ಬ್ರೇಕಿಂಗ್ ನ್ಯೂಸ್
21-09-20 06:26 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 21: ಉಡುಪಿಯಲ್ಲಿ ಎರಡು ದಿನಗಳಲ್ಲಿ ಸುರಿದ ದಾಖಲೆ ಪ್ರಮಾಣದ ಮಳೆ ಯಾವೆಲ್ಲ ಅನಾಹುತಗಳನ್ನು ಮಾಡಿದೆ ಅಂದರೆ ಅದನ್ನು ಊಹಿಸೋಕು ಸಾಧ್ಯವಿಲ್ಲ. ಅದಕ್ಕೆ ಒಂದು ಸಣ್ಣ ಉದಾಹರಣೆ ಕಾಪು ಬೀಚ್ ನಲ್ಲಿದ್ದ ಬ್ರಿಟಿಷರ ಕಾಲದ ದೀಪಸ್ತಂಭ ಬಳಿಯ ದೃಶ್ಯ.
ಕಾಪು ಬೀಚ್ ಬಳಿಯ ಲೈಟ್ ಹೌಸ್ ಕನ್ನಡ, ತುಳು ಸಿನಿಮಾ ಚಿತ್ರೀಕರಣಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ತಿದ್ದ ಜಾಗ. ಅಪೂರ್ವ ಸೌಂದರ್ಯದಿಂದ ವೀವ್ ಸ್ಪಾಟ್ ಆಗಿದ್ದ ಕಾಪು ದೀಪಸ್ತಂಭದತ್ತ ಇನ್ನು ಸುಳಿದಾಡುವುದು ಬಿಡಿ. ಅದರ ಬಳಿಗೆ ಹೋಗುವುದೇ ಡೇಂಜರ್ ಅನ್ನುವಂತಾಗಿದೆ. ಯಾಕಂದ್ರೆ, ಎರಡು ದಿನಗಳ ಮಳೆಯಿಂದ ಭೋರ್ಗರೆದ ನದಿಗಳು ಸಮುದ್ರ ಸೇರಲು ಜಾಗ ಸಾಲದೆ ಸಿಕ್ಕ ಸಿಕ್ಕ ಕಡೆಗಳಲ್ಲಿ ಸಮುದ್ರದತ್ತ ನುಗ್ಗಿದೆ. ಲೌಟ್ ಹೌಸ್ ಹಿಂಭಾಗದಿಂದ ಸಮುದ್ರ ಸೇರುತ್ತಿದ್ದ ನದಿ ತನ್ನ ಪಥವನ್ನೇ ಬದಲಿಸಿದ್ದು ದೀಪಸ್ತಂಭದತ್ತ ತೆರಳುವ ಕಾಲುದಾರಿಯನ್ನೇ ಕಬಳಿಸಿಕೊಂಡು ಮುಂಭಾಗದಿಂದ ಹರಿಯಲಾರಂಭಿಸಿದೆ. ಕಾಲು ದಾರಿ ಕೊಚ್ಚಿಹೋಗಿದ್ದು, ಎರಡೂ ಭಾಗಗಳಿಂದ ಸಮುದ್ರ ಕೊರೆತ ಉಂಟಾದಲ್ಲಿ ದೀಪಸ್ತಂಭವೇ ಸಮುದ್ರ ಪಾಲಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
ಕಾಪು ಬೀಚ್ ನಲ್ಲಿ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಲೈಟ್ ಹೌಸ್ನ ಹಿಂಭಾಗದಲ್ಲಿ ನದಿ ಸಮುದ್ರ ಸೇರ್ತಾ ಇತ್ತು. ಭಾರೀ ಮಳೆಯಿಂದಾಗಿ ನದಿ ಪಾತ್ರವೇ ಬದಲಾಗಿದ್ದು, ನೆರೆ ನೀರು ತನ್ನ ಪಥವನ್ನೇ ಬದಲಿಸಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕಾಪು ಬಳಿಯ ಪಡು ಗ್ರಾಮ, ಗರಡಿ ಪ್ರದೇಶ, ಸುಬ್ಬಯ್ಯ ತೋಟ, ಬೈರು ಗುತ್ತುತೋಟ ಸೇರಿದಂತೆ ಆಸುಪಾಸಿನ ಭಾಗದಲ್ಲಿ ಎಲ್ಲೆಂದರಲ್ಲಿ ಹರಿಯುತ್ತಿರುವ ನದಿ ನೀರು ಲೈಟ್ ಹೌಸ್ ಮುಂಭಾಗದಿಂದಲೇ ಸಮುದ್ರ ಸೇರುತ್ತಿದೆ. ಇದರಿಂದ ದೀಪಸ್ತಂಭದತ್ತ ಹೋಗಲು ದಾರಿ ಇಲ್ಲದಾಗಿದ್ದು, ಅಲ್ಲದೆ ನೆರೆನೀರು ಇದೇ ರೀತಿ ಹರಿದರೆ ಲೈಟ್ ಹೌಸ್ ಏರುವ ಮೆಟ್ಟಲುಗಳು ಕೊಚ್ಚಿ ಹೋಗುವ ಸಾಧ್ಯತೆ ಇದೆ.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 05:45 pm
HK News Desk
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm