ಬ್ರೇಕಿಂಗ್ ನ್ಯೂಸ್
20-09-20 05:01 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 20: ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ - ಮೂಡುಬಿದ್ರೆ ಹೋಬಳಿಯಲ್ಲಿ ಮಳೆಯ ತೀವ್ರತೆ ಹೆಚ್ಚಿದ್ದು, ಶಾಂಭವಿ ನದಿಯಲ್ಲಿ ನೆರೆ ಕಾಣಿಸಿಕೊಂಡಿದೆ. ಕಟೀಲು ಭಾಗದಿಂದ ಹರಿಯುವ ಶಾಂಭವಿ ನದಿ ಅಪಾಯ ಮಟ್ಟ ಮೀರಿ ಹರಿದಿದ್ದು, ಆಸುಪಾಸಿನಲ್ಲಿ ಕೃಷಿಭೂಮಿಗೆ ನೀರು ನುಗ್ಗಿದೆ.
ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲಕ್ಕೆ ನೀರು ನುಗ್ಗಿದ್ದು, ದೇವಸ್ಥಾನ ಜಲಾವೃತವಾಗಿದೆ. ಹಾಗೆಯೇ ಶಿಮಂತೂರು ಆದಿಜನಾರ್ದನ ದೇವಸ್ಥಾನಕ್ಕೂ ನೀರು ನುಗ್ಗಿದ್ದು, ಅರ್ಚಕರಿಗೂ ದೇಗುಲದ ಅಂಗಣ ಪ್ರವೇಶಿಸುವುದು ಕಷ್ಟಕರ ಆಗಿತ್ತು. ಬೆಳಗ್ಗಿನಿಂದಲೇ ನೆರೆ ನೀರು ನುಗ್ಗತೊಡಗಿದ್ದು, ಮುಲ್ಕಿ ಹೋಬಳಿಯ ಆಸುಪಾಸಿನಲ್ಲಿ ಹಲವೆಡೆ ಕೃಷಿ ಗದ್ದೆಗಳು, ಅಡಿಕೆ ತೋಟಗಳು ಜಲಾವೃತ ಆಗಿವೆ. ಅಲ್ಲದೆ, ಶಿಮಂತೂರು, ತೋಕೂರು, ಕಿಲೆಂಜಾರು ಪರಿಸರದಲ್ಲಿ ನೆರೆ ಕಾಣಿಸಿಕೊಂಡು ಒಳರಸ್ತೆಗಳೆಲ್ಲ ಹೊಳೆಯ ರೂಪ ಪಡೆದಿತ್ತು. ಸ್ಥಳೀಯರು ನಾಡದೋಣಿಗಳನ್ನು ಬಳಸಿ, ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದ್ದಾರೆ. ಉಡುಪಿ ಜಿಲ್ಲೆಗೆ ಹೊಂದಿಕೊಂಡಿರುವ ಮೂಲ್ಕಿ ಹೋಬಳಿಗೆ ಅತ್ತ ಪಡುಬಿದ್ರಿ ಕಡೆಯಿಂದಲೂ ನೀರು ನುಗ್ಗಿದ್ದರಿಂದ ನೆರೆನೀರು ಹರಿಯಲು ಜಾಗ ಇಲ್ಲದಾಗಿತ್ತು. ಈ ಭಾಗದಲ್ಲಿ ಹಲವಾರು ಮನೆಗಳಿಗೆ ನೆರೆನೀರು ನುಗ್ಗಿತ್ತು.







ನಿರಂತರ ಮಳೆಯಿಂದಾಗಿ ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ ಅಬ್ದುಲ್ಲ ಎಂಬವರ ಮನೆಗೆ ಗುಡ್ಡ ಕುಸಿದು ಬಿದ್ದಿದೆ. ಗುಡ್ಡ ಕುಸಿತದಿಂದಾಗಿ ಮನೆ ಸಂಪೂರ್ಣ ನೆಲಸಮವಾಗಿದ್ದು, ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬಜ್ಪೆ ವಿಮಾನ ನಿಲ್ದಾಣದಿಂದ ಹೊರಬರುವ ಕೆಂಜಾರಿನಲ್ಲಿ ರಸ್ತೆಗೆ ಗುಡ್ಡ ಕುಸಿದು ಸಂಚಾರ ಸ್ಥಗಿತವಾಗಿದೆ. ಏರ್ಪೋರ್ಟ್ ನಿಂದ ಹೊರಬರುವ ರಸ್ತೆಯನ್ನು ಬ್ಲಾಕ್ ಮಾಡಿದ್ದು, ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನು ಪಡೀಲಿನಲ್ಲಿ ರೈಲ್ವೇ ಹಳಿಗೆ ಗುಡ್ಡ ಕುಸಿದು ಬಿದ್ದಿದ್ದು ಮಂಗಳೂರು – ಬೆಂಗಳೂರು ರೈಲು ಸಂಚಾರಕ್ಕೆ ತೊಡಕಾಗಿದೆ. ಬೆಳಗ್ಗೆ ಮಣ್ಣು ಕುಸಿದು ಬಿದ್ದಿದ್ದು ಕೂಡಲೇ ರೈಲ್ವೇ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದ್ದಾರೆ.
ಮಂಗಳೂರು ಭಾಗದಲ್ಲಿ ಮಳೆಯ ತೀವ್ರತೆ ಕಡಿಮೆ ಇದ್ದರೂ, ನಿರಂತರವಾಗಿ ತುಂತುರು ಮಳೆಯಾಗುತ್ತಿದೆ. ಇದರಿಂದ ಮಣ್ಣು ಸಡಿಲಗೊಂಡು ಗುಡ್ಡ ಕುಸಿತದಂತಹ ಪ್ರಕರಣಗಳು ನಡೆಯುತ್ತಿದೆ. ಇನ್ನೂ ಎರಡು ದಿನ ಹೀಗೆಯೇ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Join our WhatsApp group for latest news updates
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am