ಬ್ರೇಕಿಂಗ್ ನ್ಯೂಸ್
21-09-20 06:26 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 21: ಉಡುಪಿಯಲ್ಲಿ ಎರಡು ದಿನಗಳಲ್ಲಿ ಸುರಿದ ದಾಖಲೆ ಪ್ರಮಾಣದ ಮಳೆ ಯಾವೆಲ್ಲ ಅನಾಹುತಗಳನ್ನು ಮಾಡಿದೆ ಅಂದರೆ ಅದನ್ನು ಊಹಿಸೋಕು ಸಾಧ್ಯವಿಲ್ಲ. ಅದಕ್ಕೆ ಒಂದು ಸಣ್ಣ ಉದಾಹರಣೆ ಕಾಪು ಬೀಚ್ ನಲ್ಲಿದ್ದ ಬ್ರಿಟಿಷರ ಕಾಲದ ದೀಪಸ್ತಂಭ ಬಳಿಯ ದೃಶ್ಯ.
ಕಾಪು ಬೀಚ್ ಬಳಿಯ ಲೈಟ್ ಹೌಸ್ ಕನ್ನಡ, ತುಳು ಸಿನಿಮಾ ಚಿತ್ರೀಕರಣಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ತಿದ್ದ ಜಾಗ. ಅಪೂರ್ವ ಸೌಂದರ್ಯದಿಂದ ವೀವ್ ಸ್ಪಾಟ್ ಆಗಿದ್ದ ಕಾಪು ದೀಪಸ್ತಂಭದತ್ತ ಇನ್ನು ಸುಳಿದಾಡುವುದು ಬಿಡಿ. ಅದರ ಬಳಿಗೆ ಹೋಗುವುದೇ ಡೇಂಜರ್ ಅನ್ನುವಂತಾಗಿದೆ. ಯಾಕಂದ್ರೆ, ಎರಡು ದಿನಗಳ ಮಳೆಯಿಂದ ಭೋರ್ಗರೆದ ನದಿಗಳು ಸಮುದ್ರ ಸೇರಲು ಜಾಗ ಸಾಲದೆ ಸಿಕ್ಕ ಸಿಕ್ಕ ಕಡೆಗಳಲ್ಲಿ ಸಮುದ್ರದತ್ತ ನುಗ್ಗಿದೆ. ಲೌಟ್ ಹೌಸ್ ಹಿಂಭಾಗದಿಂದ ಸಮುದ್ರ ಸೇರುತ್ತಿದ್ದ ನದಿ ತನ್ನ ಪಥವನ್ನೇ ಬದಲಿಸಿದ್ದು ದೀಪಸ್ತಂಭದತ್ತ ತೆರಳುವ ಕಾಲುದಾರಿಯನ್ನೇ ಕಬಳಿಸಿಕೊಂಡು ಮುಂಭಾಗದಿಂದ ಹರಿಯಲಾರಂಭಿಸಿದೆ. ಕಾಲು ದಾರಿ ಕೊಚ್ಚಿಹೋಗಿದ್ದು, ಎರಡೂ ಭಾಗಗಳಿಂದ ಸಮುದ್ರ ಕೊರೆತ ಉಂಟಾದಲ್ಲಿ ದೀಪಸ್ತಂಭವೇ ಸಮುದ್ರ ಪಾಲಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಕಾಪು ಬೀಚ್ ನಲ್ಲಿ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಲೈಟ್ ಹೌಸ್ನ ಹಿಂಭಾಗದಲ್ಲಿ ನದಿ ಸಮುದ್ರ ಸೇರ್ತಾ ಇತ್ತು. ಭಾರೀ ಮಳೆಯಿಂದಾಗಿ ನದಿ ಪಾತ್ರವೇ ಬದಲಾಗಿದ್ದು, ನೆರೆ ನೀರು ತನ್ನ ಪಥವನ್ನೇ ಬದಲಿಸಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕಾಪು ಬಳಿಯ ಪಡು ಗ್ರಾಮ, ಗರಡಿ ಪ್ರದೇಶ, ಸುಬ್ಬಯ್ಯ ತೋಟ, ಬೈರು ಗುತ್ತುತೋಟ ಸೇರಿದಂತೆ ಆಸುಪಾಸಿನ ಭಾಗದಲ್ಲಿ ಎಲ್ಲೆಂದರಲ್ಲಿ ಹರಿಯುತ್ತಿರುವ ನದಿ ನೀರು ಲೈಟ್ ಹೌಸ್ ಮುಂಭಾಗದಿಂದಲೇ ಸಮುದ್ರ ಸೇರುತ್ತಿದೆ. ಇದರಿಂದ ದೀಪಸ್ತಂಭದತ್ತ ಹೋಗಲು ದಾರಿ ಇಲ್ಲದಾಗಿದ್ದು, ಅಲ್ಲದೆ ನೆರೆನೀರು ಇದೇ ರೀತಿ ಹರಿದರೆ ಲೈಟ್ ಹೌಸ್ ಏರುವ ಮೆಟ್ಟಲುಗಳು ಕೊಚ್ಚಿ ಹೋಗುವ ಸಾಧ್ಯತೆ ಇದೆ.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm