ಬ್ರೇಕಿಂಗ್ ನ್ಯೂಸ್
28-02-22 03:24 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಫೆ.28 : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯಕ್ಕೆ ನೀಡಿದ ಯೋಜನೆಗಳು ಎಂದಿಗೂ ಪ್ರಸ್ತುತ ಎಂದು ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.
ಬಿ.ಎಸ್ ಯಡಿಯೂರಪ್ಪ ಅವರ ಜನ್ಮದಿನದ ಸಂದರ್ಭದಲ್ಲಿ ರವೀಂದ್ರ ಶೆಟ್ಟಿ ಉಳಿದೊಟ್ಟು ದಂಪತಿ ಪುರಾಣ ಪ್ರಸಿದ್ಧ ಸೋಮೇಶ್ವರ ಸೋಮನಾಥ ದೇವರಿಗೆ ವಿಶೇಷ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ರವೀಂದ್ರ ಶೆಟ್ಟಿ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಅನುಷ್ಠಾನಗೊಳಿಸಿದ ಭಾಗ್ಯಲಕ್ಷ್ಮಿ, ಸುಕನ್ಯಾ ಸಮೃದ್ಧಿಯಂತಹ ಜನಪರ ಯೋಜನೆಗಳು, ರೈತರ ಪರವಾದ ನಿಲುವು, ಹೋರಾಟಗಳನ್ನ ರಾಜ್ಯದ ಜನರು ಎಂದಿಗೂ ಮರೆಯುವಂತಿಲ್ಲ.

ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ಗಡಗಡ ನಡುಗುತ್ತಿತ್ತು. ಅವರಿಂದು ಅಧಿಕಾರದಲ್ಲಿಲ್ಲದಿದ್ದರೂ ಸಹ ಇಂದಿಗೂ ಅನೇಕರು ಯಡಿಯೂರಪ್ಪರೇ ಮುಖ್ಯಮಂತ್ರಿಗಳೆಂದು ಹೇಳುವಷ್ಟು ಜನಪ್ರಿಯತೆ ಪಡೆದಿದ್ದಾರೆ. ದೇವರು ಇನ್ನೂ ಅವರಿಗೆ ದೀರ್ಘಾಯುಷ್ಯ, ಆರೋಗ್ಯ ನೀಡಿ ಜನಸೇವೆ ಮಾಡುವ ಶಕ್ತಿ ನೀಡುವಂತೆ ವರ್ಷಂಪ್ರತಿ ಅವರ ಹುಟ್ಟು ದಿನದಂದು ಸೋಮನಾಥನಿಗೆ ವಿಶೇಷ ಪೂಜೆ ನೀಡುತ್ತಾ ಬಂದಿರುವುದಾಗಿ ಹೇಳಿದರು.


ಬಿಎಸ್ ವೈ ಹುಟ್ಟು ದಿನದ ಪ್ರಯುಕ್ತ ರವೀಂದ್ರ ಶೆಟ್ಟಿ ದಂಪತಿ ದೇರಳಕಟ್ಟೆ ಬೆಳ್ಮದ ಸೇವಾಶ್ರಮದ ವೃದ್ಧರಿಗೆ ವಸ್ತ್ರ , ಫಲಗಳನ್ನು ನೀಡಿ ಸಂಭ್ರಮಾಚರಿಸಿದರು. ಆಶ್ರಮವಾಸಿ ವೃದ್ಧರು ಕುಣಿದು ಸಂಭ್ರಮಾಚರಿಸಿದರು. ಜತೆಗೆ ಬಿಎಸ್ ವೈ ಒಳಿತಿಗಾಗಿ ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು.

ರವೀಂದ್ರ ಶೆಟ್ಟಿ ಉಳಿದೊಟ್ಟು ಅವರ ಧರ್ಮಪತ್ನಿ ಸೌಮ್ಯ ಕೆ .ಆರ್. ಶೆಟ್ಟಿ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಬಿಜೆಪಿ ಪ್ರಮುಖರಾದ ಚಂದ್ರಶೇಖರ ಉಚ್ಚಿಲ್, ರವಿಶಂಕರ್ ಸೋಮೇಶ್ವರ, ಹೇಮಂತ್ ಶೆಟ್ಟಿ, ಜೀವನ್ ತೊಕ್ಕೊಟ್ಟು, ಆನಂದ ಶೆಟ್ಟಿ, ಸಚಿನ್ ಮೋರೆ, ರಾಕೇಶ್ ಉಲ್ಲೋಡಿ, ಜಯರಾಮ ಭಂಡಾರಿ, ಪ್ರಕಾಶ್ ಸಿಂಫೋಣಿ, ದೀಕ್ಷಿತ್, ಸೇವಾಶ್ರಮದ ಟ್ರಸ್ಟಿ ಜಿ.ಆರ್ ಶೆಟ್ಟಿ, ಗೀತಾ ಆರ್ ಶೆಟ್ಟಿ, ಶೀಲಾ ಶೆಟ್ಟಿ ಮೊದಲಾದವರು ಜತೆಗಿದ್ದರು.
Mangalore Special Pooja offered at Someshwara temple for the Birthday of B S Yediyurappa by Ravindra Shetty.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm