ಬ್ರೇಕಿಂಗ್ ನ್ಯೂಸ್
26-02-22 10:57 pm Mangalore Correspondent ಕರಾವಳಿ
ಮಂಗಳೂರು, ಫೆ.26 : ಉಕ್ರೇನ್ ದೇಶದಲ್ಲಿ 150ಕ್ಕೂ ಹೆಚ್ಚು ಕನ್ನಡಿಗರಿದ್ದಾರೆ ಎನ್ನುವ ಮಾಹಿತಿಯಿದೆ. ಬೆಂಗಳೂರು ನಗರ ಒಂದರಲ್ಲೇ 30ಕ್ಕೂ ಹೆಚ್ಚು ಮಂದಿ ಉಕ್ರೇನ್ ದೇಶದಲ್ಲಿದ್ದಾರೆ ಎನ್ನಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ 12 ಮಂದಿ ವಿದ್ಯಾರ್ಥಿಗಳು ಉಕ್ರೇನ್ ದೇಶದಲ್ಲಿದ್ದಾರೆ ಎನ್ನುವ ಮಾಹಿತಿಯನ್ನು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ದೃಢಪಡಿಸಿದ್ದಾರೆ.
ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯ 12 ಮಂದಿ ಉಕ್ರೇನಲ್ಲಿ ಸಿಕ್ಕಿಕೊಂಡಿದ್ದಾರೆ ಎನ್ನುವ ಮಾಹಿತಿಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ. ಆದರೆ ಯಾರೆಲ್ಲ ಇದ್ದಾರೆ, ಎಲ್ಲಿಯವರೆಲ್ಲ ಇದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ. ಅದರ ಬಗ್ಗೆ ನಾವು ಮಾಹಿತಿ ನೀಡಿದರೆ, ಆಮೇಲೆ ಕೆಲವರಿಂದ ವಿರೋಧ ಬರುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಆದರೆ ಎಲ್ಲ 12 ಮಂದಿಯೂ ಸುರಕ್ಷಿತವಾಗಿದ್ದಾರೆ. ಅವರನ್ನು ರಾಯಭಾರ ಕಚೇರಿ ಮೂಲಕ ಮರಳಿ ಕರೆತರುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ಪ್ರಯತ್ನಗಳು ಆಗುತ್ತಿವೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
ಸಾಮಾನ್ಯವಾಗಿ ಒಂದು ಜಿಲ್ಲೆಯಿಂದ, ಒಂದು ರಾಜ್ಯದಿಂದ ಎಷ್ಟು ಮಂದಿ ಒಂದು ದೇಶದಲ್ಲಿ ಇದ್ದಾರೆ ಎಂಬ ಬಗ್ಗೆ ರಾಯಭಾರ ಕಚೇರಿಯಲ್ಲಿ ಮಾಹಿತಿಗಳು ಇರುತ್ತವೆ. ಈ ಬಗ್ಗೆ ಆಯಾ ಜಿಲ್ಲಾಡಳಿತಕ್ಕೂ ಮಾಹಿತಿಗಳು ಇರಬೇಕು. ಯಾವುದೇ ವ್ಯಕ್ತಿ ವಿದೇಶಕ್ಕೆ ತೆರಳುವ ಸಂದರ್ಭದಲ್ಲಿ ಎಲ್ಲಿ ಹೋಗುತ್ತಿದ್ದಾನೆ, ಏನು ಮಾಡುತ್ತಿದ್ದಾನೆ ಎನ್ನುವ ಏರ್ಪೋರ್ಟ್ ನಲ್ಲಿ ನೀಡಬೇಕಾಗುತ್ತದೆ. ಆಮೂಲಕ ಜಿಲ್ಲಾಡಳಿತ ಮಾಹಿತಿಯನ್ನು ಪಡೆದಲ್ಲಿ ಎಷ್ಟು ಮಂದಿ ಉಕ್ರೇನಲ್ಲಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿಗಳನ್ನು ಪಡೆಯಬಹುದು. ಆದರೆ, ಈಗ ಆಯಾ ಭಾಗದ ಕುಟುಂಬಸ್ಥರು ತಮ್ಮವರು ಉಕ್ರೇನಲ್ಲಿರುವ ಬಗ್ಗೆ ಮಾಹಿತಿಯನ್ನು ಸರಕಾರಕ್ಕೆ ನೀಡುತ್ತಿದ್ದಾರೆ. ಆನಂತರವಷ್ಟೇ ಅವರನ್ನು ಪಾರು ಮಾಡುವ ಕೆಲಸ ನಡೆಯುತ್ತಿದೆ. ಇದರಿಂದಾಗಿ ಕನ್ನಡಿಗರು ಎಷ್ಟಿದ್ದಾರೆ ಎಂಬ ಬಗ್ಗೆ ರಾಜ್ಯ ಸರಕಾರಕ್ಕೆ ಈಗಲೂ ಖಚಿತವಾಗಿಲ್ಲ.
12 from Dakshina Kannada stranded in Ukraine, says embassy.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm