ಬ್ರೇಕಿಂಗ್ ನ್ಯೂಸ್
28-03-22 10:19 pm Mangalore Correspondent ಕರಾವಳಿ
ಮಂಗಳೂರು, ಮಾ.28: ನಗರದಲ್ಲಿ ಕಾಶ್ಮೀರದ ಪಂಡಿತರ ಹತ್ಯಾಕಾಂಡ ಕುರಿತ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಿದ ಸಂತರು ದಿಗ್ಭ್ರಮೆಗೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ಗುರುಪುರ ಮಠದ ರಾಜಶೇಖರಾನಂದ ಸ್ವಾಮೀಜಿ, ಚಿತ್ರವನ್ನು ನೋಡಿದ ನನಗೆ ರಕ್ತ ಕುದಿಯುತ್ತಿದೆ. ಹಿಂದಿನ ಸರಕಾರದ ದೌರ್ಬಲ್ಯ, ನಿರ್ಲಕ್ಷ್ಯದಿಂದಾಗಿ ಇಷ್ಟೆಲ್ಲಾ ನಡೆದಿದೆ. ಭಯೋತ್ಪಾದಕರ ಕ್ರೌರ್ಯ ಇಲ್ಲಿ ಅನಾವರಣ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಯೋತ್ಪಾದಕರ ಕರಾಳ ಕ್ರೌರ್ಯವನ್ನು ನೋಡಿ, ಅಲ್ಲಿನ ದೃಶ್ಯಗಳನ್ನು ನೋಡಿ ಸಂತನಾದ ನನಗೇ ಕಣ್ಣೀರು, ಆಕ್ರೋಶ ಬರಬೇಕಾದರೆ ಜನಸಾಮಾನ್ಯರಿಗೆ ಏನಾಗಬಹುದು.. ಕಾಶ್ಮೀರದಲ್ಲಿ ಹಿಂದುಗಳ ಮೇಲೆ ನಡೆದ ಕ್ರೌರ್ಯವನ್ನು ಊಹಿಸಲು ಸಾಧ್ಯವಿಲ್ಲ. ಇದು ಇಲ್ಲಿಗೇ ಕೊನೆಗೊಳ್ಳಬೇಕು. ಮುಂದೆ ಯಾವತ್ತೂ ಕೇರಳ ಫೈಲ್ಸ್, ಕೊಡಗು ಫೈಲ್ಸ್ ನಂತಹ ಸಿನಿಮಾಗಳು ಮತ್ತೆ ಬರುವಂತೆ ಆಗಬಾರದು. ಇದಕ್ಕಾಗಿ ಹಿಂದುಗಳು ಎಚ್ಚತ್ತುಕೊಳ್ಳಬೇಕು. ಹಿಂದುಗಳು ಅಲ್ಪಸಂಖ್ಯಾತರಾದರೆ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಈ ಸಿನಿಮಾ ತೋರಿಸುತ್ತದೆ ಎಂದು ವಜ್ರದೇಹಿ ಸ್ವಾಮೀಜಿ ಹೇಳಿದರು.
ಚಿಲಿಂಬಿ ಓಂ ಶಕ್ತಿ ಮಠದ ವಿದ್ಯಾನಂದ ಸ್ವಾಮೀಜಿ ಮಾತನಾಡಿ, ನಿದ್ದೆ ಮಾಡುತ್ತಿರುವ ಹಿಂದುಗಳು ಇನ್ನಾದರೂ ಎಚ್ಚತ್ತುಕೊಳ್ಳಬೇಕು. ಹಿಂದು ಸಂಸ್ಕೃತಿ ಬಲಹೀನವಾದರೆ ಸಮಾಜದಲ್ಲಿ ಸೆಕ್ಯುಲರಿಸಂ ಅನ್ನುವುದೇ ನಾಶವಾಗುತ್ತದೆ. ಹಿಂದು ಸನಾತನ ಸಂಸ್ಕೃತಿಯಿಂದ ಮಾತ್ರ ಸೆಕ್ಯುಲರಿಸಂ ಉಳಿಯಲು ಸಾಧ್ಯ. ಹಿಂದುಗಳ ಸಂಖ್ಯೆ ಕಡಿಮೆಯಾದ ಕೂಡಲೇ ಅವರನ್ನು ಈ ಪರಿ ಚಿತ್ರಹಿಂಸೆ ಕೊಟ್ಟಿದ್ದಾರಂದ್ರೆ ಅದನ್ನು ಊಹಿಸಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.
ಮೂಡುಬಿದಿರೆ ಜೈನ ಮಠದ ಭಟ್ಟಾರಕ ಶ್ರೀ ಮಾತನಾಡಿ, ಸಿನಿಮಾದಲ್ಲಿನ ದೃಶ್ಯಗಳು ಭೀಭತ್ಸವಾಗಿದೆ. ಇಂತಹ ಸ್ಥಿತಿ ಮುಂದೆ ಯಾವತ್ತೂ ಬರಬಾರದು. ಅದಕ್ಕಾಗಿ ಹಿಂದು- ಮುಸ್ಲಿಮರು ಸೌಹಾರ್ದದಿಂದ ಬಾಳಬೇಕು. ದೇಶದ ಸಂಸ್ಕೃತಿಯನ್ನು ಎತ್ತಿ ಹಿಡಿಯಬೇಕು ಎಂದು ಹೇಳಿದರು. ವಿಶ್ವ ಹಿಂದು ಪರಿಷತ್ತಿನಿಂದ ಹತ್ತು ಜನ ಸಂತರು ಮತ್ತು ನೂರಾರು ಕಾರ್ಯಕರ್ತರಿಗೆ ಸಿನಿಮಾ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.
Mangalore It is because of Congress failure we are seeing Kashmir files movies says Gurupura Vajradehi Swamiji after watching the movie at cinepolis in city center.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm