ಬ್ರೇಕಿಂಗ್ ನ್ಯೂಸ್
02-03-22 02:24 pm Udupi Correspondent ಕರಾವಳಿ
ಉಡುಪಿ, ಮಾ.2: ಕೊಲೆಯಾದ ಹರ್ಷನ ಕುಟುಂಬಕ್ಕೆ ಟಿಕೆಟ್ ಕೊಟ್ಟರೆ ಅಭ್ಯರ್ಥಿ ನಿಲ್ಲಿಸಲ್ಲ ಎಂದು ಕಾಂಗ್ರೆಸ್ ನಾಯಕರು ಟಾಂಗ್ ನೀಡಿರುವುದಕ್ಕೆ ಗರಂ ಆಗಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಟಿಕೆಟ್ ಬಗ್ಗೆ ಹೇಳುವುದಕ್ಕೆ ಕಾಂಗ್ರೆಸಿಗರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.
ಯಾವುದೇ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ಕೊಡಬೇಕು ಎಂದು ನಿರ್ಧರಿಸಲು ನಮ್ಮ ಹೈಕಮಾಂಡ್ ಇದೆ. ಅದರ ಬಗ್ಗೆ ನಮ್ಮ ಪಾರ್ಟಿ, ಹೈಕಮಾಂಡ್ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಕಾಂಗ್ರೆಸ್ ನವರು ನಮ್ಮ ವ್ಯವಸ್ಥೆ ಬಗ್ಗೆ ಹೇಳಬೇಕಾಗಿಲ್ಲ. ಹರ್ಷನ ಕುಟುಂಬದ ಪೂರ್ತಿ ಜವಾಬ್ದಾರಿಯನ್ನು ಪಕ್ಷ ಮತ್ತು ನಮ್ಮ ಸರಕಾರ ತೆಗೆದುಕೊಂಡಿದೆ. ಕೊಲೆ ಆರೋಪಿಗಳನ್ನು ಬಂಧಿಸಿದ್ದು ಇನ್ನೆಂದೂ ಈ ರೀತಿಯ ಕೊಲೆಗಳು ಆಗದಂತೆ ನೋಡಿಕೊಳ್ಳುವ ಕೆಲಸವನ್ನು ನಮ್ಮ ಸರಕಾರ ಮಾಡುತ್ತದೆ.

ಕಾಂಗ್ರೆಸ್ ಸರಕಾರದ ಅವಧಿಯಲ್ಲಿ 23 ಹಿಂದು ಕಾರ್ಯಕರ್ತರ ಹತ್ಯೆಗಳಾಗಿದ್ದವು. ಇವರು ಎಷ್ಟು ಮಂದಿಗೆ ಸಾಂತ್ವನ ಹೇಳಿದ್ದಾರೆ. ಎಷ್ಟು ಪರಿಹಾರ ಕೊಟ್ಟಿದ್ದಾರೆ, ಆ ಮನೆಯವರಿಗೆ ಏನು ವ್ಯವಸ್ಥೆ ಮಾಡಿದ್ದಾರೆ ಅನ್ನೋದು ರಾಜ್ಯದ ಜನರಿಗೆ ಗೊತ್ತಿದೆ. ಆಗ ಕಾಂಗ್ರೆಸಿಗರ ಹೇಳಿಕೆ ಏನಿತ್ತು ಎಂಬುದನ್ನು ನೆನಪಿಸಿಕೊಳ್ಳಬೇಕು. ಸರಣಿ ಹತ್ಯೆಗಳು ಆಗಿದ್ದರೂ ನೀವು ಮೂಲಭೂತವಾದಿ ಸಂಘಟನೆಯವರಿಗೆ ಬೆಂಬಲ ನೀಡಿದ್ದೀರಿ. ನೀವು ಅವರ ಕೇಸ್ ವಾಪಾಸು ಪಡೆಯದೇ ಇರುತ್ತಿದ್ದರೆ, ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ನೀಡದೇ ಇರುತ್ತಿದ್ದರೆ ಇವತ್ತು ಹರ್ಷನ ಕೊಲೆ ಕೃತ್ಯ ನಡೆಯುತ್ತಿರಲಿಲ್ಲ ಎಂದು ಸಚಿವ ಕೋಟ ವಾಗ್ದಾಳಿ ನಡೆಸಿದರು.
ನಮ್ಮ ಸರಕಾರ ಹರ್ಷನ ಕುಟುಂಬಕ್ಕೆ ಸಂಪೂರ್ಣ ನೆರವು ನೀಡಿದೆ. ಹರ್ಷ ಪ್ರಕರಣದಲ್ಲಿ ಏನೇನು ಮಾಡಬೇಕೋ ಅದನ್ನು ಮಾಡುತ್ತೇವೆ. ಕೊಲೆ ಕೃತ್ಯದ ಹಿಂದಿನ ಷಡ್ಯಂತ್ರವನ್ನು ಹೊರಗೆ ತರುತ್ತೇವೆ. ಯಾವತ್ತೂ ಅವರು ಕೈ ಎತ್ತದಂತೆ ಮಾಡುತ್ತೇವೆ. ಆರೋಪಿಗಳಿಗೆ ರಿಯಾಯಿತಿ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೋಟ ಹೇಳಿದರು.
Who are congress leaders to plead for ticket for Harsha family slams Kota poojary in Udupi.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm