ಬ್ರೇಕಿಂಗ್ ನ್ಯೂಸ್
23-02-22 02:38 pm Mangalore Correspondent ಕರಾವಳಿ
ಉಳ್ಳಾಲ, ಫೆ.23 : ಪ್ರಿಯಕರನೊಂದಿಗೆ ಮೊಬೈಲ್ ಸಂಭಾಷಣೆಯಲ್ಲಿದ್ದ ವೇಳೆಯೇ ನೇಣಿಗೆ ಕೊರಳೊಡ್ಡಿದ ಯುವತಿಯೋರ್ವಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂಪಲ ಬಲ್ಯ ಎಂಬಲ್ಲಿ ನಡೆದಿದೆ.
ಕುಂಪಲ ಬಲ್ಯ ನಿವಾಸಿ ಹರ್ಷಿತ (21) ಮೃತ ದುರ್ದೈವಿ. ಹರ್ಷಿತ ನಿನ್ನೆ ಮಧ್ಯಾಹ್ನ ತನ್ನ ಬಲ್ಯದ ಮನೆಯೊಳಗೆ ಪ್ರಿಯಕರನೊಂದಿಗೆ ಮೊಬೈಲ್ ಫೋನಲ್ಲಿ ಮಾತನಾಡುತ್ತಳೇ ಸಿಲಿಂಗ್ ಫ್ಯಾನಿಗೆ ಚೂಡಿದಾರ್ ಶಾಲಿನ ನೇಣು ಹಾಕಿ ಕೊರಳೊಡ್ಡಿದ್ದಾಳೆ. ಹತ್ತಿರದವನೇ ಆದ ಬಲ್ಯ ಬ್ಯಾಂಕ್ ಕಾಲನಿ ನಿವಾಸಿಯ ಪ್ರಿಯಕರ ತಕ್ಷಣ ಆಕೆಯನ್ನ ನೇಣು ಕುಣಿಕೆಯಿಂದ ಇಳಿಸಿ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಹರ್ಷಿತ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾಳೆ.
ಮೃತ ಹರ್ಷಿತ ಮತ್ತು ಪ್ರಿಯಕರನ ಮಧ್ಯೆ ವಿರಸ ಮೂಡಿದ್ದು ಈ ಬಗ್ಗೆನೇ ಫೋನಲ್ಲಿ ಮಾತನಾಡುತ್ತಲೇ ನೇಣು ಬಿಗಿದಿರುವುದಾಗಿ ಹೇಳಲಾಗುತ್ತಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳೂ ಇದ್ದು ಪೊಲೀಸರು ಪ್ರಿಯಕರನ ವಿಚಾರಣೆ ನಡೆಸುತ್ತಿದ್ದಾರೆ.
ಮೃತ ಹರ್ಷಿತ ಪೋಷಕರಿಗೆ ಏಕೈಕ ಮಗಳಾಗಿದ್ದು ಆಕೆಯ ತಂದೆ ಗಂಗಾಧರ್ ಗಾಣಿಗ ಅವರು ಐದು ವರುಷಗಳ ಹಿಂದಷ್ಟೆ ಕನ್ನಡಿ(ಕಂದಡಿ) ಹಾವು ಕಡಿದು ಮೃತ ಪಟ್ಟಿದ್ದರು. ಹರ್ಷಿತ ತಾಯಿ ಗೀತಾ ಅವರನ್ನ ಅಗಲಿದ್ದಾಳೆ. ಕಳೆದ ಒಂದು ವರುಷದಿಂದ ಕುಂಪಲದಲ್ಲಿ ರೂಪದರ್ಶಿ ಪ್ರೇಕ್ಷಾಳಿಂದ ತೊಡಗಿ ಸರಣಿಯಾಗಿ ಅಸಹಜ ಸಾವುಗಳು ಸಂಭವಿಸುತ್ತಿದ್ದು ಇದೀಗ ಹರ್ಷಿತಳ ಆತ್ಮಹತ್ಯೆಯೂ ಆ ಸರದಿಗೆ ಸೇರಿದೆ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
Mangalore 21 year old girl from Kumpala, Ullal commits suicide while talking to her boyfriend over phone call. The deceased has been identified as Harshitha. She was rushed to the hospital but she breathed her lost after failure of medical treatment.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 06:38 pm
Mangalore Correspondent
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm