟ್ವೀಟ್ ಮಾಡಿದ್ದಾರೆ.
ಶಾಸಕ ವೇದವ್ಯಾಸ್ ಕಾಮತ್ ಈ ಕುರಿತು ಟ್ವೀಟ್ ಮಾಡಿದ್ದು ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವ ಹಿಂದು ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ನನ್ನ ವೈಯಕ್ತಿಕ ನೆಲೆಯಿಂದ 2 ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದೇನೆ. ಸಿದ್ಧಾಂತಕ್ಕಾಗಿ ಬಲಿದಾನಗೈದ ಹರ್ಷನ ಕುಟುಂಬದ ಜವಾಬ್ದಾರಿ ಹಿಂದು ಸಮಾಜದ ಮೇಲಿದೆ. ಹಾಗಾಗಿ ನಮ್ಮಿಂದಾಗುವಷ್ಟು ಸಹಾಯ ಮಾಡೋಣ. ಅವರ ಕುಟುಂಬಕ್ಕೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ" ಎಂದು ಹೇಳಿದ್ದಾರೆ.
ಹರ್ಷ ಹತ್ಯೆಯ ಹಿಂದೆ ರಾಷ್ಟ್ರ ವಿರೋಧಿ ಸಂಘಟನೆಗಳ ಕೈವಾಡವಿದೆ. ಹಾಗಾಗಿ ಈ ಹತ್ಯೆಯ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಿ, ದುರ್ಘಟನೆಯ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಗೃಹ ಸಚಿವರನ್ನು ಆಗ್ರಹಿಸುವುದಾಗಿ ಶಾಸಕ ಕಾಮತ್ ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಟ್ವೀಟ್ ಮಾಡಿ, ಕೊಲೆಯಾದ ಹರ್ಷನ ಕುಟುಂಬದ ಪರವಾಗಿ ಹಿಂದು ಸಮಾಜ ನಿಲ್ಲಬೇಕು ಎಂದು ಮನವಿ ಮಾಡಿದ್ದರು. ಇದನ್ನು ರೀಟ್ವೀಟ್ ಮಾಡಿದ್ದ ಶಾಸಕ ಭರತ್ ಶೆಟ್ಟಿ ತನ್ನ ಒಂದು ತಿಂಗಳ ಶಾಸಕತ್ವದ ಸಂಬಳವನ್ನು ನೀಡುವುದಾಗಿ ಹೇಳಿದ್ದರು. ಶಾಸಕ ಸ್ಥಾನದ ಸಂಬಳ ಎಪ್ರಿಲ್ ತಿಂಗಳಿನಿಂದ ಅನ್ವಯ ಆಗುವಂತೆ 40 ಸಾವಿರ ಸಿಗಲಿದೆ.
Mangalore Both MLAs Vedavyas Kamath and Bharath Shetty donate their salary to Harsha family who was brutally murdered in Shivamogga.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm