ಬ್ರೇಕಿಂಗ್ ನ್ಯೂಸ್
28-02-22 11:45 pm Mangalore Correspondent ಕರಾವಳಿ
ಮಂಗಳೂರು, ಫೆ. 28 : ಶಿರಾಡಿ ಘಾಟ್ ಕರಾವಳಿ ಭಾಗದ ಪ್ರಮುಖ ಸಂಚಾರ ಮಾರ್ಗವಾಗಿದ್ದು, ಇಲ್ಲಿ ಏಳು ಸುರಂಗ ಸಹಿತ ಹೆದ್ದಾರಿ ಮಾರ್ಗವನ್ನು 14 ಸಾವಿರ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಅದಕ್ಕಾಗಿ ತಜ್ಞರ ವರದಿ ಪಡೆದು ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ಧಪಡಿಸಲಾಗುವುದು ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಕುಲಶೇಖರದ ಕೊರ್ಡೆಲ್ ಹಾಲ್ನಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 3163 ಕೋಟಿ ರೂ. ಮೊತ್ತದಲ್ಲಿ 164 ಕಿ.ಮೀ. ಉದ್ದದ 15 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತ್ ಮಾಲಾ ಯೋಜನೆಯಡಿ ಎರಡು ಸಾವಿರ ಕೋಟಿ ರೂ. ವೆಚ್ಚದಲ್ಲಿ ನವಮಂಗಳೂರು, ಕಾರವಾರ ಬಂದರುಗಳ ಅಭಿವೃದ್ಧಿ ಪಡಿಸಲಾಗುವುದು. ಬೆಂಗಳೂರು- ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯ 26 ಕಿ.ಮೀ. ರಸ್ತೆಯನ್ನು ಚತುಷ್ಪಥವಾಗಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ದ.ಕ. ಜಿಲ್ಲೆಯಲ್ಲಿ 14 ರೈಲ್ವೇ ಮೇಲ್ಸೇತುವೆ (ಆರ್ಒಬಿ)ಗಳಿಗೆ ಮಂಜೂರಾತಿ ನೀಡುತ್ತಿದ್ದು, ಅದರ ಪಟ್ಟಿಯನ್ನು ಸಂಸದ ನಳಿನ್ ಕುಮಾರ್ಗೆ ನೀಡುವುದಾಗಿ ಹೇಳಿದ ಅವರು, ಮಂಗಳೂರಿಗೆ ಶೀಘ್ರದಲ್ಲಿ ರಿಂಗ್ ರೋಡ್ ಸೌಲಭ್ಯ ಸಿಗಲಿದೆ, ನಂತೂರು ಫ್ಲೈಓವರ್ಗೂ ಅನುಮತಿ ನೀಡುವುದಾಗಿ ಗಡ್ಕರಿ ಹೇಳಿದರು.

ಸುರತ್ಕಲ್ ಟೋಲ್ ರದ್ದು ಬಗ್ಗೆ ದೆಹಲಿಯಲ್ಲಿ ಸಭೆ
ಮಂಗಳೂರು ಹೊರವಲಯದ ಸುರತ್ಕಲ್ ಟೋಲ್ ಪ್ಲಾಝಾ ರದ್ದುಗೊಳಿಸಲು ಕಾನೂನು ತೊಡಕುಗಳಿವೆ. ಈ ಸಮಸ್ಯೆ ಬಗೆಹರಿಸಲು ಶೀಘ್ರದಲ್ಲಿ ದೆಹಲಿಯಲ್ಲಿ ಸಭೆ ಕರೆಯಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್, ಸುರತ್ಕಲ್ ನಲ್ಲಿರುವ ಟೋಲ್ ಗೇಟ್ ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಟೋಲ್ ಗೇಟನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ವಿನಂತಿ ಮಾಡುತ್ತಿದ್ದೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಕೈಮುಗಿದು ಸಚಿವ ಗಡ್ಕರಿ ಅವರಲ್ಲಿ ಕೇಳಿಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಈ ಕಾರ್ಯಕ್ರಮದ ಸುದ್ದಿಗೋಷ್ಟಿಯಲ್ಲಿ ಟೋಲ್ ಗೇಟ್ ರದ್ದುಗೊಳಿಸಲು ಕಾನೂನು ತೊಡಕಿದೆ, ರದ್ದುಗೊಳಿಸುತ್ತೇನೆ ಎಂದು ತಾನು ಹೇಳಿಯೇ ಇಲ್ಲ ಎಂದಿದ್ದರು. ಜನಾಭಿಪ್ರಾಯ, ಒತ್ತಡಕ್ಕೆ ಮಣಿದ ಸಂಸದ ನಳಿನ್ ಕುಮಾರ್, ಇಂದು ಸಚಿವ ಗಡ್ಕರಿ ಅವರಲ್ಲಿ ಕೈಮುಗಿದು ಕೇಳಿಕೊಂಡಿದ್ದು ವಿಶೇಷವಾಗಿತ್ತು.
Mangalore MP Nalin Kumar Kateel requests Gadkari to close Surathkal Toll also 14 thousand crores sanctioned for shiradhi that re construction. A continuous protest was held against illegal toll at surathkal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm