ಬ್ರೇಕಿಂಗ್ ನ್ಯೂಸ್
14-03-22 02:20 pm Mangalore Correspondent ಕರಾವಳಿ
ಮಂಗಳೂರು, ಮಾ.14: ಎರಡು ದಿನಗಳ ಕರಾವಳಿ ಪ್ರವಾಸದ ನಿಮಿತ್ತ ಮಂಗಳೂರಿಗೆ ಆಗಮಿಸಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ದೇಗುಲದ ಆಡಳಿತ ಮಂಡಳಿ ಸದಸ್ಯರು ರಾಜ್ಯಪಾಲರನ್ನು ಬರಮಾಡಿಕೊಂಡು ಸ್ವಾಗತಿಸಿದರು.
ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ, ಆರತಿ ಸ್ವೀಕರಿಸಿದರು. ಶಿಷ್ಟಚಾರ ಪ್ರಕಾರ, ಜಿಲ್ಲಾ ಮಟ್ಟದ ಅಧಿಕಾರಿಗಳು ಜೊತೆಗಿದ್ದರು. ದೇವರ ದರ್ಶನದ ಬಳಿಕ ದೇವಸ್ಥಾನದ ಟ್ರಸ್ಟಿಗಳು ರಾಜ್ಯಪಾಲರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಇದೇ ವೇಳೆ, ದೇಗುಲದ ಅಭಿವೃದ್ಧಿಯ ರೂವಾರಿ ಮಾಜಿ ಸಚಿವ ಜನಾರ್ದನ ಪೂಜಾರಿಯವರ ಆತ್ಮಚರಿತ್ರೆ ಪುಸ್ತಕವನ್ನು ಅವರಿಗೆ ನೀಡಲಾಯಿತು. ದೇವಸ್ಥಾನದ ಪ್ರವಾಸಿಗರ ಸಂದರ್ಶನದ ಪುಸ್ತಕದಲ್ಲಿ ಸಹಿ ಹಾಕಿ, ಅಲ್ಲಿಂದ ಸರ್ಕಿಟ್ ಹೌಸ್ ಗೆ ನಿರ್ಗಮಿಸಿದರು.






ಮಧ್ಯಾಹ್ನ 2.45ಕ್ಕೆ ರಾಜ್ಯಪಾಲರು ಮಂಗಳೂರಿನಿಂದ ಮೂಡುಬಿದ್ರೆಯ ಸಾವಿರ ಕಂಬದ ಬಸದಿಗೆ ಭೇಟಿ ನೀಡಲಿದ್ದಾರೆ. ಅಲ್ಲಿಂದ ನಾಲ್ಕು ಗಂಟೆಗೆ ಕೊಡ್ಯಡ್ಕ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಆನಂತರ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಕಳ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಂಟು ಗಂಟೆಗೆ ಅಲ್ಲಿಂದ ಮರಳಿ ಮಂಗಳೂರಿಗೆ ಬರಲಿದ್ದು ಸರ್ಕಿಟ್ ಹೌಸ್ ನಲ್ಲಿ ರಾತ್ರಿ ತಂಗಲಿದ್ದಾರೆ. ಮಾ.15ರಂದು ಬೆಳಗ್ಗೆ ಹತ್ತು ಗಂಟೆಗೆ ಬಜ್ಪೆ ವಿಮಾನ ನಿಲ್ದಾಣದ ಮೂಲಕ ಬೆಂಗಳೂರು ತಲುಪಲಿದ್ದಾರೆ.
Governor of Karnataka Thawar Chand Gehlot is touring Dakshina Kannada (DK) and Udupi districts on March 14 and 15.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm