ಬ್ರೇಕಿಂಗ್ ನ್ಯೂಸ್
08-03-22 01:29 pm Mangalore Correspondent ಕರಾವಳಿ
ಉಳ್ಳಾಲ, ಮಾ.8: ಖಾಸಗಿ ಜಾಗದಲ್ಲಿ ತೆರೆದ ಸ್ಥಿತಿಯಲ್ಲಿರುವ ಆಳ ಬಾವಿಯೊಂದಕ್ಕೆ ಮೇಯಲು ಬಂದ ಹಸು ಮತ್ತು ಕರು ಬಿದ್ದು ಒದ್ದಾಡಿದ ಪ್ರಸಂಗ ನಡೆದಿದ್ದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟು ಮೂಕ ಪ್ರಾಣಿಗಳನ್ನ ಮೇಲಕ್ಕೆತ್ತಿ ಮರುಜೀವ ನೀಡಿದ ಘಟನೆ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿ ನಡೆದಿದೆ.
ಸೋಮೇಶ್ವರ ಗ್ರಾಮದ ಪಿಲಾರು ಮಹಾಲಕ್ಮೀ ಮಂದಿರದ ಬಳಿ ಮಹಮ್ಮದ್ ಹ್ಯಾರಿಸ್ ಎಂಬವರಿಗೆ ಸೇರಿದ ಖಾಲಿ ಜಮೀನಿನಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಹ್ಯಾರಿಸ್ ಅವರ ಖಾಲಿ ಜಮೀನಿಗೆ ಆವರಣ ಗೋಡೆಯನ್ನೂ ನಿರ್ಮಿಸಿಲ್ಲ. ಕಳೆದ ಹತ್ತು ವರುಷದಿಂದ ಜಮೀನಿನಲ್ಲಿರುವ ಆಳ ಬಾವಿಗೂ ಆವರಣ ಗೋಡೆ ನಿರ್ಮಿಸಿಲ್ಲ. ಬಾವಿಯ ಸುತ್ತಲೂ ಗಿಡ ಗಂಟೆಗಳು ಬೆಳೆದಿದ್ದು ಬಾವಿಯ ಇರುವಿಕೆ ಮೂಕ ಪ್ರಾಣಿ ಬಿಡಿ ಮನುಷ್ಯರಿಗೂ ತಿಳಿಯದಾಗಿತ್ತು. ಸೋಮವಾರ ಸಂಜೆ ಚೆಂಬುಗುಡ್ಡೆಯ ಸಾಹುಲ್ ಎಂಬವರ ಸಾಕು ದನ ಮತ್ತು ಅದರ ಕರು ಇಲ್ಲಿಗೆ ಮೇಯಲು ಬಂದು ಆಳ ಬಾವಿಯೊಳಗೆ ಬಿದ್ದಿದೆ. ಬಾವಿಯೊಳಗೆ ಕರು, ಹಸು ಬಿದ್ದುದನ್ನ ಹೊರಗಿದ್ದ ಕರುವು ಕಂಡಿದ್ದು ರೋದಿಸಲು ಆರಂಭಿಸಿದೆ. ಪಶುಗಳ ರೋದನದಿಂದ ಪರಿಸರ ವಾಸಿಗಳಿಗೆ ವಿಚಾರ ತಿಳಿದು ಅಗ್ನಿ ಶಾಮಕ ದಳವರನ್ನ ಸ್ಥಳಕ್ಕೆ ಕರೆಸಿದ್ದಾರೆ.




ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಹಸು ಮತ್ತು ಕರುವನ್ನ ಮೇಲಕ್ಕೆತ್ತಿದ್ದಾರೆ. ಹಸು ಸ್ವಲ್ಪ ಅಸ್ವಸ್ಥಗೊಂಡಿದ್ದು ಕರು ಆರೋಗ್ಯವಾಗಿದೆ. ಆವರಣ ಗೋಡೆ ಇಲ್ಲದ ಜಾಗದಲ್ಲಿ ಬಾವಿಯನ್ನ ತೆರೆದಿಟ್ಟು ಉದ್ಧಟತನ ತೋರುತ್ತಿರುವ ಮಹಮ್ಮದ್ ಹ್ಯಾರಿಸ್ ವಿರುದ್ಧ ಸಂಬಂಧಪಟ್ಟ ಸೋಮೇಶ್ವರ ಪುರಸಭಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ಇಲ್ಲಿ ಮುಂದೆಯೂ ಅನಾಹುತಗಳು ನಡೆಯುವ ಸಾಧ್ಯತೆಗಳು ಇದೆ.
Cow and calf fall into the open well at Pillar in Mangalore fire service come to rescue. As the owners haven't created any fense or wall surrounding the well accidentally both Cow and Calf haven into the deep open well.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm