ಬ್ರೇಕಿಂಗ್ ನ್ಯೂಸ್
20-09-20 10:06 am Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 21: ಉಡಪಿ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟಕ್ಕೆ ಜನಜೀವನ ಸ್ತಬ್ಧವಾಗುವ ಲಕ್ಷಣ ಗೋಚರಿಸಿದೆ. ಉಡುಪಿ ಪೇಟೆ ಆಸುಪಾಸಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಂಡುಕೇಳರಿಯದ ರೀತಿ ನೆರೆ ಕಾಣಿಸಿಕೊಂಡಿದ್ದು ಉಡುಪಿ - ಮಣಿಪಾಲ ಸಂಪರ್ಕಿಸುವ ಹೆದ್ದಾರಿ ಹೊಳೆಯ ರೂಪ ಪಡೆದು ಪ್ರವಾಹ ಕಾಣಿಸಿದೆ. ಹೆದ್ದಾರಿಯಲ್ಲಿ ನೀರು ತುಂಬಿದ್ದರಿಂದ ಸಂಪರ್ಕ ಕಡಿತಗೊಂಡಿದೆ.
ಶನಿವಾರ ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದ್ದು ಉಡುಪಿ ನಗರದ ಪ್ರಮುಖ ಬೀದಿಗಳು ಜಲಾವೃತವಾಗಿವೆ. ಉಡುಪಿ- ಮಣಿಪಾಲ ಸಂಪರ್ಕದ ಹೆದ್ದಾರಿಯಲ್ಲಿ ನಿನ್ನೆ ರಾತ್ರಿಯಿಂದಲೇ ನೀರು ತುಂಬಿ ಹೊಳೆಯಂತೆ ಹರಿಯುತ್ತಿದೆ. ಕೃಷ್ಣಮಠ ಪರಿಸರದ ಕಲ್ಸಂಕ ಬೈಲಕೆರೆ ಆಸುಪಾಸಿನಲ್ಲಿ ಭಾರೀ ನೆರೆ ಕಾಣಿಸಿಕೊಂಡಿದ್ದು ಹಲವಾರು ಮನೆಗಳು ನೀರಿನಲ್ಲಿ ಮುಳುಗಿವೆ.
ಬನ್ನಂಜೆ ಕೊಡವೂರು ಪಾಡಿಗಾರು ಗುಂಡಿಬೈಲಿನ ತಗ್ಗು ಪ್ರದೇಶಗಳೆಲ್ಲ ಜಲಾವೃತಗೊಂಡಿವೆ. ಪೆರ್ಡೂರಿನ ಪುತ್ತಿಗೆ ಮಠದ ಪರಿಸರದಲ್ಲಿ ರಸ್ತೆ ಸಂಚಾರ ಬಂದ್ ಆಗಿದೆ. ನೆರೆಯಿಂದಾಗಿ ಮಲ್ಪೆ- ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿದ್ದು ಸಂಚಾರ ವ್ಯತ್ಯಯಗೊಂಡಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ ಸೇತುವೆ ಪರಿಸರವೂ ಮುಳುಗಡೆಯಾಗಿದ್ದು ಈ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದೆ.









ಸ್ವರ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ಆಸುಪಾಸಿನಲ್ಲಿ ನೆರೆ ಕಾಣಿಸಿಕೊಂಡಿದೆ ಎನ್ನಲಾಗ್ತಿದೆ. ಮಳೆನೀರು ಹರಿಯಲು ಜಾಗ ಇಲ್ಲದೆ ಉಡುಪಿ ಪೇಟೆಯ ವಿವಿಧೆಡೆ ಮುಳುಗಡೆಯಾಗಿದೆ. ಮಾಣೈ ಪರಿಸರದಲ್ಲಿ ನೀರು ಪ್ರವಾಹದ ರೂಪದಲ್ಲಿ ಹರಿಯುತ್ತಿದ್ದು ಆ ಭಾಗದ ಸುಮಾರು ಇಪ್ಪತ್ತು ಮನೆಗಳು ಮುಳುಗಡೆಯಾಗಿವೆ. ಸ್ಥಳೀಯ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ.
ಉಡುಪಿ- ಮಣಿಪಾಲ ಹೆದ್ದಾರಿ ಬಂದ್ ಆಗಿರುವುದರಿಂದ ಉಡುಪಿ- ಆಗುಂಬೆ - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಸಂಚಾರವೂ ಸ್ಥಗಿತವಾಗಿದೆ.
ಪುತ್ತಿಗೆ ವಿದ್ಯಾಪೀಠಕ್ಕೆ ನುಗ್ಗಿದ ನೀರು !
ಇನ್ನು ಹಿರಿಯಡ್ಕ ಪರಿಸರದಲ್ಲಿ ಸ್ವರ್ಣಾ ನದಿಯ ನೆರೆಯಿಂದಾಗಿ ಪುತ್ತಿಗೆ ಶ್ರೀಗಳ ಮೂಲಮಠಕ್ಕೆ ನೀರು ನುಗ್ಗಿದೆ. ಮಠದ ಗೋಶಾಲೆಯೂ ಜಲಾವೃತಗೊಂಡಿದ್ದು ಸ್ಥಳೀಯರ ನೆರವಿನೊಂದಿಗೆ ಗೋವುಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am