ಬ್ರೇಕಿಂಗ್ ನ್ಯೂಸ್
08-03-22 01:29 pm Mangalore Correspondent ಕರಾವಳಿ
ಉಳ್ಳಾಲ, ಮಾ.8: ಖಾಸಗಿ ಜಾಗದಲ್ಲಿ ತೆರೆದ ಸ್ಥಿತಿಯಲ್ಲಿರುವ ಆಳ ಬಾವಿಯೊಂದಕ್ಕೆ ಮೇಯಲು ಬಂದ ಹಸು ಮತ್ತು ಕರು ಬಿದ್ದು ಒದ್ದಾಡಿದ ಪ್ರಸಂಗ ನಡೆದಿದ್ದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟು ಮೂಕ ಪ್ರಾಣಿಗಳನ್ನ ಮೇಲಕ್ಕೆತ್ತಿ ಮರುಜೀವ ನೀಡಿದ ಘಟನೆ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿ ನಡೆದಿದೆ.
ಸೋಮೇಶ್ವರ ಗ್ರಾಮದ ಪಿಲಾರು ಮಹಾಲಕ್ಮೀ ಮಂದಿರದ ಬಳಿ ಮಹಮ್ಮದ್ ಹ್ಯಾರಿಸ್ ಎಂಬವರಿಗೆ ಸೇರಿದ ಖಾಲಿ ಜಮೀನಿನಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಹ್ಯಾರಿಸ್ ಅವರ ಖಾಲಿ ಜಮೀನಿಗೆ ಆವರಣ ಗೋಡೆಯನ್ನೂ ನಿರ್ಮಿಸಿಲ್ಲ. ಕಳೆದ ಹತ್ತು ವರುಷದಿಂದ ಜಮೀನಿನಲ್ಲಿರುವ ಆಳ ಬಾವಿಗೂ ಆವರಣ ಗೋಡೆ ನಿರ್ಮಿಸಿಲ್ಲ. ಬಾವಿಯ ಸುತ್ತಲೂ ಗಿಡ ಗಂಟೆಗಳು ಬೆಳೆದಿದ್ದು ಬಾವಿಯ ಇರುವಿಕೆ ಮೂಕ ಪ್ರಾಣಿ ಬಿಡಿ ಮನುಷ್ಯರಿಗೂ ತಿಳಿಯದಾಗಿತ್ತು. ಸೋಮವಾರ ಸಂಜೆ ಚೆಂಬುಗುಡ್ಡೆಯ ಸಾಹುಲ್ ಎಂಬವರ ಸಾಕು ದನ ಮತ್ತು ಅದರ ಕರು ಇಲ್ಲಿಗೆ ಮೇಯಲು ಬಂದು ಆಳ ಬಾವಿಯೊಳಗೆ ಬಿದ್ದಿದೆ. ಬಾವಿಯೊಳಗೆ ಕರು, ಹಸು ಬಿದ್ದುದನ್ನ ಹೊರಗಿದ್ದ ಕರುವು ಕಂಡಿದ್ದು ರೋದಿಸಲು ಆರಂಭಿಸಿದೆ. ಪಶುಗಳ ರೋದನದಿಂದ ಪರಿಸರ ವಾಸಿಗಳಿಗೆ ವಿಚಾರ ತಿಳಿದು ಅಗ್ನಿ ಶಾಮಕ ದಳವರನ್ನ ಸ್ಥಳಕ್ಕೆ ಕರೆಸಿದ್ದಾರೆ.




ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಹಸು ಮತ್ತು ಕರುವನ್ನ ಮೇಲಕ್ಕೆತ್ತಿದ್ದಾರೆ. ಹಸು ಸ್ವಲ್ಪ ಅಸ್ವಸ್ಥಗೊಂಡಿದ್ದು ಕರು ಆರೋಗ್ಯವಾಗಿದೆ. ಆವರಣ ಗೋಡೆ ಇಲ್ಲದ ಜಾಗದಲ್ಲಿ ಬಾವಿಯನ್ನ ತೆರೆದಿಟ್ಟು ಉದ್ಧಟತನ ತೋರುತ್ತಿರುವ ಮಹಮ್ಮದ್ ಹ್ಯಾರಿಸ್ ವಿರುದ್ಧ ಸಂಬಂಧಪಟ್ಟ ಸೋಮೇಶ್ವರ ಪುರಸಭಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ಇಲ್ಲಿ ಮುಂದೆಯೂ ಅನಾಹುತಗಳು ನಡೆಯುವ ಸಾಧ್ಯತೆಗಳು ಇದೆ.
Cow and calf fall into the open well at Pillar in Mangalore fire service come to rescue. As the owners haven't created any fense or wall surrounding the well accidentally both Cow and Calf haven into the deep open well.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm