ಬ್ರೇಕಿಂಗ್ ನ್ಯೂಸ್
02-03-22 02:24 pm Udupi Correspondent ಕರಾವಳಿ
ಉಡುಪಿ, ಮಾ.2: ಕೊಲೆಯಾದ ಹರ್ಷನ ಕುಟುಂಬಕ್ಕೆ ಟಿಕೆಟ್ ಕೊಟ್ಟರೆ ಅಭ್ಯರ್ಥಿ ನಿಲ್ಲಿಸಲ್ಲ ಎಂದು ಕಾಂಗ್ರೆಸ್ ನಾಯಕರು ಟಾಂಗ್ ನೀಡಿರುವುದಕ್ಕೆ ಗರಂ ಆಗಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಟಿಕೆಟ್ ಬಗ್ಗೆ ಹೇಳುವುದಕ್ಕೆ ಕಾಂಗ್ರೆಸಿಗರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.
ಯಾವುದೇ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ಕೊಡಬೇಕು ಎಂದು ನಿರ್ಧರಿಸಲು ನಮ್ಮ ಹೈಕಮಾಂಡ್ ಇದೆ. ಅದರ ಬಗ್ಗೆ ನಮ್ಮ ಪಾರ್ಟಿ, ಹೈಕಮಾಂಡ್ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಕಾಂಗ್ರೆಸ್ ನವರು ನಮ್ಮ ವ್ಯವಸ್ಥೆ ಬಗ್ಗೆ ಹೇಳಬೇಕಾಗಿಲ್ಲ. ಹರ್ಷನ ಕುಟುಂಬದ ಪೂರ್ತಿ ಜವಾಬ್ದಾರಿಯನ್ನು ಪಕ್ಷ ಮತ್ತು ನಮ್ಮ ಸರಕಾರ ತೆಗೆದುಕೊಂಡಿದೆ. ಕೊಲೆ ಆರೋಪಿಗಳನ್ನು ಬಂಧಿಸಿದ್ದು ಇನ್ನೆಂದೂ ಈ ರೀತಿಯ ಕೊಲೆಗಳು ಆಗದಂತೆ ನೋಡಿಕೊಳ್ಳುವ ಕೆಲಸವನ್ನು ನಮ್ಮ ಸರಕಾರ ಮಾಡುತ್ತದೆ.

ಕಾಂಗ್ರೆಸ್ ಸರಕಾರದ ಅವಧಿಯಲ್ಲಿ 23 ಹಿಂದು ಕಾರ್ಯಕರ್ತರ ಹತ್ಯೆಗಳಾಗಿದ್ದವು. ಇವರು ಎಷ್ಟು ಮಂದಿಗೆ ಸಾಂತ್ವನ ಹೇಳಿದ್ದಾರೆ. ಎಷ್ಟು ಪರಿಹಾರ ಕೊಟ್ಟಿದ್ದಾರೆ, ಆ ಮನೆಯವರಿಗೆ ಏನು ವ್ಯವಸ್ಥೆ ಮಾಡಿದ್ದಾರೆ ಅನ್ನೋದು ರಾಜ್ಯದ ಜನರಿಗೆ ಗೊತ್ತಿದೆ. ಆಗ ಕಾಂಗ್ರೆಸಿಗರ ಹೇಳಿಕೆ ಏನಿತ್ತು ಎಂಬುದನ್ನು ನೆನಪಿಸಿಕೊಳ್ಳಬೇಕು. ಸರಣಿ ಹತ್ಯೆಗಳು ಆಗಿದ್ದರೂ ನೀವು ಮೂಲಭೂತವಾದಿ ಸಂಘಟನೆಯವರಿಗೆ ಬೆಂಬಲ ನೀಡಿದ್ದೀರಿ. ನೀವು ಅವರ ಕೇಸ್ ವಾಪಾಸು ಪಡೆಯದೇ ಇರುತ್ತಿದ್ದರೆ, ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ನೀಡದೇ ಇರುತ್ತಿದ್ದರೆ ಇವತ್ತು ಹರ್ಷನ ಕೊಲೆ ಕೃತ್ಯ ನಡೆಯುತ್ತಿರಲಿಲ್ಲ ಎಂದು ಸಚಿವ ಕೋಟ ವಾಗ್ದಾಳಿ ನಡೆಸಿದರು.
ನಮ್ಮ ಸರಕಾರ ಹರ್ಷನ ಕುಟುಂಬಕ್ಕೆ ಸಂಪೂರ್ಣ ನೆರವು ನೀಡಿದೆ. ಹರ್ಷ ಪ್ರಕರಣದಲ್ಲಿ ಏನೇನು ಮಾಡಬೇಕೋ ಅದನ್ನು ಮಾಡುತ್ತೇವೆ. ಕೊಲೆ ಕೃತ್ಯದ ಹಿಂದಿನ ಷಡ್ಯಂತ್ರವನ್ನು ಹೊರಗೆ ತರುತ್ತೇವೆ. ಯಾವತ್ತೂ ಅವರು ಕೈ ಎತ್ತದಂತೆ ಮಾಡುತ್ತೇವೆ. ಆರೋಪಿಗಳಿಗೆ ರಿಯಾಯಿತಿ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೋಟ ಹೇಳಿದರು.
Who are congress leaders to plead for ticket for Harsha family slams Kota poojary in Udupi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm