ಬ್ರೇಕಿಂಗ್ ನ್ಯೂಸ್
08-04-22 03:54 pm Mangalore Correspondent ಕರಾವಳಿ
ಮಂಗಳೂರು, ಎ.8 :ಖಾಸಗಿ ಸಿಟಿ ಬಸ್ಸೊಂದಕ್ಕೆ ಬೈಕ್ ಡಿಕ್ಕಿಯಾದ ರಭಸಕ್ಕೆ ನೋಡ ನೋಡುತ್ತಲೇ ಬೆಂಕಿ ಹತ್ತಿಕೊಂಡು ಧಗ ಧಗನೆ ಹೊತ್ತಿ ಉರಿದ ಘಟನೆ ನಗರದ ಹಂಪನಕಟ್ಟೆಯಲ್ಲಿ ನಡೆದಿದೆ.
ಸುರತ್ಕಲ್ ಜನತಾ ಕಾಲನಿಯಿಂದ ಬರುತ್ತಿದ್ದ ರೂಟ್ ನಂಬರ್ 45 ಜಿ ಸಂಖ್ಯೆಯ ಏಶೆಲ್ ಹೆಸರಿನ ಬಸ್ ಬೆಂಕಿಗಾಹುತಿಯಾಗಿದೆ. ಬಿಸಿಳ ಝಳದ ನಡುವೆ ಬಸ್ ಮಧ್ಯಾಹ್ನ ಸ್ಟೇಟ್ ಬ್ಯಾಂಕಿನತ್ತ ಬರುತ್ತಿದ್ದು ಹಂಪನಕಟ್ಟೆಯಲ್ಲಿ ಸಾಗುತ್ತಿದ್ದಾಗಲೇ ಗಣಪತಿ ಹೈಸ್ಕೂಲ್ ರಸ್ತೆಯ ಕಡೆಯಿಂದ ನುಗ್ಗಿ ಬಂದ್ ಬೈಕ್ ಸವಾರನ ನಿಯಂತ್ರಣ ತಪ್ಪಿ ಬಸ್ಸಿಗೆ ಡಿಕ್ಕಿಯಾಗಿದೆ. ಈ ವೇಳೆ, ಬೈಕ್ ನೇರವಾಗಿ ಬಸ್ಸಿನಡಿಗೆ ಹೋಗಿದ್ದು ಸವಾರ ರಸ್ತೆಗೆ ಬಿದ್ದಿದ್ದ. ಸವಾರನನ್ನು ಕೂಡಲೇ ಎತ್ತಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



ಅಷ್ಟರಲ್ಲಿ ಬಸ್ಸಿನಡಿ ಇದ್ದ ಬೈಕಿನಲ್ಲಿ ಪೆಟ್ರೋಲ್ ಲೀಕ್ ಆಗಿ ಬೆಂಕಿಯ ಕಿಡಿ ಹೊತ್ತಿಕೊಂಡಿದೆ. ನಿಧಾನಕ್ಕೆ ಬಸ್ಸಿನ ಅಡಿಭಾಗದಿಂದ ಬೆಂಕಿ ಹೊತ್ತಿಕೊಂಡಿದ್ದು ನಂದಿಸಲು ಸಕಾಲದಲ್ಲಿ ನೀರು ಸಿಗಲಿಲ್ಲ. ಇದರಿಂದ ಬೆಂಕಿ ಪೂರ್ತಿ ಆವರಿಸಿಕೊಂಡು ಧಗಧಗನೆ ಹೊತ್ತಿ ಉರಿದಿದೆ. ಬೈಕ್ ಪೂರ್ತಿ ಸುಟ್ಟು ಹೋಗಿದ್ದು ಬಸ್ 75 ಶೇಕಡಾ ಉರಿದು ಹೋಗಿದೆ. ಅಷ್ಟರಲ್ಲಿ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದೆ. ವೆನ್ಲಾಕ್ ಆಸ್ಪತ್ರೆಯ ಎದುರಲ್ಲೇ ರಸ್ತೆಯಲ್ಲಿ ಘಟನೆ ನಡೆದಿದ್ದು ಎಲ್ಲರೂ ನೋಡ ನೋಡುತ್ತಲೇ ಬಸ್ ಉರಿದು ಹೋಗಿದೆ.




ಬೈಕ್ ಸವಾರನ ಕಾಲಿಗೆ ತೀವ್ರ ಗಾಯ ಆಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಸ್ಸಿಗೆ ನಾಲ್ಕು ವರ್ಷ ಆಗಿದೆ ಎಂದು ಬಸ್ ಮ್ಯಾನೇಜರ್ ತಿಳಿಸಿದ್ದು ಅಪಘಾತದಿಂದ ಹೊಸ ಬಸ್ ಪೂರ್ತಿ ಗುಜರಿಗೆ ಹೋಗುವಂತಾಗಿದೆ. ಮಧ್ಯಾಹ್ನ ಆಗಿದ್ದರಿಂದ ಬಸ್ಸಿನಲ್ಲಿ ಹೆಚ್ಚು ಜನ ಇರಲಿಲ್ಲ. ಅಪಘಾತ ನಡೆದ ಕೂಡಲೇ ಒಳಗಿದ್ದ ಪ್ರಯಾಣಿಕರು ಹೊರಕ್ಕೆ ಇಳಿದಿದ್ದಾರೆ. ಬಿಸಿಲ ಝಳ ಮತ್ತು ಕಾಂಕ್ರೀಟ್ ರಸ್ತೆಯ ಬಿಸಿಯ ಕಾರಣ ಸುಲಭದಲ್ಲಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿತ್ತು.
A youth suffered injuries after his motorcycle fell under a private bus ashel travels near Wenlock hospital on Friday April 8. The motorcycle and the bus caught fire as the bus dragged the motorcycle for a few meteres before coming to halt. The injured rider has been identified as Dylon (26).The incident took place at around 2.45 pm.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm