ಬ್ರೇಕಿಂಗ್ ನ್ಯೂಸ್
09-04-22 03:31 pm Mangalore Correspondent ಕರಾವಳಿ
ಪುತ್ತೂರು, ಎ.9 : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವ ಎಪ್ರಿಲ್ 10 ರಿಂದ 20ರ ತನಕ ನಡೆಯಲಿದ್ದು, ಈ ಬಾರಿ ಅನ್ಯಧರ್ಮೀಯರಿಗೆ ಉತ್ಸವ ಸಂದರ್ಭದಲ್ಲಿ ವ್ಯಾಪಾರಕ್ಕೆ ನಿಷೇಧ ಹೇರುವ ಜೊತೆಗೆ ಆಟೋ ರಿಕ್ಷಾ ಸೇರಿ ಟ್ಯಾಕ್ಸಿ ವಾಹನಗಳಿಗೂ ನಿರ್ಬಂಧ ಹೇರಲು ಹಿಂದು ಸಂಘಟನೆಗಳು ಸಿದ್ಧತೆ ನಡೆಸಿವೆ.
ಪುತ್ತೂರು ಜಾತ್ರೆ ಸಂದರ್ಭದಲ್ಲಿ ಭಕ್ತರು ಮುಸ್ಲಿಮರ ಆಟೋ, ಕ್ಯಾಬ್ಗಳನ್ನು ಬಳಕೆ ಮಾಡದಂತಾಗಲು ಹಿಂದುಗಳ ಆಟೋ ಇನ್ನಿತರ ವಾಹನಗಳಿಗೆ ಕೇಸರಿ ಧ್ವಜ ನೀಡುವ ಅಭಿಯಾನಕ್ಕೆ ಹಿಂದು ಜಾಗರಣ ವೇದಿಕೆ ಮುಂದಾಗಿದೆ. ಪುತ್ತೂರಿನ ಆಟೋ ಚಾಲಕರಿಗೆ ಭಗವಧ್ವಾಜವನ್ನು ವಿತರಣೆ ಮಾಡಲಾಗುತ್ತಿದ್ದು ಹಿಂದುಗಳು ಮುಸ್ಲಿಮರ ವಾಹನಗಳನ್ನು ಕಾರ್ಯಕರ್ತರು ಬಳಸದಂತೆ ಕರೆ ನೀಡುತ್ತಿದ್ದಾರೆ.


ಜಾತ್ರೆಯ ಸಂದರ್ಭದಲ್ಲಿ ಅನ್ಯಧರ್ಮೀಯ ಯುವಕರು ಹಿಂದು ಹೆಣ್ಣು ಮಕ್ಕಳನ್ನು ಮೋಸದ ಜಾಲದಲ್ಲಿ ಸಿಲುಕಿಸುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿರುವ ಹಿಂದೂ ಜಾಗರಣ ವೇದಿಕೆಯ ನಾಯಕರು, ಭಗವಾಧ್ವಜ ಇರುವ ಆಟೋಗಳಲ್ಲಿ ಮಾತ್ರವೇ ಭಕ್ತಾದಿಗಳು ಜಾತ್ರೆಗೆ ಆಗಮಿಸಬೇಕು. ಅದಕ್ಕಾಗಿ ಹಿಂದುಗಳ ಆಟೋಗಳಿಗೆ ಕೇಸರಿ ಧ್ವಜ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೆ, ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರಕಾರದಿಂದ ಹಿಂದೂಗಳಿಗೆ ಯಾವುದೇ ಸಹಾಯ ದೊರೆಯುತ್ತಿಲ್ಲ. ಹಿಂದೂ ಕಾರ್ಯಕರ್ತರ ಮೇಲೆ ಕೇಸು ದಾಖಲಿಸಲಾಗುತ್ತಿದ್ದು , ಅದಕ್ಕಾಗಿ ಹಿಂದು ಸಮಾಜವೇ ಸ್ವತಃ ಕಾರ್ಯಾಚರಣೆಗೆ ಇಳಿದಿದೆ ಎನ್ನುವ ವಾದವನ್ನು ಹಿಂಜಾವೇ ಮುಖಂಡರು ಮುಂದಿಟ್ಟಿದ್ದಾರೆ. ಹಿಂಜಾವೇ ಕಾರ್ಯಕರ್ತರ ಹೊಸ ನಡೆ ಚರ್ಚೆಗೆ ಕಾರಣವಾಗಿದ್ದು, ಧರ್ಮ ಸಂಘರ್ಷಕ್ಕೆ ಮತ್ತೊಂದು ಕಾರಣ ಸಿಕ್ಕಂತಾಗಿದೆ.


ಇತ್ತೀಚೆಗೆ ಪುತ್ತೂರು ಜಾತ್ರೆ ಸಂದರ್ಭದಲ್ಲಿ ಅನ್ಯಧರ್ಮೀಯರಿಗೆ ಅವಕಾಶ ಇಲ್ಲವೆಂದು ದೇವಸ್ಥಾನದ ಆಡಳಿತ ಮಂಡಳಿಯೇ ನಿರ್ಧಾರ ಮಾಡಿದ್ದಲ್ಲದೆ, ವ್ಯಾಪಾರಸ್ಥರ ಏಲಂ ಪ್ರಕಟಣೆಯಲ್ಲಿ ಬಹಿರಂಗವಾಗಿಯೇ ಹೇಳಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಆಡಳಿತ ಮಂಡಳಿ ಸದಸ್ಯರು, 2013 ರಿಂದಲೇ ಇದೇ ನೀತಿ ಅನುಸರಿಸಲಾಗುತ್ತಿದೆ ಎಂದು ಹೇಳಿದ್ದರು.
Amid Hindu Muslim row in Karnataka a new controversy has erupted in Mangalore Dakshina Kannada at Puttur Shree Mahalingeshwara Temple annual feast where Muslim vehicles like auto cars two wheelers are not allowed inside the temple premises.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm