ಬ್ರೇಕಿಂಗ್ ನ್ಯೂಸ್
09-04-22 12:03 pm Mangalore Correspondent ಕರಾವಳಿ
ಮಂಗಳೂರು, ಎ.9: ರಾ.ಹೆ. 66 ರ ಎಕ್ಕೂರಿನಲ್ಲಿ ಇಂದು ಮುಂಜಾನೆ ನಡೆದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೊಲ್ಯ ಕಣೀರುತೋಟ ನಿವಾಸಿ ರವಿ ಕುಮಾರ್ (59) ಮೃತಪಟ್ಟ ದುರ್ದೈವಿ. ಇಂದು ಬೆಳಗ್ಗೆ ರವಿ ಅವರು ತಮ್ಮ ಮೋಟಾರ್ ಬೈಕಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದ್ದು ತಲೆ ಸಂಪೂರ್ಣ ಜಜ್ಜಿ ಹೋಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಕ್ಕೂರು ಬಸ್ಸು ನಿಲ್ದಾಣದ ಬಳಿ ಅಪಘಾತ ನಡೆದಿದ್ದು ಲಾರಿ ಹರಿದು ಅಪಘಾತ ಸಂಭವಿಸಿದೆಯೆಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಧಾವಿಸಿದ ದಕ್ಷಿಣ ಸಂಚಾರಿ ಠಾಣಾ ಪೊಲೀಸರು ರಕ್ತದ ಮಡುವಲ್ಲಿದ್ದ ರವಿಕುಮಾರ್ ಅವರನ್ನ ಎತ್ತಿ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದು ಅದಾಗಲೇ ರವಿ ಅವರು ಸಾವಿಗೀಡಾಗಿದ್ದರು. ಘಟನೆಗೆ ಕಾರಣ ಎಂದು ಹೇಳಲಾಗುತ್ತಿರುವ ಲಾರಿಯೊಂದನ್ನ ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ.



ರವಿ ಅವರು ವೃತ್ತಿಪರ ಚಿತ್ರಕಲೆಗಾರರಾಗಿದ್ದು, ಕೊಲ್ಯ ಮೂಕಾಂಬಿಕಾ ದೇವಸ್ಥಾನದ ಬಳಿ ಜಿನಸಿ ಅಂಗಡಿ ಹೊಂದಿದ್ದಾರೆ. ತನ್ನ ಇಬ್ಬರು ಪುತ್ರರಲ್ಲಿ ಹಿರಿಯವ ವಿವಾಹಿತನಾಗಿದ್ದು, ಕಿರಿಯವನಿಗೆ ಎರಡು ವಾರದ ಹಿಂದಷ್ಟೆ ವಿವಾಹ ನಿಶ್ಚಿತಾರ್ಥ ನಡೆದಿತ್ತು. ಪುತ್ರನ ಮದುವೆ ತಯಾರಿಯಲ್ಲಿದ್ದ ರವಿಕುಮಾರ್ ಅವರು ಅಪಘಾತದಿಂದ ಇಹಲೋಕ ತ್ಯಜಿಸಿದ್ದು ಕುಟುಂಬವನ್ನ ಕಣ್ಣೀರಲ್ಲಿ ಮುಳುಗಿಸಿದೆ.
Mangalore 59 year old Man dies in road accident after Truck rams his bike. The deceased has been identified as Ravi Kumar. It is said that he was busy with his sons wedding arrangements. Ravi Kumar is said to be a artist by professon. The accident took place at Yekkur in the early morning.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
34 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm