ಬ್ರೇಕಿಂಗ್ ನ್ಯೂಸ್
30-03-22 11:51 am Mangalore Correspondent ಕರಾವಳಿ
ಮಂಗಳೂರು, ಮಾ.30: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಕೊಣಾಜೆ ವಿವಿಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮೆರವಣಿಗೆಯಲ್ಲಿ ನಡೆದು ಬಂದ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳನ್ನು ಪೊಲೀಸರು ವಿವಿಯ ಪ್ರವೇಶ ದ್ವಾರದಲ್ಲಿ ತಡೆದಿದ್ದಾರೆ. ಹೀಗಾಗಿ ಆವರಣ ದ್ವಾರದಲ್ಲಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದು ವಿಶ್ವವಿದ್ಯಾನಿಲಯದ ಆಡಳಿತ ಮತ್ತು ಕಲ್ಲಡ್ಕ ಪ್ರಭಾಕರ ಅವರಿಗೆ ಧಿಕ್ಕಾರ ಕೂಗಿದ್ದಾರೆ. ಮುತ್ತಿಗೆ ಹಿನ್ನೆಲೆಯಲ್ಲಿ ವಿವಿ ಕ್ಯಾಂಪಸ್ ಆವರಣದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.
ಇದೇ ವೇಳೆ ಮಾತನಾಡಿದ ಕ್ಯಾಂಪಸ್ ಫ್ರಂಟ್ ನಾಯಕರು, ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಪೂರಿತ ಭಾಷಣ ಮಾಡುತ್ತಿದ್ದು ಜಿಲ್ಲೆಯಾದ್ಯಂತ ವಿವಿಧ ಠಾಣೆಗಳಲ್ಲಿ ಅವರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಇಂತಹ ವ್ಯಕ್ತಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ ಕಾರ್ಯಕ್ರಮಕ್ಕೆ ಯಾಕೆ ಕರೆಯಬೇಕು. ಅವರಿಂದಾಗಿ ವಿವಿ ಕ್ಯಾಂಪಸ್ ನಲ್ಲಿ ಶಾಂತಿ ಕದಡುವ ಸಾಧ್ಯತೆ ಇದೆಯೆಂದು ಆರೋಪಿಸಿ, ಪೊಲೀಸರ ತಡೆಯನ್ನು ಭೇದಿಸಿ ಒಳನುಗ್ಗಲು ಯತ್ನಿಸಿದ್ದಾರೆ. ಸ್ಥಳದಲ್ಲಿ 50ರಿಂದ 70ರಷ್ಟು ವಿದ್ಯಾರ್ಥಿಗಳು ಸೇರಿದ್ದು ಕೆಲಹೊತ್ತು ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಜಟಾಪಟಿ ನಡೆಯಿತು.
ಬಳಿಕ ಪೊಲೀಸರು ಬಸ್ಸಿನಲ್ಲಿ ತುಂಬಿಸಿ, ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಒಂದಷ್ಟು ಮಂದಿ ಕಾರ್ಯಕರ್ತರು ಪೊಲೀಸರು ಬಂಧಿಸಲು ಮುಂದಾದಾಗ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಕ್ಯಾಂಪಸ್ ಪ್ರವೇಶ ದ್ವಾರದಲ್ಲಿ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರ ಪ್ರತಿಭಟನೆ ನಡೆಯುತ್ತಿದ್ದಂತೆಯೇ ಮತ್ತೊಂದು ಕಡೆಯಿಂದ ಕ್ಯಾಂಪಸಿನ ಸಭಾಂಗಣಕ್ಕೆ ಬಂದ ಕಲ್ಲಡ್ಕ ಪ್ರಭಾಕರ ಭಟ್ಟರು ವಿದ್ಯಾರ್ಥಿ ಪರಿಷತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಕಲ್ಲಡ್ಕ ಭಟ್ ಉದ್ಘಾಟಕರಾಗಿದ್ದರೆ ಉಪ ಕುಲಪತಿ ಪಿ.ಎಸ್. ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು.
Campus front of India gherao Mangalore University for inviting Kalladka Prabhakar Bhat for event. More than 50 to 70 student Protesters were taken into custody by police.
13-09-25 07:50 pm
Bangalore Correspondent
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm