ಬ್ರೇಕಿಂಗ್ ನ್ಯೂಸ್
16-03-22 12:56 pm Udupi Correspondent ಕರಾವಳಿ
ಕುಂದಾಪುರ, ಮಾ.16 : ಹಿಜಾಬ್ ವಿಚಾರದಲ್ಲಿ ತೀವ್ರ ಗದ್ದಲ ಎಬ್ಬಿಸಿದ್ದ ಕುಂದಾಪುರದ ಸರಕಾರಿ ಕಾಲೇಜಿನಲ್ಲಿ ಹೈಕೋರ್ಟ್ ಆದೇಶದ ಬಳಿಕ ಕಾಲೇಜು ಆರಂಭಗೊಂಡಿದ್ದು, 11 ಮಂದಿ ಕಾಲೇಜಿಗೆ ಗೈರಾಗಿದ್ದಾರೆ.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಾ.15ರ ಮಂಗಳವಾರ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದರ ಬೆನ್ನಲ್ಲೇ ಶಾಲೆ, ಕಾಲೇಜು ಆವರಣದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ, 144 ಸೆಕ್ಷನ್ ಜಾರಿ ಮಾಡಲಾಗಿದೆ.
ಇಂದು ಬೆಳಗ್ಗೆ ಕಾಲೇಜಿಗೆ ವಿದ್ಯಾರ್ಥಿಗಳು ಆಗಮಿಸಿದ್ದು ಹಿಜಾಬ್ ಹಾಕಿದವರನ್ನು ತೆಗೆದು ಒಳಬರುವಂತೆ ಸೂಚಿಸಲು ಸಿಬಂದಿ ಮತ್ತು ಕಾಲೇಜಿನ ಉಪನ್ಯಾಸಕರು ತೊಡಗಿದ್ದರು. ಈ ವೇಳೆ, ಇಬ್ಬರು ಮುಸ್ಲಿಮ್ ವಿದ್ಯಾರ್ಥಿನಿಯರು ಹಿಜಾಬ್, ಬುರ್ಖಾ ಧರಿಸಿ ಕಾಲೇಜಿಗೆ ಬಂದಿದ್ದು, ಬಳಿಕ ಪ್ರತ್ಯೇಕ ಕೊಠಡಿಯಲ್ಲಿ ತೆರಳಿ ಹಿಜಾಬ್, ಬುರ್ಖಾ ತೆಗೆದಿಟ್ಟು ತರಗತಿಗೆ ತೆರಳಿದ್ದಾರೆ. ಕುಂದಾಪುರದಲ್ಲಿ ಹಿಜಾಬ್ ಸಂಘರ್ಷದ ಸಂದರ್ಭದಲ್ಲಿ 22 ವಿದ್ಯಾರ್ಥಿನಿಯರು ಕಾಲೇಜಿಗೆ ಬರದೆ ದೂರ ನಿಂತಿದ್ದರು. ಈಗ ಅವರ ಸಂಖ್ಯೆ ಕಡಿಮೆಯಾಗಿದ್ದು, ಹೈಕೋರ್ಟ್ ತೀರ್ಪನ್ನು ಪಾಲಿಸುವ ಸೂಚನೆ ನೀಡಿದ್ದಾರೆ.
ಉಡುಪಿಯ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಗಾಗಿ ಪಟ್ಟು ಹಿಡಿದು ಕಾಲೇಜಿನಿಂದ ಹೊರಗೆ ನಿಂತಿದ್ದ ಆರು ಮಂದಿ ವಿದ್ ವಿದ್ಯಾರ್ಥಿನಿಯರು ಕಾಲೇಜಿಗೆ ಬರದೆ ಶಿಕ್ಷಣದಿಂದ ದೂರ ನಿಂತಿದ್ದಾರೆ. ಈ ಪೈಕಿ ಒಬ್ಬಾಕೆಯ ಹೆಸರಲ್ಲಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ತುರ್ತಾಗಿ ಅರ್ಜಿ ಪರಿಗಣಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದ್ದಾರೆ.
Students remove hijab and attend class in Kundapur, 11 others absent.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm