ಬ್ರೇಕಿಂಗ್ ನ್ಯೂಸ್
06-04-22 06:06 pm Mangalore Correspondent ಕರಾವಳಿ
ಪುತ್ತೂರು, ಎ.6: ಉಪ್ಪಿನಂಗಡಿ ಬಳಿಯ ಗುಂಡ್ಯದಲ್ಲಿ ಅನೈತಿಕ ಪೊಲೀಸ್ ಪ್ರಕರಣದಲ್ಲಿ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ ಘಟನೆ ಸಂಬಂಧಿಸಿ ಹಿಂದು ಸಂಘಟನೆಯ ಕಾರ್ಯಕರ್ತರು ಪುತ್ತೂರು ಶಾಸಕರನ್ನು ರಾತ್ರೋರಾತ್ರಿ ಅರ್ಧ ದಾರಿಯಲ್ಲಿ ಬಸ್ಸಿನಿಂದ ಇಳಿಸಿ ತರಾಟೆಗೆತ್ತಿಕೊಂಡ ಘಟನೆ ನಡೆದಿದ್ದು , ಶಾಸಕರ ವಿರುದ್ಧ ಘೆರಾವ್ ಹಾಕಿದ್ದಾರೆ.
ಎ.5ರ ಮಂಗಳವಾರ ಮಧ್ಯಾಹ್ನ ನಜೀರ್ ಎಂಬ ಪುತ್ತೂರಿನ ಯುವಕನೊಬ್ಬ ಹಿಂದು ಯುವತಿಯನ್ನು ಆಟೋದಲ್ಲಿ ಕರೆದೊಯ್ಯುತ್ತಿದ್ದಾಗ ಗುಂಡ್ಯದಲ್ಲಿ ಹಿಂದು ಸಂಘಟನೆಗಳ ಯುವಕರು ಅಡ್ಡ ಹಾಕಿದ್ದರು. ಆನಂತರ, ಯುವಕ ನಜೀರ್ ಮೇಲೆ ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ಹಲ್ಲೆಗೊಳಗಾದ ನಜೀರ್ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಪೊಲೀಸರು ಸಂಜೆ ಹೊತ್ತಿಗೆ ಹಿಂದು ಸಂಘಟನೆಗೆ ಸೇರಿದ ಐವರು ಯುವಕರನ್ನು ಬಂಧಿಸಿದ್ದರು. ಸುರೇಂದ್ರ, ತೀರ್ಥಪ್ರಸಾದ್, ಜಿತೇಶ್, ಬಾಲಚಂದ್ರ, ರಂಜಿತ್ ಬಂಧಿತರಾಗಿದ್ದರು.

ಪೊಲೀಸರು ಬಂಧನ ಕಾರ್ಯಾಚರಣೆ ಬೆನ್ನಲ್ಲೇ ಅಲ್ಲಿನ ಸಂಘಟನೆಯ ಕಾರ್ಯಕರ್ತರು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ಫೋನ್ ಮಾಡಿದ್ದರು. ಮಠಂದೂರು ಪುತ್ತೂರಿನಲ್ಲಿಯೇ ಇದ್ದರೂ, ತಾನು ಊರಲ್ಲಿ ಇಲ್ಲ. ಆಮೇಲೆ ನೋಡುತ್ತೇನೆ ಎಂದು ನುಣುಚಿಕೊಂಡಿದ್ದರು ಎನ್ನಲಾಗಿದೆ. ಆದರೆ, ಶಾಸಕರು ಊರಲ್ಲೇ ಇರುವ ಬಗ್ಗೆ ಮಾಹಿತಿ ಹೊಂದಿದ್ದ ಸಂಘಟನೆಯ ಕಾರ್ಯಕರ್ತರು ಮಠಂದೂರು ಎಲ್ಲಿ ಹೋಗುತ್ತಾರೆ ಅನ್ನುವುದರ ಬಗ್ಗೆ ನಿಗಾ ಇಟ್ಟಿದ್ದರು. ರಾತ್ರಿ ವೇಳೆ ಶಾಸಕ ಮಠಂದೂರು ಪುತ್ತೂರಿನಿಂದ ಬೆಂಗಳೂರಿಗೆ ತೆರಳಲು ಕೆಎಸ್ಸಾರ್ಟಿಸಿ ವೋಲ್ವೋ ಬಸ್ ಹತ್ತಿದ್ದರು.

ಈ ಬಗ್ಗೆ ಮಾಹಿತಿ ಪಡೆದಿದ್ದ ಹಿಂದು ಸಂಘಟನೆ ಕಾರ್ಯಕರ್ತರು ಉಪ್ಪಿನಂಗಡಿ ಹೆದ್ದಾರಿಯಲ್ಲಿ ಬಸ್ಸನ್ನು ಅಡ್ಡಗಟ್ಟಿದ್ದು, ಶಾಸಕ ಸಂಜೀವ ಮಠಂದೂರು ಅವರಿಗೆ ಘೆರಾವ್ ಹಾಕಿದ್ದಾರೆ. ಅಲ್ಲದೆ, ಶಾಸಕರನ್ನು ಬಸ್ಸಿನಿಂದ ಕೆಳಕ್ಕಿಳಿಸಿ ಸುಳ್ಳು ಹೇಳಿದ್ದಕ್ಕೆ ತರಾಟೆಗೆ ಎತ್ತಿಕೊಂಡಿದ್ದಾರೆ. ನಮ್ಮ ಯುವಕರು ಹಿಂದುತ್ವದ ರಕ್ಷಣೆಗಾಗಿ ಕೆಲಸ ಮಾಡಿದ್ದಾರೆ. ಅವರನ್ನು ರಕ್ಷಣೆ ಮಾಡಲಾಗದ ನೀವು ತಾನು ಊರಲ್ಲೇ ಇಲ್ಲ ಎಂದು ಸುಳ್ಳು ಹೇಳಿದ್ದೀರಲ್ಲಾ ಎಂದು ಬೈದಿದ್ದಾರೆ.
Moral Policing in Gundya, VHP members gherao MLA travelling in KSRTC Bus in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm