ಬ್ರೇಕಿಂಗ್ ನ್ಯೂಸ್
28-02-22 08:02 pm Mangalore Correspondent ಕರಾವಳಿ
ಮಂಗಳೂರು, ಫೆ.28: ನಾಪತ್ತೆಯಾಗಿದ್ದ 16 ವರ್ಷದ ಹುಡುಗನ ಶವ ಹೊಯ್ಗೆಬಜಾರ್ ಬಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಹುಡುಗನ ಕೊಲೆ ಆಗಿದೆಯೇ, ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ನೀರಿಗೆ ಸ್ನಾನಕ್ಕೆ ಇಳಿದವನು ಸಾವು ಕಂಡಿದ್ದಾನೆಯೇ ಎಂಬ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಮಹಾಕಾಳಿ ಪಡ್ಪುವಿನಲ್ಲಿ ವಾಸವಿರುವ ಆಶಾ ಮತ್ತು ಚೆನ್ನಪ್ಪ ದಂಪತಿಯ ಪುತ್ರ ದೃಶ್ಯಂತ್ (16) ಮೃತ ಹುಡುಗ. ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ನಲ್ಲಿ 9 ನೇ ತರಗತಿ ಕಲಿಯುತ್ತಿದ್ದ ದೃಶ್ಯಂತ್, ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಮನೆ ಬಳಿಯ ಮೈದಾನದಲ್ಲಿ ಆಟವಾಡಲು ಹೋಗಿದ್ದ. ಗೆಳೆಯರ ಜೊತೆ ಕ್ರಿಕೆಟ್ ಆಡುತ್ತಿದ್ದ ಹುಡುಗ ಆನಂತರ ಮನೆಗೆ ಬಂದಿರಲಿಲ್ಲ.

ಈ ಬಗ್ಗೆ ಜೊತೆಗಿದ್ದ ಗೆಳೆಯರಲ್ಲಿ ಹೆತ್ತವರು ವಿಚಾರಿಸಿದ್ದು ತಮಗೇನೂ ಗೊತ್ತಿಲ್ಲ ಎಂದಿದ್ದರು. ಇಂದು ಬೆಳಗ್ಗೆ ತಾಯಿ ಆಶಾ ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಸಂಜೆ ವೇಳೆಗೆ ಅದೇ ಹುಡುಗನ ಶವ ಹೊಯ್ಗೆ ಬಜಾರ್ ಬಳಿ ನದಿ ತೀರದಲ್ಲಿ ಪತ್ತೆಯಾಗಿದೆ.
ಆಡಲು ಹೋಗಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಕಡಿಮೆ. ಅಲ್ಲದೆ, ಪ್ಯಾಂಟ್ ಹಾಕ್ಕೊಂಡು ಹೋಗಿದ್ದವನು ಚಡ್ಡಿಯಲ್ಲಿ ಪತ್ತೆಯಾಗಿದ್ದಾನೆ. ಹೀಗಾಗಿ ಸ್ನಾನಕ್ಕಿಳಿದು ಮೃತಪಟ್ಟಿದ್ದಾನೆಯೇ, ಬೇರೆ ಏನಾದರೂ ಕೈವಾಡ ಇದೆಯೇ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Mangalore 16 year old boy body found in Netravathi river. The deceased has been identified as Dhrushyanth. He was a 9th STD student and was said to be missing since Sunday after he had been to play cricket with his friends.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm