ಬ್ರೇಕಿಂಗ್ ನ್ಯೂಸ್
08-03-22 09:41 am Mangalore Correspondent ಕರಾವಳಿ
ಉಳ್ಳಾಲ, ಮಾ.8: ಮಗಳ ಹುಟ್ಟಿದ ದಿನಕ್ಕೆ ಅದ್ದೂರಿ ಪಾರ್ಟಿ ಮಾಡೋಣ ಎನ್ನುತ್ತಿದ್ದ ತಂದೆಯೇ ಇಲ್ಲವಾಗಿದ್ದಾನೆ. ಹುಟ್ಟಿದ ದಿನದ ಬದಲು ತಂದೆಯ ತಿಥಿ ಕಾರ್ಯ ಮಾಡುವ ದೌರ್ಭಾಗ್ಯ ಆ ಕುಟುಂಬಕ್ಕೆ ಒದಗಿ ಬಂದಿದೆ. ಪತ್ನಿ ಮೇಲಿನ ಕೋಪದಲ್ಲಿ ಐದು ವರ್ಷದ ಪುಟ್ಟ ಕಂದಮ್ಮನನ್ನೇ ಮರೆತು ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಲ್ಯ ಕಣೀರು ತೋಟದ ಕಣೀರುಬೀಡು ಎಂಬಲ್ಲಿ ನಡೆದಿದೆ.
ಕಣೀರು ತೋಟ ನಿವಾಸಿ ಪ್ರವೀಣ್ ಪೂಜಾರಿ(34) ಯಾನೆ ಪವನ್ ಆತ್ಮಹತ್ಯೆಗೈದ ದುರ್ದೈವಿ. ಪ್ರವೀಣ್ ಖಾಸಗಿ ಬಸ್ಸಿನಲ್ಲಿ ಚೆಕ್ಕರ್ ಆಗಿ ಕೆಲಸ ನಿವರ್ಹಿಸುತ್ತಿದ್ದು ನಿನ್ನೆ ಸಂಜೆ 6 ಗಂಟೆಗೆ ಮನೆಗೆ ಬಂದವರು ಕೋಣೆಯೊಳಗೆ ತೆರಳಿದ್ದರು. ಈ ವೇಳೆ ಪ್ರವೀಣ್ ತಾಯಿ ಮನೆ ಹೊರಗಡೆ ಬೀಡಿ ಕಟ್ಟುತ್ತಿದ್ದರೆನ್ನಲಾಗಿದೆ. ಸಂಜೆ 7.30 ಗಂಟೆಗೆ ಪತ್ನಿ ಕೆಲಸದಿಂದ ಮರಳಿದಾಗ ಕೋಣೆಯೊಳಗಿನ ಪಕ್ಕಾಸಿಗೆ ಪ್ರವೀಣ್ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಪ್ರವೀಣ್ ಅವರನ್ನ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದರು. ಆತ್ಮಹತ್ಯೆಗೆ ದಾಂಪತ್ಯ ಕಲಹವೇ ಕಾರಣ ಎಂದು ಶಂಕಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮಗಳ ಬರ್ತ್ ಡೇಯಂದೇ ತಿಥಿಕಾರ್ಯ !
ಪ್ರವೀಣ್ ಪ್ರೇಮ ವಿವಾಹವಾಗಿದ್ದು ದಂಪತಿಗೆ ಐದು ವರ್ಷದ ಮುದ್ದಾದ ಹೆಣ್ಮಗು ಇದೆ. ಮುಂದಿನ ವಾರ ಮಗುವಿನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತೇನೆಂದು ಹೇಳುತ್ತಿದ್ದ ಪ್ರವೀಣ್ ಆತ್ಮಹತ್ಯೆಗೈದಿದ್ದು ಮಗುವಿನ ಹುಟ್ಟುದಿನದಂದೇ ತಂದೆಯ ತಿಥಿ ಮಾಡುವ ದೌರ್ಭಾಗ್ಯ ಒದಗಿಬಂದಿದೆ.
Mangalore 34 year old man commits suicide on the day of his daughters birthday in Ullala. The deceased has been identified as Praveen Poojary. Some family issue is the reason for this extreme step it is said.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm