ಬ್ರೇಕಿಂಗ್ ನ್ಯೂಸ್
24-02-22 07:36 pm Udupi Correspondent ಕರಾವಳಿ
ಉಡುಪಿ, ಫೆ.24 : ಕಾಲೇಜಿನ ಪಿಆರ್ ಓ ಆಗಿರುವ ವ್ಯಕ್ತಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳಿಸುತ್ತಿರುವ ಆರೋಪದಲ್ಲಿ ಕುಂದಾಪುರದ ಬಿಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನಾ ಧರಣಿ ನಡೆಸಿದ್ದಾರೆ.
ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿಯನ್ನು ಹುದ್ದೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಕಾಲೇಜಿನ ಮುಂಭಾಗದಲ್ಲಿ ಧರಣಿ ನಡೆಸಿದ್ದಾರೆ. ಆ ವ್ಯಕ್ತಿ ಕೆಲವು ವಿದ್ಯಾರ್ಥಿನಿಯರಿಗೆ ರಾತ್ರಿ ವೇಳೆ ಅಶ್ಲೀಲ ಸಂದೇಶ ಕಳಿಸುತ್ತಿರುವ ಆರೋಪವಿದ್ದು ಇದರ ಬಗ್ಗೆ ಪ್ರಾಂಶುಪಾಲರಿಗೆ ದೂರು ನೀಡಿದರೂ ಶಿಸ್ತುಕ್ರಮ ಜರುಗಿಸಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಹೀಗಾಗಿ ವಿದ್ಯಾರ್ಥಿನಿಯರು ಮತ್ತು ಇತರ ವಿದ್ಯಾರ್ಥಿಗಳು ಸೇರಿ ಕಾಲೇಜು ಮುಂಭಾಗದಲ್ಲಿ ಧರಣಿ ನಡೆಸಿದ್ದಾರೆ. ಪಿಆರ್ ಓ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಆತ ತನ್ನ ಮೊಬೈಲಿನಲ್ಲಿ ಡಿಲೀಟ್ ಮಾಡಿದ್ದು ತಾನೇನು ಸಂದೇಶ ಕಳಿಸಿಲ್ಲ ಎಂದು ತಕರಾರು ತೆಗೆಯುತ್ತಿದ್ದಾನೆ. ಆದರೆ ಆತ ಸ್ಥಳಕ್ಕೆ ಬರಲಿ ಎಂದು ವಿದ್ಯಾರ್ಥಿಗಳು ಆಗ್ರಹ ಮಾಡಿದ್ದಾರೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಕಾಲೇಜು ಪ್ರಾಂಶುಪಾಲ ಉಮೇಶ್ ಅವರಿಗೆ ಮನವಿ ನೀಡಿದ್ದು ಈ ಬಗ್ಗೆ ಕ್ರಮ ಜರುಗಿಸುವಂತೆ ಒತ್ತಾಯ ಮಾಡಿದ್ದಾರೆ.
ಶಿಸ್ತುಕ್ರಮ ಜರುಗಿಸುವುದಾಗಿ ಪ್ರಾಂಶುಪಾಲರು ಭರವಸೆ ನೀಡಿದ್ದಾರೆ. ಪಿಆರ್ ಓ ಅನ್ನು ಸ್ಥಳಕ್ಕೆ ಕರೆಸಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದು ಬಿಸಿಲನ್ನೂ ಲೆಕ್ಕಿಸದೇ ಮೈದಾನದಲ್ಲಿ ಕುಳಿತು ಧರಣಿ ನಡೆಸಿದರು. ಅಲ್ಲದೆ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರನ್ನು ಸ್ಥಳಕ್ಕೆ ಕರೆಸುವಂತೆ ಒತ್ತಾಯ ಮಾಡಿದ್ದಾರೆ. ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದು ವಿಚಾರ ಅವರ ಗಮನಕ್ಕೂ ಹೋಗಿದೆ.
The girl students of a private college at Sangam in the taluk are staging a protest in front of the college urging the suspension of its PRO accusing him of sending obscene messages on their mobile phones. It is said that the PRO had been sending obscene messages to girl students during nights. Girl students have also accused the college principal of not taking any action despite complaining with him against the erring official.
13-09-25 07:50 pm
Bangalore Correspondent
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm