ಬ್ರೇಕಿಂಗ್ ನ್ಯೂಸ್
22-09-20 03:02 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 22: ಕೊನೆಗೂ ಕರಾವಳಿಯ ಹೆಮ್ಮೆಯ ಸಾಧಕ, ವಿಜಯ ಬ್ಯಾಂಕಿನ ಔನ್ನತ್ಯಕ್ಕೆ ಕಾರಣರಾಗಿದ್ದ ಮುಲ್ಕಿ ಸುಂದರರಾಮ ಶೆಟ್ಟಿ ಅವರಿಗೆ ರಾಜ್ಯ ಸರಕಾರ ಗೌರವ ನೀಡಿದೆ. ಮೂರು ವರ್ಷಗಳ ಹಿಂದೆ ಜಟಾಪಟಿಗೆ ಕಾರಣವಾಗಿದ್ದ ಸುಂದರ ರಾಮ ಶೆಟ್ಟರ ಹೆಸರಿನಲ್ಲಿ ಮಂಗಳೂರಿನಲ್ಲಿ ರಸ್ತೆ ನಾಮಕರಣ ಮಾಡುವುದಕ್ಕೆ ನಗರಾಭಿವೃದ್ಧಿ ಸಚಿವಾಲಯ ಒಪ್ಪಿಕೊಂಡಿದ್ದು ಹಿಂದಿನ ಆದೇಶವನ್ನು ಮರು ಜಾರಿಗೆ ಸೂಚನೆ ನೀಡಿದೆ.
ಮಂಗಳೂರಿನ ಅಂಬೇಡ್ಕರ್ ವೃತ್ತದಿಂದ, ಲೈಟ್ ಹೌಸ್ ಹಿಲ್ ಬಳಿಯ ಕೆಥೋಲಿಕ್ ಕ್ಲಬ್ ವರೆಗಿನ ರಸ್ತೆಗೆ ಸುಂದರರಾಮ ಶೆಟ್ಟಿ ಹೆಸರು ನಾಮಕರಣ ಮಾಡಲು 2017ರ ಮೇ 24ರಂದು ಆಗಿನ ರಾಜ್ಯ ಸರಕಾರ ಆದೇಶ ಮಾಡಿತ್ತು. ಆದರೆ, ಕೊನೆಕ್ಷಣದಲ್ಲಿ ಎಚ್ಚತ್ತುಕೊಂಡ ಅಲೋಶಿಯಸ್ ಕಾಲೇಜು ಆಡಳಿತ, ಆಗ ಮಂಗಳೂರು ಶಾಸಕರಾಗಿದ್ದ ಜೆ.ಆರ್ ಲೋಬೊ ಮೂಲಕ ಕೋರ್ಟಿನಿಂದ ತಡೆಯಾಜ್ಞೆ ತಂದಿತ್ತು. ಅಲ್ಲದೆ, ರಸ್ತೆಗೆ ಸುಂದರರಾಮ ಶೆಟ್ಟಿ ಹೆಸರಿಡುವುದಕ್ಕೆ ಆಕ್ಷೇಪ ಸೂಚಿಸಿ ವಿದ್ಯಾರ್ಥಿಗಳ ಮೂಲಕ ಪ್ರತಿಭಟನೆಯನ್ನೂ ನಡೆಸಲಾಗಿತ್ತು. ಈ ವಿಚಾರ ಮಂಗಳೂರಿನಲ್ಲಿ ಕಾಂಗ್ರೆಸ್ - ಬಿಜೆಪಿ ಮಧ್ಯೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು. ಬಂಟ ಸಮುದಾಯಕ್ಕೆ ಅವಮಾನ ಎಂಬ ನೆಲೆಯಲ್ಲಿ ಪ್ರಚಾರವನ್ನೂ ನಡೆಸಲಾಗಿತ್ತು. ಬಳಿಕ ಕೋರ್ಟ್ ಮತ್ತು ಮಹಾನಗರ ಪಾಲಿಕೆಯಲ್ಲಿ ಜಟಾಪಟಿ ನಡೆದು ಪ್ರಕ್ರಿಯೆ ನೆನೆಗುದಿಗೆ ಬಿದ್ದಿತ್ತು. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರಕಾರ ಬಂದರೆ ಒಂದೇ ತಿಂಗಳಲ್ಲಿ ರಸ್ತೆ ನಾಮಕರಣ ಮಾಡಿಸುವುದಾಗಿ ಮಾಜಿ ಸಚಿವ ನಾಗರಾಜ ಶೆಟ್ಟಿ ಕೊಚ್ಚಿಕೊಂಡಿದ್ದೂ ಆಗಿತ್ತು. ಆನಂತರ ಕೋರ್ಟಿನಲ್ಲಿ ವಾದ - ವಿವಾದ ನಡೆದಿದ್ದು ಮಹಾನಗರ ಪಾಲಿಕೆ ಕಮಿಷನರ್ ಅವರ ಅಭಿಪ್ರಾಯವನ್ನೂ ಕೇಳಲಾಗಿತ್ತು. ಎರಡೂ ಕಡೆಯ ವಾದ ಆಲಿಸಿದ ರಾಜ್ಯ ಹೈಕೋರ್ಟ್, 2019ರ ಎಪ್ರಿಲ್ 11 ರಂದು ಈ ಬಗ್ಗೆ ಪುನರ್ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿತ್ತು.
ಈಗ ದಿಢೀರ್ ಆಗಿ ಎಚ್ಚತ್ತ ರಾಜ್ಯದ ಬಿಜೆಪಿ ಸರಕಾರ, ಇತ್ತೀಚೆಗೆ 2020ರ ಸೆಪ್ಟಂಬರ್ 5 ರಂದು ಹಳೆಯ ಆದೇಶವನ್ನು ಊರ್ಜಿತಗೊಳಿಸಿ ನಗರಾಭಿವೃದ್ಧಿ ಸಚಿವಾಲಯದ ಮೂಲದ ಆದೇಶ ಮಾಡಿಸಿದೆ. ಅಲ್ಲಿಗೆ ಎರಡು ಸಮುದಾಯಗಳ ನಡುವಿನ ಪ್ರತಿಷ್ಠೆಗೆ ಕಾರಣವಾಗಿದ್ದ ರಸ್ತೆ ನಾಮಕರಣ ವಿವಾದಕ್ಕೆ ಇತಿಶ್ರೀ ಹಾಕಲಾಗಿದೆ.
Join our WhatsApp group for latest news updates
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 05:45 pm
HK News Desk
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm