ಬ್ರೇಕಿಂಗ್ ನ್ಯೂಸ್
03-03-22 10:42 am Mangalore Correspondent ಕರಾವಳಿ
ಮಂಗಳೂರು, ಮಾ. 3: ರಾಜ್ಯ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆ ವಿರುದ್ಧ ಮತ್ತು ರಾಜ್ಯದಲ್ಲಿ ಕ್ರೈಸ್ತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯವನ್ನು ಖಂಡಿಸಿ ಮಂಗಳೂರು ನಗರ ಸೇರಿ ಜಿಲ್ಲೆಯಾದ್ಯಂತ ಕ್ರಿಸ್ತಿಯನ್ನರು ಚರ್ಚ್ ಗಳ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಕೆಥೋಲಿಕ್ ಸಭಾ ಮಂಗಳೂರು ಸಮಿತಿ ಹಾಗೂ ದ.ಕ. ಜಿಲ್ಲೆಯ ಎಲ್ಲ ಕಡೆಯ ಕೆಥೋಲಿಕ್ ಸಭಾ ಘಟಕಗಳ ನೇತೃತ್ವದಲ್ಲಿ ದ.ಕ. ಜಿಲ್ಲೆಯ ಎಲ್ಲಾ ಚರ್ಚುಗಳ ಮುಂದಿನ ರಸ್ತೆ , ಹೆದ್ದಾರಿಗಳಲ್ಲಿ ಏಕಕಾಲದಲ್ಲಿ ಮೊಂಬತ್ತಿ ಮೆರವಣಿಗೆ, ಪ್ರತಿಭಟನಾ ಧರಣಿ ನಡೆಸಲಾಗಿದೆ. ರಾಜ್ಯ ಸರಕಾರದ ಮತಾಂತರ ನಿಷೇಧ ಕಾಯ್ದೆ ವಿರುದ್ಧ ಅಭಿಯಾನ ರೂಪದಲ್ಲಿ ರಸ್ತೆ ಬದಿ ಜನರು ಭಿತ್ತಿಪತ್ರಗಳನ್ನು ಹಿಡಿದು ಧರಣಿ ನಡೆಸಿದರು. ಇತ್ತೀಚೆಗೆ ಕಾವೂರಿನ ಪಂಜಿಮೊಗರಿನಲ್ಲಿ 40 ವರ್ಷಗಳ ಹಿಂದಿನ ಕ್ರೈಸ್ತ ಪ್ರಾರ್ಥನಾ ಮಂದಿರದ ಧ್ವಂಸ, ಬೆಂಗಳೂರಿನ ಬೆಟ್ಟವೊಂದರ ಮೇಲಿದ್ದ ಯೇಸುಕ್ರಿಸ್ತರ ಮೂರ್ತಿಯ ಧ್ವಂಸ ಇತ್ಯಾದಿ ವಿರುದ್ಧ ಸಾವಿರಾರು ಕ್ರೈಸ್ತರು ಭಿತ್ತಿಪತ್ರ ಪ್ರದರ್ಶಿಸಿ, ಮೊಂಬತ್ತಿ ಉರಿಸಿ ವೌನ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಸೇರಿದ್ದವರು ಮಾನವ ಸರಪಳಿ ರಚಿಸಿ, ಒಗ್ಗಟ್ಟು ಪ್ರದರ್ಶಿಸಿದರು. ಮಂಗಳೂರಿನ ಬೆಂದೂರು, ಬಿಜೈ, ಮಿಲಾಗ್ರಿಸ್, ಬೋಂದೆಲ್ ಸೇರಿ ಎಲ್ಲ ಚರ್ಚ್ ಗಳ ಮುಂದಿನ ರಸ್ತೆಗಳಲ್ಲಿ ಪ್ರತಿಭಟನೆ ನಡೆದಿದ್ದು ಆಯಾ ಭಾಗದ ಕ್ರೈಸ್ತ ಧರ್ಮಗುರುಗಳು, ಭಗಿನಿಯರು ಮೊಂಬತ್ತಿ ಮೆರವಣಿಗೆಯಲ್ಲಿ ಪಾಲ್ಗೊಂಡರು.
ಬಿಷಪ್ ಪೀಟರ್ ಪೌಲ್ ಸಲ್ದಾನಾ ಪಾಲ್ಗೊಂಡಿದ್ದರು. ಕೆಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಅಧ್ಯಕ್ಷ ಸ್ಟ್ಯಾನ್ಲಿ ಲೋಬೋ ಮತ್ತು ಮಂಗಳೂರು ಧರ್ಮಪ್ರಾಂತದ ಪಿಆರ್ಓ ರಾಯ್ ಕ್ಯಾಸ್ಟಲಿನೋ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಸಂಜೆ 6ರಿಂದ 7ರ ವರೆಗೆ ಪ್ರತಿಭಟನಾ ಧರಣಿ ನಡೆಸಲಾಗಿದ್ದು ರಾಜ್ಯ ಸರಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ನಡೆದಿದೆ.
The Catholic Sabha, along with all its local branches in the district, held a candle light human chain on the roads and highways outside all the churches throughout Dakshina Kannada district on Wednesday, March 2 as a mark of peaceful protest against the Anti Conversion Bill proposed by the government of Karnataka. The protest began at 6 PM simultaneously in all the parishes including Rosario, Milagres, Bejai, Bendoor, Bondel and Neermarga.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm