ಬ್ರೇಕಿಂಗ್ ನ್ಯೂಸ್
23-09-20 03:51 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 23: ಮುಲ್ಕಿ ಸುಂದರರಾಮ ಶೆಟ್ಟಿ ಹೆಸರು ರಸ್ತೆ ನಾಮಕರಣದ ವಿವಾದ ಮುಗಿಯುತ್ತಲೇ ಒಂದು ವಿಭಾಗದವರು ನಾರಾಯಣ ಗುರು ಹೆಸರನ್ನು ಮಂಗಳೂರಿನ ವೃತ್ತವೊಂದಕ್ಕೆ ಇಡಬೇಕೆಂದು ಒತ್ತಾಯ ಆರಂಭಿಸಿದ್ದಾರೆ. ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರು ಹೆಸರು ಇಡಬೇಕೆಂದು ಬಿರುವೆರ್ ಕುಡ್ಲ ಸಂಘಟನೆಯಿಂದ ಮಹಾನಗರ ಪಾಲಿಕೆಗೆ ಮನವಿಯನ್ನೂ ನೀಡಲಾಗಿದೆ. ಈ ವಿಚಾರ ಪ್ರಸ್ತಾಪ ಆಗುತ್ತಲೇ ಲೇಡಿಹಿಲ್ ವೃತ್ತದ ಬಳಿ ಇರುವ ಶಾಲಾಡಳಿತ ಮಂಡಳಿಗಳು ವಿರೋಧ ಸೂಚಿಸಿದ್ದು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ.
ಈ ನಡುವೆ, ಕೆಲವರು ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು ಖಾಸಗಿ ಬಸ್ ಗಳ ಮುಂದೆ ನಾರಾಯಣ ಗುರು ಸರ್ಕಲ್ ಎಂದು ಸ್ಟಿಕ್ಕರ್ ಅಂಟಿಸಿದ್ದಾರೆ. ಲೇಡಿಹಿಲ್ ದಾರಿಯಾಗಿ ಸಾಗುವ ಬಸ್ ಗಳ ಮುಂಭಾಗದಲ್ಲಿ ಈ ಸ್ಟಿಕ್ಕರ್ ಕಾಣಿಸಿಕೊಂಡಿದೆ. ಬಿರುವೆರ್ ಕುಡ್ಲ ಸಂಘಟನೆಯ ವತಿಯಿಂದ ಹೀಗೊಂದು ಅಭಿಯಾನ ನಡೀತಿದ್ಯಾ ಅನುಮಾನ ಕೇಳಿಬಂದಿದೆ. ಆದರೆ ಬಸ್ಸಿನ ಮುಂದೆ ಸ್ಟಿಕ್ಕರ್ ಅಂಟಿಸಿದ ಮಾತ್ರಕ್ಕೆ ಅಲ್ಲಿನ ಹೆಸರು ಬದಲಾವಣೆ ಆಗಲ್ಲ..! ಅಂಥ ಒತ್ತಾಯಕ್ಕೆ ಮತ್ತೊಂದಷ್ಟು ಒತ್ತಡ ಬೀಳುವುದಂತೂ ಖಚಿತ.

ಹೀಗೊಂದು ವಿವಾದ ಎದ್ದಿರುವ ಬಗ್ಗೆ ಬಿಲ್ಲವ ಸಂಘಗಳ ಅಭಿಪ್ರಾಯ ಕೇಳಿದರೆ ನಾವೇನು ಅಂತಹ ಒತ್ತಾಯ ಮಾಡಿಲ್ಲ ಎನ್ನುತ್ತಾರೆ. ನಾರಾಯಣ ಗುರು ಶಾಂತಿಪ್ರಿಯರು. ಎಲ್ಲರೂ ಒಂದೇ ಎಂದು ಸಾರಿದವರು. ಅಂಥ ವ್ಯಕ್ತಿಯ ಹೆಸರಲ್ಲಿ ವಿವಾದ ಎಬ್ಬಿಸಬಾರದು. ಈ ವಿವಾದಗಳ ಹಿಂದೆ ರಾಜಕೀಯ ಇದೆ. ಗುರುಗಳ ಹೆಸರಿಡುವ ವಿಚಾರವನ್ನು ಶಾಂತಿಯುತವಾಗೇ ಮುಗಿಸಬೇಕು. ಗುರುಗಳ ಹೆಸರಿಡುವುದಿದ್ದರೆ ಲೇಡಿಹಿಲ್ ವೃತ್ತವೇ ಆಗಬೇಕಂತಿಲ್ಲ. ಹೆಸರು ಇಲ್ಲದ ವೃತ್ತಗಳಿಗೆ ಇಟ್ಟು ಸೌಹಾರ್ದದಿಂದ ಕೆಲಸ ಮುಗಿಸಬಹುದು. ಹಂಪನಕಟ್ಟೆಯ ವೃತ್ತಕ್ಕೆ ಯಾವುದೇ ಹೆಸರಿಲ್ಲ. ಮಂಗಳೂರಿನಲ್ಲಿ ಪ್ರಮುಖ ವೃತ್ತವೂ ಹೌದು.. ಹಾಗೆ ನೋಡಿದರೆ ಹಂಪನಕಟ್ಟೆ ಸಿಗ್ನಲ್ ವೃತ್ತಕ್ಕೆ ನಾರಾಯಣ ಗುರುಗಳ ಹೆಸರು ಇಡಬಹುದು ಎಂದು ಬಿಲ್ಲವ ಸಂಘಟನೆಯ ಪ್ರಮುಖರೊಬ್ವರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 01:23 pm
HK News Desk
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm