ಬ್ರೇಕಿಂಗ್ ನ್ಯೂಸ್
27-03-22 09:34 pm Mangalore Correspondent ಕರಾವಳಿ
ಮಂಗಳೂರು, ಮಾ.27: ಸಿದ್ದರಾಮಯ್ಯ ಅವರು ಎಲ್ಲ ಧರ್ಮದ ಸ್ವಾಮೀಜಿ, ಧರ್ಮಗುರುಗಳ ಬಗ್ಗೆ ಗೌರವ ಭಾವನೆ ಹೊಂದಿದ್ದಾರೆ. ಅವರು ಸ್ವಾಮೀಜಿಗಳನ್ನು ನಿಂದಿಸುವ ರೀತಿ ಮಾತನಾಡಿಲ್ಲ. ಆದರೆ ಅವರ ಹೇಳಿಕೆಯನ್ನು ತಿರುಚಿ ಬಿಜೆಪಿ ನಾಯಕರು ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದನ್ನು ಖಂಡಿಸುತ್ತೇನೆ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಯುಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಖಾದರ್, ಸಿದ್ದರಾಮಯ್ಯ ಆಡಳಿತ ಕಾಲದಲ್ಲಿ ಯಾವುದೇ ಧರ್ಮ, ಮಠ, ಸ್ವಾಮೀಜಿಗಳ ಜೊತೆ ತಪ್ಪಾಗಿ ನಡೆದುಕೊಂಡಿಲ್ಲ. ಎಲ್ಲ ಸ್ವಾಮೀಜಿಗಳ ಜೊತೆ ಹತ್ತಿರದ ನಂಟು ಇಟ್ಟುಕೊಂಡಿದ್ದರು. ಯಾರು ಕೂಡ ವಿರೋಧ ಮಾತನಾಡಿರಲಿಲ್ಲ. ಸಿದ್ದರಾಮಯ್ಯ ಸರಕಾರ ಇದ್ದಾಗ ಮೂಢನಂಬಿಕೆ ವಿರೋಧಿ ಕಾಯ್ದೆಯಿಂದ ದುರುಪಯೋಗ ಆಗುತ್ತಿದೆ ಎಂದು ಹೇಳಿ ಅದನ್ನು ತೆಗೆದು ಹಾಕಲಾಗಿತ್ತು. ಆದರೆ ಬಿಜೆಪಿ ಸರಕಾರ ಬಂದ ಬಳಿಕ ಆ ಕಾನೂನನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ಸಿದ್ದರಾಮಯ್ಯ ಕಾಲದಲ್ಲಿ ಹಿಂದು ಅರ್ಚಕರಿಗೆ ನೀಡುತ್ತಿದ್ದ ತಸ್ತೀಕು ಭತ್ಯೆಯನ್ನೂ ಹೆಚ್ಚಿಸಲಾಗಿತ್ತು. ಹಿಂದುಗಳ ಉದ್ಘಾರ ಮಾಡುವ ಪಕ್ಷ ಎಂದು ಹೇಳುವ ಬಿಜೆಪಿ ಸರಕಾರದಲ್ಲಿ ಅರ್ಚಕರ ತಸ್ತೀಕನ್ನು ಒಂದು ಪೈಸೆಯೂ ಹೆಚ್ಚಿಸಿಲ್ಲ. ದೇಶದಲ್ಲಿ ಪೆಟ್ರೋಲ್, ಡೀಸೆಲ್. ಗ್ಯಾಸ್ ಹೀಗೆ ಜೀವನಾವಶ್ಯಕ ವಸ್ತುಗಳ ಬೆಲೆ ಹೆಚ್ಚುತ್ತಿದ್ದು ಜನ ಆಕ್ರೋಶದಲ್ಲಿದ್ದಾರೆ. ಜನರ ಗಮನ ಬೇರೆಡೆ ಸೆಳೆಯುವುದಕ್ಕಾಗಿ ಇಂತಹ ಕ್ಷುಲ್ಲಕ ವಿಚಾರಗಳನ್ನು ದೊಡ್ಡದು ಮಾಡುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಖಾದರ್ ಹೇಳಿದರು.
ಹಿಜಾಬ್ ಚಿಂತೆ ಬದಿಗಿಟ್ಟು ಪರೀಕ್ಷೆ ಬರೆಯಿರಿ
ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಗೊಳ್ಳುತ್ತಿರುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯಲು ಸಿದ್ಧತೆ ನಡೆಸಿದ್ದಾರೆ. ಅವರೆಲ್ಲರಿಗೂ ಯಾವುದೇ ಮಾನಸಿಕ ಕಿರುಕುಳ ಆಗದಂತೆ ನೋಡಿಕೊಂಡು ಪರೀಕ್ಷೆ ಬರೆಯಲು ಅವಕಾಶ ಒದಗಿಸುವುದು ಶಿಕ್ಷಣ ಇಲಾಖೆಯ ಕರ್ತವ್ಯ. ಸಮವಸ್ತ್ರದ ಬಗ್ಗೆ ಹೈಕೋರ್ಟ್ ನೀಡಿರುವ ಆದೇಶವನ್ನು ಎಲ್ಲರೂ ಪಾಲಿಸಬೇಕು. ಹೆಣ್ಮಕ್ಕಳಿಗೆ ಶಿಕ್ಷಣ ಮುಖ್ಯವಾಗುತ್ತದೆ. ತಮ್ಮ ಪಟ್ಟನ್ನು ಸಡಿಲಿಸಿ, ಸಮವಸ್ತ್ರದ ಬಗ್ಗೆ ಕೋರ್ಟ್ ನೀಡಿರುವ ತೀರ್ಪನ್ನು ಪಾಲಿಸಬೇಕು. ಹೆತ್ತವರು ಮತ್ತು ಧಾರ್ಮಿಕ ಮುಖಂಡರಿಗೂ ಈ ಬಗ್ಗೆ ಮನವಿ ಮಾಡುತ್ತೇನೆ. ಸರಕಾರದ ಜೊತೆ ಸಂಘರ್ಷಕ್ಕೆ ನಿಲ್ಲುವುದು ಬೇಡ. ಶಿಕ್ಷಣವೇ ನಮಗೆ ಮುಖ್ಯ. ಅದಕ್ಕಾಗಿ ಯಾವುದೇ ಚಿಂತೆ ಇಲ್ಲದೆ ಪರೀಕ್ಷೆ ಬರೆಯಿರಿ ಎಂದು ಮನವಿ ಮಾಡುವುದಾಗಿ ಖಾದರ್ ಹೇಳಿದರು.
MLA and the deputy leader of the Congress Legislature Party in the state legislative assembly U T Khader vehemently defended former chief minister Siddaramaiah on his statement on swamijis and said, " Siddaramaiah has respect for all religious heads. But, the leaders of BJP are twisting his statements and misleading the people of the state."
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm