ಬ್ರೇಕಿಂಗ್ ನ್ಯೂಸ್
15-03-22 03:22 pm Mangalore Correspondent ಕರಾವಳಿ
ಮಂಗಳೂರು, ಮಾ.15: ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಮಂಗಳೂರಿನಿಂದ ಕಾರ್ಕಳದ ವರೆಗೆ ವಿಸ್ತರಣೆ ಕಾಮಗಾರಿಗೆ ಭೂಸ್ವಾಧೀನ ನಡೆಯುತ್ತಿದ್ದು, ಇದರಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಹೆದ್ದಾರಿಯ ಅಗಲೀಕರಣಕ್ಕೆ ಭೂಸ್ವಾಧೀನ ನಡೆಯುತ್ತಿದ್ದು, ಲಂಚ ಕೊಟ್ಟಲ್ಲಿ ಹೆದ್ದಾರಿಯ ರೂಟನ್ನೇ ಬದಲಿಸುತ್ತಿದ್ದಾರೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೂಸ್ವಾಧೀನ ಹೆಸರಲ್ಲಿ ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಸಂಸದ ನಳಿನ್ ಕುಮಾರ್ ಅವರಿಗೆ ದೂರು ನೀಡಿದರೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಭೂಮಾಲೀಕರ ಹೋರಾಟ ಸಮಿತಿಯ ಮುಖಂಡ ಬೃಜೇಶ್ ಶೆಟ್ಟಿ ಮಿಜಾರ್ ಆರೋಪಿಸಿದ್ದಾರೆ.
ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದ ಬೃಜೇಶ್ ಶೆಟ್ಟಿ, ಹೆದ್ದಾರಿಗೆ ಭೂಮಿಯನ್ನು ಬಿಟ್ಟುಕೊಟ್ಟವರಿಗೆ ಮಾರುಕಟ್ಟೆ ದರಕ್ಕಿಂತ ಹತ್ತರಿಂದ ಹನ್ನೆರಡು ಪಟ್ಟು ಕಡಿಮೆಗೆ ದರ ವಿಧಿಸಿದ್ದಾರೆ. ಸೆಂಟ್ಸ್ ಗೆ ಮೂರೂವರೆ ಲಕ್ಷ ಬೆಲೆ ಇರುವ ಭೂಮಿಗೆ ಕೇವಲ 15-20 ಸಾವಿರ ರೂ. ದರ ವಿಧಿಸುತ್ತಿದ್ದಾರೆ. ಅದರ ಮೇಲೆ 12 ಪರ್ಸೆಂಟ್ ಜಿಎಸ್ಟಿ ಹಾಕುತ್ತಿದ್ದಾರೆ. ನಾವು ಹೆದ್ದಾರಿಗೆ ಭೂಮಿ ಬಿಟ್ಟು ಕೊಡುತ್ತಿದ್ದರೂ, ಅದರ ಮೇಲೆ ಜಿಎಸ್ ಟಿ ತೆರಿಗೆ ಹೇಗೆ ವಿಧಿಸುತ್ತಿದ್ದಾರೋ ಅರ್ಥವಾಗುತ್ತಿಲ್ಲ. ನಾವು ಭೂಮಿ ಮಾರಾಟ ಮಾಡುತ್ತಿಲ್ಲ. ಹೆದ್ದಾರಿಗೆ ಅತ್ಯಂತ ಕನಿಷ್ಠ ಬೆಲೆಗೆ ನೀಡುತ್ತಿದ್ದರೂ, ಇವರು ಜಿಎಸ್ಟಿ ತೆರಿಗೆ ಹೇಗೆ ವಿಧಿಸುತ್ತಿದ್ದಾರೆ. ಅದರಲ್ಲೂ ಒಂದು ಕಡೆ 12 ಪರ್ಸೆಂಟ್, ಮತ್ತೊಂದು ಕಡೆ 24 ಪರ್ಸೆಂಟ್ ಜಿಎಸ್ಟಿ ಹಾಕುತ್ತಿದ್ದಾರೆ. ಇದಕ್ಕೆಲ್ಲ ಕಾನೂನಿನಲ್ಲಿ ಅವಕಾಶ ಇದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಿಂದ ಕಾರ್ಕಳದ ವರೆಗಿನ ಹೆದ್ದಾರಿಯನ್ನು 2014ರಲ್ಲಿ ಮೇಲ್ದರ್ಜೆಗೇರಿಸಿದ್ದು ಚತುಷ್ಪಥ ಕಾಮಗಾರಿಗೆ ನೋಟಿಫಿಕೇಶನ್ ಆಗಿತ್ತು. ಆದರೆ, ಈವರೆಗೆ ನಾಲ್ಕೈದು ಬಾರಿ ಹೆದ್ದಾರಿಯ ರೂಟ್ ಬದಲಿಸಿ, ಸ್ಥಳೀಯ ಕೃಷಿಕರನ್ನು ವಂಚಿಸಲು ತೊಡಗಿದ್ದಾರೆ. ನಾವು 250 ಮಂದಿಯಷ್ಟು ಸೇರಿ ಭೂಸ್ವಾಧೀನಕ್ಕೆ ಹೈಕೋರ್ಟಿನಲ್ಲಿ ತಡೆಯಾಜ್ಞೆ ತಂದಿದ್ದೇವೆ. ಆದರೆ ಹೆದ್ದಾರಿ ಅಧಿಕಾರಿಗಳು ಹೈಕೋರ್ಟ್ ನಲ್ಲಿ ಈವರೆಗೂ ಪ್ರತಿಕ್ರಿಯೆ ನೀಡದೆ ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದ ವಿಳಂಬ ಧೋರಣೆ ತೋರುತ್ತಿದ್ದಾರೆ. ಇತ್ತೀಚೆಗೆ ಮಂಗಳೂರಿಗೆ ಬಂದಿದ್ದ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿ, ಮನವಿ ನೀಡಿದ್ದೇವೆ. ಆದರೆ ಇಲ್ಲಿಯ ಸಂಸದ ನಳಿನ್ ಕುಮಾರ್ ನಿರ್ಲಕ್ಷ್ಯದಿಂದಾಗಿ ನಮಗೆ ಅನ್ಯಾಯ ಆಗುತ್ತಿದೆ ಎಂದು ರತ್ನಾಕರ ಶೆಟ್ಟಿ ಬೆಳುವಾಯಿ ಹೇಳಿದರು.
ಇಲ್ಲಿ ಕೆಲವು ಪ್ರಭಾವಿಗಳು ಜನಪ್ರತಿನಿಧಿಗಳು ಮತ್ತು ಹೈವೇ ಅಧಿಕಾರಿಗಳ ಜೊತೆ ಸೇರಿ, ಭೂಮಾಫಿಯಾ ನಡೆಸುತ್ತಿದ್ದಾರೆ. ಇದರಿಂದಾಗಿ ಹೆದ್ದಾರಿಯ ಹೆಸರಲ್ಲಿ ಹಗಲು ದರೋಡೆ ನಡೆಯುತ್ತಿದೆ. ಕಿಶೋರ್ ಕುಮಾರ್ ಎನ್ನುವ ಭೂಸ್ವಾಧೀನಧಿಕಾರಿ ಮಹಮ್ಮದ್ ನಜೀಂ ಎಂಬವರಿಗೆ ಕರೆ ಮಾಡಿ, ಹೆದ್ದಾರಿ ಗುರುತು ಹಾಕಿದ್ದನ್ನು ಬದಲಿಸಲು 5 ಲಕ್ಷ ಕೇಳಿದ್ದು, ಇದರ ರೆಕಾರ್ಡ್ ನಮ್ಮಲ್ಲಿದೆ. ಪದೇ ಪದೇ ಕರೆ ಮಾಡಿ, ಹಣ ಅಡ್ವಾನ್ಸ್ ನೀಡುವಂತೆ ಕೇಳುತ್ತಿದ್ದಾರೆ. ಹೆದ್ದಾರಿ ಬದಿಯಲ್ಲಿ ಕೆಲವರು ದೊಡ್ಡ ಮಟ್ಟಿನಲ್ಲಿ ಭೂಮಿಯನ್ನು ಖರೀದಿಸಿಟ್ಟಿದ್ದು ಅವರ ಜಾಗದ ಮೂಲಕ ಹೆದ್ದಾರಿ ಹೋದಲ್ಲಿ ಭೂಮಿಯ ದರ ದುಪ್ಪಟ್ಟಾಗುವುದರಿಂದ ಅದರ ಬಗ್ಗೆ ಲಾಬಿ ನಡೆಸುತ್ತಿದ್ದಾರೆ.
ಸುಮಾರು 20 ವರ್ಷಗಳಿಂದ ಈ ಹೆದ್ದಾರಿಯ ಅಕ್ಕಪಕ್ಕದಲ್ಲಿ ಭೂಪರಿವರ್ತನೆಗೆ ಅವಕಾಶ ಇರಲಿಲ್ಲ. ಆದರೆ 2016ರಲ್ಲಿ ಹೆದ್ದಾರಿಗೆ 3ಎ ಅಧಿಸೂಚನೆ ಹೊರಡಿಸಿದ ಬಳಿಕ ಕೆಲವು ಪ್ರಭಾವಿ ವ್ಯಕ್ತಿಗಳ ಭೂಮಿಯನ್ನು ಪರಿವರ್ತಿಸಲು ಅನುಮತಿ ನೀಡಲಾಗಿದೆ. ಇದರಿಂದ ವ್ಯಾಪಕ ಭ್ರಷ್ಟಾಚಾರಕ್ಕೆ ಕಾರಣವಾಗಿದ್ದು, ಸ್ಥಳೀಯ ಜನಪ್ರತಿನಿಧಿಗಳು ಇದನ್ನು ನೋಡಿಯೂ ಸುಮ್ಮನಿದ್ದಾರೆ. ಹೆದ್ದಾರಿ ಅಧಿಕಾರಿಗಳ ಭ್ರಷ್ಟಾಚಾರದ ಬಗ್ಗೆ ಸಿಬಿಐ ತನಿಖೆ ನಡೆಸಿದರೆ ಕೋಟ್ಯಂತರ ರೂಪಾಯಿ ವಹಿವಾಟು ನಡೆದಿರುವುದು ಬೆಳಕಿಗೆ ಬರಬಹುದು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರೂ, ಅವರು ಅಸಹಾಯಕರಾಗಿ ವರ್ತಿಸುತ್ತಿದ್ದಾರೆ ಎಂದು ಬೃಜೇಶ್ ಶೆಟ್ಟಿ ಮಿಜಾರ್ ಹೇಳಿದ್ದಾರೆ.
Mangalore Full time corruption in the name of extension of Mangalore Karkala highway exposed by organisation lead by Baijesh Sheety during a press meet held in Mangalore.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm