ಬ್ರೇಕಿಂಗ್ ನ್ಯೂಸ್
08-03-22 09:41 am Mangalore Correspondent ಕರಾವಳಿ
ಉಳ್ಳಾಲ, ಮಾ.8: ಮಗಳ ಹುಟ್ಟಿದ ದಿನಕ್ಕೆ ಅದ್ದೂರಿ ಪಾರ್ಟಿ ಮಾಡೋಣ ಎನ್ನುತ್ತಿದ್ದ ತಂದೆಯೇ ಇಲ್ಲವಾಗಿದ್ದಾನೆ. ಹುಟ್ಟಿದ ದಿನದ ಬದಲು ತಂದೆಯ ತಿಥಿ ಕಾರ್ಯ ಮಾಡುವ ದೌರ್ಭಾಗ್ಯ ಆ ಕುಟುಂಬಕ್ಕೆ ಒದಗಿ ಬಂದಿದೆ. ಪತ್ನಿ ಮೇಲಿನ ಕೋಪದಲ್ಲಿ ಐದು ವರ್ಷದ ಪುಟ್ಟ ಕಂದಮ್ಮನನ್ನೇ ಮರೆತು ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಲ್ಯ ಕಣೀರು ತೋಟದ ಕಣೀರುಬೀಡು ಎಂಬಲ್ಲಿ ನಡೆದಿದೆ.
ಕಣೀರು ತೋಟ ನಿವಾಸಿ ಪ್ರವೀಣ್ ಪೂಜಾರಿ(34) ಯಾನೆ ಪವನ್ ಆತ್ಮಹತ್ಯೆಗೈದ ದುರ್ದೈವಿ. ಪ್ರವೀಣ್ ಖಾಸಗಿ ಬಸ್ಸಿನಲ್ಲಿ ಚೆಕ್ಕರ್ ಆಗಿ ಕೆಲಸ ನಿವರ್ಹಿಸುತ್ತಿದ್ದು ನಿನ್ನೆ ಸಂಜೆ 6 ಗಂಟೆಗೆ ಮನೆಗೆ ಬಂದವರು ಕೋಣೆಯೊಳಗೆ ತೆರಳಿದ್ದರು. ಈ ವೇಳೆ ಪ್ರವೀಣ್ ತಾಯಿ ಮನೆ ಹೊರಗಡೆ ಬೀಡಿ ಕಟ್ಟುತ್ತಿದ್ದರೆನ್ನಲಾಗಿದೆ. ಸಂಜೆ 7.30 ಗಂಟೆಗೆ ಪತ್ನಿ ಕೆಲಸದಿಂದ ಮರಳಿದಾಗ ಕೋಣೆಯೊಳಗಿನ ಪಕ್ಕಾಸಿಗೆ ಪ್ರವೀಣ್ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಪ್ರವೀಣ್ ಅವರನ್ನ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದರು. ಆತ್ಮಹತ್ಯೆಗೆ ದಾಂಪತ್ಯ ಕಲಹವೇ ಕಾರಣ ಎಂದು ಶಂಕಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮಗಳ ಬರ್ತ್ ಡೇಯಂದೇ ತಿಥಿಕಾರ್ಯ !
ಪ್ರವೀಣ್ ಪ್ರೇಮ ವಿವಾಹವಾಗಿದ್ದು ದಂಪತಿಗೆ ಐದು ವರ್ಷದ ಮುದ್ದಾದ ಹೆಣ್ಮಗು ಇದೆ. ಮುಂದಿನ ವಾರ ಮಗುವಿನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತೇನೆಂದು ಹೇಳುತ್ತಿದ್ದ ಪ್ರವೀಣ್ ಆತ್ಮಹತ್ಯೆಗೈದಿದ್ದು ಮಗುವಿನ ಹುಟ್ಟುದಿನದಂದೇ ತಂದೆಯ ತಿಥಿ ಮಾಡುವ ದೌರ್ಭಾಗ್ಯ ಒದಗಿಬಂದಿದೆ.
Mangalore 34 year old man commits suicide on the day of his daughters birthday in Ullala. The deceased has been identified as Praveen Poojary. Some family issue is the reason for this extreme step it is said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm