ಬ್ರೇಕಿಂಗ್ ನ್ಯೂಸ್
19-09-20 05:25 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 19: ಡ್ರಗ್ ಪ್ರಕರಣದಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಅಮನ್ ಅಸಲಿಗೆ ಶೆಟ್ಟಿ ಸಮುದಾಯದವನೇ ಅಲ್ಲ. ಬಾಲಿವುಡ್ ನಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಹೆಸರಿನ ಮುಂದೆ ಶೆಟ್ಟಿ ಸರ್ ನೇಮ್ ಸೇರಿಸಿಕೊಂಡಿದ್ದ ಎಂಬ ಮಾಹಿತಿ ಹೊರಬಿದ್ದಿದೆ.
‘ಕಿಶೋರ್ ಶೆಟ್ಟಿ’ ಬಂಧನ ಸುದ್ದಿ ಬೆಳಗ್ಗಿನಿಂದ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದ್ದಂತೆ ಸುರತ್ಕಲ್ ಪರಿಸರದ ಬಂಟ ಸಮುದಾಯದವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ ಒರಿಜಿನಲ್ ಶೆಟ್ಟಿಯಲ್ಲ. ತನ್ನ ಹೆಸರಿನ ಮುಂದೆ ಉದ್ದೇಶಪೂರ್ವಕವಾಗಿ ಶೆಟ್ಟಿ ಹಾಕ್ಕೊಂಡಿದ್ದಾನೆ. ಬೇಕಿದ್ದರೆ ಆತನಲ್ಲಿ ಕೇಳಿ ನೋಡಿ ಎಂದು ಹೇಳಿದ್ದರು. ಈ ಬಗ್ಗೆ ಆತನನ್ನು ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಪೊಲೀಸರು ಪ್ರಶ್ನೆ ಮಾಡಿದಾಗ, ಕಿಶೋರ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಅಲ್ಲದೆ, ಶೆಟ್ಟಿ ಹಾಕ್ಕೊಂಡಿದ್ದರ ಕಾರಣವನ್ನೂ ಹೇಳಿದ್ದಾನೆ.

ಆರಂಭದಲ್ಲಿ ಝೀಟಿವಿಯ ರಿಯಾಲಿಟಿ ಶೋಗಳಲ್ಲಿ ಇದ್ದಾಗ ಕಿಶೋರ್, ಮಂಗಳೂರು ಅಂತಷ್ಟೇ ಬಳಕೆ ಮಾಡುತ್ತಿದ್ದ. ಆನಂತರ ಸ್ವಲ್ಪ ಹೆಸರು ಬಂದೊಡನೆ ಬಾಲಿವುಡ್ ಕಲಾವಿದರ ಪರಿಚಯ ಆಗಿತ್ತು. ಮಂಗಳೂರು ಮೂಲದವ, ಹೆಸರಿನ ಜೊತೆಗೆ ಶೆಟ್ಟಿ ಸರ್ ನೇಮ್ ಇದ್ದರೆ ಹೆಚ್ಚು ಅವಕಾಶ, ಮರ್ಯಾದೆ ಸಿಗುತ್ತೆ ಅಂತ ಸೇರಿಸಿಕೊಂಡಿದ್ದೆ ಅಂತಾ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದಾನೆ.
ಮಂಗಳೂರಿನ ಕುಳಾಯಿ ನಿವಾಸಿಯಾಗಿದ್ದ ಕಿಶೋರ್, 2011ರ ವೇಳೆಗೆ ಝೀ ರಿಯಾಲಿಟಿ ಶೋಗಳಿಗೆ ಹೋಗಿ ಹೆಸರು ಮಾಡಿದ್ದ. ಅದು ಬಿಟ್ಟರೆ ಮಂಗಳೂರಿನಲ್ಲಿ ಡ್ಯಾನ್ಸ್ ಕ್ಲಾಸ್ ಆಗಿರಲಿ, ಯಾವುದೇ ಡ್ಯಾನ್ಸ್ ಚಟುವಟಿಕೆಯನ್ನು ಮಾಡಿಕೊಂಡಿಲ್ಲ ಎಂದು ಆತನ ನಿಕಟವರ್ತಿಗಳು ಹೇಳಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm