ಬ್ರೇಕಿಂಗ್ ನ್ಯೂಸ್
23-09-20 11:32 am Mangalore Correspondent ಕರಾವಳಿ
ಮಂಗಳೂರು, ಸೆ. 23: ತೀವ್ರ ಆಕ್ಷೇಪ, ವಿವಾದಕ್ಕೆ ಕಾರಣವಾಗಿದ್ದ ಲೈಟ್ಹೌಸ್ ರಸ್ತೆಗೆ ಇಂದು ಸರಕಾರದ ಆದೇಶದಂತೆ ‘ಮುಲ್ಕಿ ಸುಂದರ ರಾಮ ಶೆಟ್ಟಿ ರಸ್ತೆ’ ನಾಮಕರಣ ಮಾಡಲಾಯಿತು.
ಮೇಯರ್ ದಿವಾಕರ ಪಾಂಡೇಶ್ವರ ಅವರು ಕೆಥೊಲಿಕ್ ಕ್ಲಬ್ ಬಳಿ ಮುಲ್ಕಿ ಸುಂದರ ರಾಮ ಶೆಟ್ಟಿ ನಾಮಫಲಕವನ್ನು ಅನಾವರಣಗೊಳಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಇದೊಂದು ಹೆಮ್ಮೆಯ ಕಾರ್ಯಕ್ರಮ. ಮುಲ್ಕಿ ಸುಂದರ ರಾಮ ಶೆಟ್ಟಿಯವರ ಎಲ್ಲಾ ಅಭಿಮಾನಿಗಳು ಸಂಭ್ರಮ ಪಡುವ ದಿನ ಎಂದರು.
ಈ ಸಂದರ್ಭ ಉಪಸ್ಥಿತರಿದ್ದ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಮಾತನಾಡಿ, ಇಲ್ಲೇ ಹುಟ್ಟಿ ಬೆಳೆದ ವಿಜಯ ಬ್ಯಾಂಕನ್ನು ಉಳಿಸಿಕೊಳ್ಳಲಾಗದಿದ್ದರೂ, ಮುಲ್ಕಿ ಸುಂದರ ರಾಮ ಶೆಟ್ಟಿ ಅವರ ಹೆಸರನ್ನು ನೆನಪಿಸುವ ಕಾರ್ಯವನ್ನು ಮಾಡಲಾಗಿದೆ ಎಂದರು.


ಮುಲ್ಕಿ ಸುಂದರ ರಾಮ ಶೆಟ್ಟಿ ಅಭಿಮಾನಿ ಬಳಗದ ಗೌರವಾಧ್ಯಕ್ಷ ಸದಾನಂದ ಶೆಟ್ಟಿ, ಕಾರ್ಯಕಾರಿ ಅಧ್ಯಕ್ಷ ಎ.ಬಿ. ಶೆಟ್ಟಿ ಮಾತನಾಡಿ ಸಂತಸ ವ್ಯಕ್ತಪಡಿಸಿದರು. ಉಪ ಮೇಯರ್ ವೇದಾವತಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಮುಲ್ಕಿ ಸುಂದರ ರಾಮ ಶೆಟ್ಟಿ ಅಭಿಮಾನಿ ಬಳಗದ ಕಾರ್ಯದರ್ಶಿ ಮುಲ್ಕಿ ಕರುಣಾಕರ ಶೆಟ್ಟಿ, ಅಜಿತ್ ಕುಮಾರ್ ಮಾಲಾಡಿ, ಮಾಜಿ ಮೇಯರ್ ಮಹಾಬಲ ಮಾರ್ಲ ಮೊದಲಾದವರು ಉಪಸ್ಥಿತರಿದ್ದರು.
ನಾಮಫಲಕ ಅನಾವರಣದ ಬಳಿಕ ಸೇರಿದ್ದವರು ಚೆಂಡೆ, ಮದ್ದಳೆಯೊಂದಿಗೆ ಲೈಟ್ಹೌಸ್ನಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am