ಬ್ರೇಕಿಂಗ್ ನ್ಯೂಸ್
28-03-22 10:19 pm Mangalore Correspondent ಕರಾವಳಿ
ಮಂಗಳೂರು, ಮಾ.28: ನಗರದಲ್ಲಿ ಕಾಶ್ಮೀರದ ಪಂಡಿತರ ಹತ್ಯಾಕಾಂಡ ಕುರಿತ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಿದ ಸಂತರು ದಿಗ್ಭ್ರಮೆಗೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ಗುರುಪುರ ಮಠದ ರಾಜಶೇಖರಾನಂದ ಸ್ವಾಮೀಜಿ, ಚಿತ್ರವನ್ನು ನೋಡಿದ ನನಗೆ ರಕ್ತ ಕುದಿಯುತ್ತಿದೆ. ಹಿಂದಿನ ಸರಕಾರದ ದೌರ್ಬಲ್ಯ, ನಿರ್ಲಕ್ಷ್ಯದಿಂದಾಗಿ ಇಷ್ಟೆಲ್ಲಾ ನಡೆದಿದೆ. ಭಯೋತ್ಪಾದಕರ ಕ್ರೌರ್ಯ ಇಲ್ಲಿ ಅನಾವರಣ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಯೋತ್ಪಾದಕರ ಕರಾಳ ಕ್ರೌರ್ಯವನ್ನು ನೋಡಿ, ಅಲ್ಲಿನ ದೃಶ್ಯಗಳನ್ನು ನೋಡಿ ಸಂತನಾದ ನನಗೇ ಕಣ್ಣೀರು, ಆಕ್ರೋಶ ಬರಬೇಕಾದರೆ ಜನಸಾಮಾನ್ಯರಿಗೆ ಏನಾಗಬಹುದು.. ಕಾಶ್ಮೀರದಲ್ಲಿ ಹಿಂದುಗಳ ಮೇಲೆ ನಡೆದ ಕ್ರೌರ್ಯವನ್ನು ಊಹಿಸಲು ಸಾಧ್ಯವಿಲ್ಲ. ಇದು ಇಲ್ಲಿಗೇ ಕೊನೆಗೊಳ್ಳಬೇಕು. ಮುಂದೆ ಯಾವತ್ತೂ ಕೇರಳ ಫೈಲ್ಸ್, ಕೊಡಗು ಫೈಲ್ಸ್ ನಂತಹ ಸಿನಿಮಾಗಳು ಮತ್ತೆ ಬರುವಂತೆ ಆಗಬಾರದು. ಇದಕ್ಕಾಗಿ ಹಿಂದುಗಳು ಎಚ್ಚತ್ತುಕೊಳ್ಳಬೇಕು. ಹಿಂದುಗಳು ಅಲ್ಪಸಂಖ್ಯಾತರಾದರೆ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಈ ಸಿನಿಮಾ ತೋರಿಸುತ್ತದೆ ಎಂದು ವಜ್ರದೇಹಿ ಸ್ವಾಮೀಜಿ ಹೇಳಿದರು.
ಚಿಲಿಂಬಿ ಓಂ ಶಕ್ತಿ ಮಠದ ವಿದ್ಯಾನಂದ ಸ್ವಾಮೀಜಿ ಮಾತನಾಡಿ, ನಿದ್ದೆ ಮಾಡುತ್ತಿರುವ ಹಿಂದುಗಳು ಇನ್ನಾದರೂ ಎಚ್ಚತ್ತುಕೊಳ್ಳಬೇಕು. ಹಿಂದು ಸಂಸ್ಕೃತಿ ಬಲಹೀನವಾದರೆ ಸಮಾಜದಲ್ಲಿ ಸೆಕ್ಯುಲರಿಸಂ ಅನ್ನುವುದೇ ನಾಶವಾಗುತ್ತದೆ. ಹಿಂದು ಸನಾತನ ಸಂಸ್ಕೃತಿಯಿಂದ ಮಾತ್ರ ಸೆಕ್ಯುಲರಿಸಂ ಉಳಿಯಲು ಸಾಧ್ಯ. ಹಿಂದುಗಳ ಸಂಖ್ಯೆ ಕಡಿಮೆಯಾದ ಕೂಡಲೇ ಅವರನ್ನು ಈ ಪರಿ ಚಿತ್ರಹಿಂಸೆ ಕೊಟ್ಟಿದ್ದಾರಂದ್ರೆ ಅದನ್ನು ಊಹಿಸಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.
ಮೂಡುಬಿದಿರೆ ಜೈನ ಮಠದ ಭಟ್ಟಾರಕ ಶ್ರೀ ಮಾತನಾಡಿ, ಸಿನಿಮಾದಲ್ಲಿನ ದೃಶ್ಯಗಳು ಭೀಭತ್ಸವಾಗಿದೆ. ಇಂತಹ ಸ್ಥಿತಿ ಮುಂದೆ ಯಾವತ್ತೂ ಬರಬಾರದು. ಅದಕ್ಕಾಗಿ ಹಿಂದು- ಮುಸ್ಲಿಮರು ಸೌಹಾರ್ದದಿಂದ ಬಾಳಬೇಕು. ದೇಶದ ಸಂಸ್ಕೃತಿಯನ್ನು ಎತ್ತಿ ಹಿಡಿಯಬೇಕು ಎಂದು ಹೇಳಿದರು. ವಿಶ್ವ ಹಿಂದು ಪರಿಷತ್ತಿನಿಂದ ಹತ್ತು ಜನ ಸಂತರು ಮತ್ತು ನೂರಾರು ಕಾರ್ಯಕರ್ತರಿಗೆ ಸಿನಿಮಾ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.
Mangalore It is because of Congress failure we are seeing Kashmir files movies says Gurupura Vajradehi Swamiji after watching the movie at cinepolis in city center.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm