ಬ್ರೇಕಿಂಗ್ ನ್ಯೂಸ್
28-02-22 08:02 pm Mangalore Correspondent ಕರಾವಳಿ
ಮಂಗಳೂರು, ಫೆ.28: ನಾಪತ್ತೆಯಾಗಿದ್ದ 16 ವರ್ಷದ ಹುಡುಗನ ಶವ ಹೊಯ್ಗೆಬಜಾರ್ ಬಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಹುಡುಗನ ಕೊಲೆ ಆಗಿದೆಯೇ, ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ನೀರಿಗೆ ಸ್ನಾನಕ್ಕೆ ಇಳಿದವನು ಸಾವು ಕಂಡಿದ್ದಾನೆಯೇ ಎಂಬ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಮಹಾಕಾಳಿ ಪಡ್ಪುವಿನಲ್ಲಿ ವಾಸವಿರುವ ಆಶಾ ಮತ್ತು ಚೆನ್ನಪ್ಪ ದಂಪತಿಯ ಪುತ್ರ ದೃಶ್ಯಂತ್ (16) ಮೃತ ಹುಡುಗ. ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ನಲ್ಲಿ 9 ನೇ ತರಗತಿ ಕಲಿಯುತ್ತಿದ್ದ ದೃಶ್ಯಂತ್, ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಮನೆ ಬಳಿಯ ಮೈದಾನದಲ್ಲಿ ಆಟವಾಡಲು ಹೋಗಿದ್ದ. ಗೆಳೆಯರ ಜೊತೆ ಕ್ರಿಕೆಟ್ ಆಡುತ್ತಿದ್ದ ಹುಡುಗ ಆನಂತರ ಮನೆಗೆ ಬಂದಿರಲಿಲ್ಲ.

ಈ ಬಗ್ಗೆ ಜೊತೆಗಿದ್ದ ಗೆಳೆಯರಲ್ಲಿ ಹೆತ್ತವರು ವಿಚಾರಿಸಿದ್ದು ತಮಗೇನೂ ಗೊತ್ತಿಲ್ಲ ಎಂದಿದ್ದರು. ಇಂದು ಬೆಳಗ್ಗೆ ತಾಯಿ ಆಶಾ ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಸಂಜೆ ವೇಳೆಗೆ ಅದೇ ಹುಡುಗನ ಶವ ಹೊಯ್ಗೆ ಬಜಾರ್ ಬಳಿ ನದಿ ತೀರದಲ್ಲಿ ಪತ್ತೆಯಾಗಿದೆ.
ಆಡಲು ಹೋಗಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಕಡಿಮೆ. ಅಲ್ಲದೆ, ಪ್ಯಾಂಟ್ ಹಾಕ್ಕೊಂಡು ಹೋಗಿದ್ದವನು ಚಡ್ಡಿಯಲ್ಲಿ ಪತ್ತೆಯಾಗಿದ್ದಾನೆ. ಹೀಗಾಗಿ ಸ್ನಾನಕ್ಕಿಳಿದು ಮೃತಪಟ್ಟಿದ್ದಾನೆಯೇ, ಬೇರೆ ಏನಾದರೂ ಕೈವಾಡ ಇದೆಯೇ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Mangalore 16 year old boy body found in Netravathi river. The deceased has been identified as Dhrushyanth. He was a 9th STD student and was said to be missing since Sunday after he had been to play cricket with his friends.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm