ಬ್ರೇಕಿಂಗ್ ನ್ಯೂಸ್
16-03-22 12:56 pm Udupi Correspondent ಕರಾವಳಿ
ಕುಂದಾಪುರ, ಮಾ.16 : ಹಿಜಾಬ್ ವಿಚಾರದಲ್ಲಿ ತೀವ್ರ ಗದ್ದಲ ಎಬ್ಬಿಸಿದ್ದ ಕುಂದಾಪುರದ ಸರಕಾರಿ ಕಾಲೇಜಿನಲ್ಲಿ ಹೈಕೋರ್ಟ್ ಆದೇಶದ ಬಳಿಕ ಕಾಲೇಜು ಆರಂಭಗೊಂಡಿದ್ದು, 11 ಮಂದಿ ಕಾಲೇಜಿಗೆ ಗೈರಾಗಿದ್ದಾರೆ.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಾ.15ರ ಮಂಗಳವಾರ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದರ ಬೆನ್ನಲ್ಲೇ ಶಾಲೆ, ಕಾಲೇಜು ಆವರಣದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ, 144 ಸೆಕ್ಷನ್ ಜಾರಿ ಮಾಡಲಾಗಿದೆ.
ಇಂದು ಬೆಳಗ್ಗೆ ಕಾಲೇಜಿಗೆ ವಿದ್ಯಾರ್ಥಿಗಳು ಆಗಮಿಸಿದ್ದು ಹಿಜಾಬ್ ಹಾಕಿದವರನ್ನು ತೆಗೆದು ಒಳಬರುವಂತೆ ಸೂಚಿಸಲು ಸಿಬಂದಿ ಮತ್ತು ಕಾಲೇಜಿನ ಉಪನ್ಯಾಸಕರು ತೊಡಗಿದ್ದರು. ಈ ವೇಳೆ, ಇಬ್ಬರು ಮುಸ್ಲಿಮ್ ವಿದ್ಯಾರ್ಥಿನಿಯರು ಹಿಜಾಬ್, ಬುರ್ಖಾ ಧರಿಸಿ ಕಾಲೇಜಿಗೆ ಬಂದಿದ್ದು, ಬಳಿಕ ಪ್ರತ್ಯೇಕ ಕೊಠಡಿಯಲ್ಲಿ ತೆರಳಿ ಹಿಜಾಬ್, ಬುರ್ಖಾ ತೆಗೆದಿಟ್ಟು ತರಗತಿಗೆ ತೆರಳಿದ್ದಾರೆ. ಕುಂದಾಪುರದಲ್ಲಿ ಹಿಜಾಬ್ ಸಂಘರ್ಷದ ಸಂದರ್ಭದಲ್ಲಿ 22 ವಿದ್ಯಾರ್ಥಿನಿಯರು ಕಾಲೇಜಿಗೆ ಬರದೆ ದೂರ ನಿಂತಿದ್ದರು. ಈಗ ಅವರ ಸಂಖ್ಯೆ ಕಡಿಮೆಯಾಗಿದ್ದು, ಹೈಕೋರ್ಟ್ ತೀರ್ಪನ್ನು ಪಾಲಿಸುವ ಸೂಚನೆ ನೀಡಿದ್ದಾರೆ.
ಉಡುಪಿಯ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಗಾಗಿ ಪಟ್ಟು ಹಿಡಿದು ಕಾಲೇಜಿನಿಂದ ಹೊರಗೆ ನಿಂತಿದ್ದ ಆರು ಮಂದಿ ವಿದ್ ವಿದ್ಯಾರ್ಥಿನಿಯರು ಕಾಲೇಜಿಗೆ ಬರದೆ ಶಿಕ್ಷಣದಿಂದ ದೂರ ನಿಂತಿದ್ದಾರೆ. ಈ ಪೈಕಿ ಒಬ್ಬಾಕೆಯ ಹೆಸರಲ್ಲಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ತುರ್ತಾಗಿ ಅರ್ಜಿ ಪರಿಗಣಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದ್ದಾರೆ.
Students remove hijab and attend class in Kundapur, 11 others absent.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm