ಬ್ರೇಕಿಂಗ್ ನ್ಯೂಸ್
06-04-22 06:06 pm Mangalore Correspondent ಕರಾವಳಿ
ಪುತ್ತೂರು, ಎ.6: ಉಪ್ಪಿನಂಗಡಿ ಬಳಿಯ ಗುಂಡ್ಯದಲ್ಲಿ ಅನೈತಿಕ ಪೊಲೀಸ್ ಪ್ರಕರಣದಲ್ಲಿ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ ಘಟನೆ ಸಂಬಂಧಿಸಿ ಹಿಂದು ಸಂಘಟನೆಯ ಕಾರ್ಯಕರ್ತರು ಪುತ್ತೂರು ಶಾಸಕರನ್ನು ರಾತ್ರೋರಾತ್ರಿ ಅರ್ಧ ದಾರಿಯಲ್ಲಿ ಬಸ್ಸಿನಿಂದ ಇಳಿಸಿ ತರಾಟೆಗೆತ್ತಿಕೊಂಡ ಘಟನೆ ನಡೆದಿದ್ದು , ಶಾಸಕರ ವಿರುದ್ಧ ಘೆರಾವ್ ಹಾಕಿದ್ದಾರೆ.
ಎ.5ರ ಮಂಗಳವಾರ ಮಧ್ಯಾಹ್ನ ನಜೀರ್ ಎಂಬ ಪುತ್ತೂರಿನ ಯುವಕನೊಬ್ಬ ಹಿಂದು ಯುವತಿಯನ್ನು ಆಟೋದಲ್ಲಿ ಕರೆದೊಯ್ಯುತ್ತಿದ್ದಾಗ ಗುಂಡ್ಯದಲ್ಲಿ ಹಿಂದು ಸಂಘಟನೆಗಳ ಯುವಕರು ಅಡ್ಡ ಹಾಕಿದ್ದರು. ಆನಂತರ, ಯುವಕ ನಜೀರ್ ಮೇಲೆ ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ಹಲ್ಲೆಗೊಳಗಾದ ನಜೀರ್ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಪೊಲೀಸರು ಸಂಜೆ ಹೊತ್ತಿಗೆ ಹಿಂದು ಸಂಘಟನೆಗೆ ಸೇರಿದ ಐವರು ಯುವಕರನ್ನು ಬಂಧಿಸಿದ್ದರು. ಸುರೇಂದ್ರ, ತೀರ್ಥಪ್ರಸಾದ್, ಜಿತೇಶ್, ಬಾಲಚಂದ್ರ, ರಂಜಿತ್ ಬಂಧಿತರಾಗಿದ್ದರು.
ಪೊಲೀಸರು ಬಂಧನ ಕಾರ್ಯಾಚರಣೆ ಬೆನ್ನಲ್ಲೇ ಅಲ್ಲಿನ ಸಂಘಟನೆಯ ಕಾರ್ಯಕರ್ತರು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ಫೋನ್ ಮಾಡಿದ್ದರು. ಮಠಂದೂರು ಪುತ್ತೂರಿನಲ್ಲಿಯೇ ಇದ್ದರೂ, ತಾನು ಊರಲ್ಲಿ ಇಲ್ಲ. ಆಮೇಲೆ ನೋಡುತ್ತೇನೆ ಎಂದು ನುಣುಚಿಕೊಂಡಿದ್ದರು ಎನ್ನಲಾಗಿದೆ. ಆದರೆ, ಶಾಸಕರು ಊರಲ್ಲೇ ಇರುವ ಬಗ್ಗೆ ಮಾಹಿತಿ ಹೊಂದಿದ್ದ ಸಂಘಟನೆಯ ಕಾರ್ಯಕರ್ತರು ಮಠಂದೂರು ಎಲ್ಲಿ ಹೋಗುತ್ತಾರೆ ಅನ್ನುವುದರ ಬಗ್ಗೆ ನಿಗಾ ಇಟ್ಟಿದ್ದರು. ರಾತ್ರಿ ವೇಳೆ ಶಾಸಕ ಮಠಂದೂರು ಪುತ್ತೂರಿನಿಂದ ಬೆಂಗಳೂರಿಗೆ ತೆರಳಲು ಕೆಎಸ್ಸಾರ್ಟಿಸಿ ವೋಲ್ವೋ ಬಸ್ ಹತ್ತಿದ್ದರು.
ಈ ಬಗ್ಗೆ ಮಾಹಿತಿ ಪಡೆದಿದ್ದ ಹಿಂದು ಸಂಘಟನೆ ಕಾರ್ಯಕರ್ತರು ಉಪ್ಪಿನಂಗಡಿ ಹೆದ್ದಾರಿಯಲ್ಲಿ ಬಸ್ಸನ್ನು ಅಡ್ಡಗಟ್ಟಿದ್ದು, ಶಾಸಕ ಸಂಜೀವ ಮಠಂದೂರು ಅವರಿಗೆ ಘೆರಾವ್ ಹಾಕಿದ್ದಾರೆ. ಅಲ್ಲದೆ, ಶಾಸಕರನ್ನು ಬಸ್ಸಿನಿಂದ ಕೆಳಕ್ಕಿಳಿಸಿ ಸುಳ್ಳು ಹೇಳಿದ್ದಕ್ಕೆ ತರಾಟೆಗೆ ಎತ್ತಿಕೊಂಡಿದ್ದಾರೆ. ನಮ್ಮ ಯುವಕರು ಹಿಂದುತ್ವದ ರಕ್ಷಣೆಗಾಗಿ ಕೆಲಸ ಮಾಡಿದ್ದಾರೆ. ಅವರನ್ನು ರಕ್ಷಣೆ ಮಾಡಲಾಗದ ನೀವು ತಾನು ಊರಲ್ಲೇ ಇಲ್ಲ ಎಂದು ಸುಳ್ಳು ಹೇಳಿದ್ದೀರಲ್ಲಾ ಎಂದು ಬೈದಿದ್ದಾರೆ.
Moral Policing in Gundya, VHP members gherao MLA travelling in KSRTC Bus in Mangalore.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 07:13 pm
HK News Desk
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm