ಬ್ರೇಕಿಂಗ್ ನ್ಯೂಸ್
09-04-22 03:31 pm Mangalore Correspondent ಕರಾವಳಿ
ಪುತ್ತೂರು, ಎ.9 : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವ ಎಪ್ರಿಲ್ 10 ರಿಂದ 20ರ ತನಕ ನಡೆಯಲಿದ್ದು, ಈ ಬಾರಿ ಅನ್ಯಧರ್ಮೀಯರಿಗೆ ಉತ್ಸವ ಸಂದರ್ಭದಲ್ಲಿ ವ್ಯಾಪಾರಕ್ಕೆ ನಿಷೇಧ ಹೇರುವ ಜೊತೆಗೆ ಆಟೋ ರಿಕ್ಷಾ ಸೇರಿ ಟ್ಯಾಕ್ಸಿ ವಾಹನಗಳಿಗೂ ನಿರ್ಬಂಧ ಹೇರಲು ಹಿಂದು ಸಂಘಟನೆಗಳು ಸಿದ್ಧತೆ ನಡೆಸಿವೆ.
ಪುತ್ತೂರು ಜಾತ್ರೆ ಸಂದರ್ಭದಲ್ಲಿ ಭಕ್ತರು ಮುಸ್ಲಿಮರ ಆಟೋ, ಕ್ಯಾಬ್ಗಳನ್ನು ಬಳಕೆ ಮಾಡದಂತಾಗಲು ಹಿಂದುಗಳ ಆಟೋ ಇನ್ನಿತರ ವಾಹನಗಳಿಗೆ ಕೇಸರಿ ಧ್ವಜ ನೀಡುವ ಅಭಿಯಾನಕ್ಕೆ ಹಿಂದು ಜಾಗರಣ ವೇದಿಕೆ ಮುಂದಾಗಿದೆ. ಪುತ್ತೂರಿನ ಆಟೋ ಚಾಲಕರಿಗೆ ಭಗವಧ್ವಾಜವನ್ನು ವಿತರಣೆ ಮಾಡಲಾಗುತ್ತಿದ್ದು ಹಿಂದುಗಳು ಮುಸ್ಲಿಮರ ವಾಹನಗಳನ್ನು ಕಾರ್ಯಕರ್ತರು ಬಳಸದಂತೆ ಕರೆ ನೀಡುತ್ತಿದ್ದಾರೆ.
ಜಾತ್ರೆಯ ಸಂದರ್ಭದಲ್ಲಿ ಅನ್ಯಧರ್ಮೀಯ ಯುವಕರು ಹಿಂದು ಹೆಣ್ಣು ಮಕ್ಕಳನ್ನು ಮೋಸದ ಜಾಲದಲ್ಲಿ ಸಿಲುಕಿಸುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿರುವ ಹಿಂದೂ ಜಾಗರಣ ವೇದಿಕೆಯ ನಾಯಕರು, ಭಗವಾಧ್ವಜ ಇರುವ ಆಟೋಗಳಲ್ಲಿ ಮಾತ್ರವೇ ಭಕ್ತಾದಿಗಳು ಜಾತ್ರೆಗೆ ಆಗಮಿಸಬೇಕು. ಅದಕ್ಕಾಗಿ ಹಿಂದುಗಳ ಆಟೋಗಳಿಗೆ ಕೇಸರಿ ಧ್ವಜ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೆ, ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರಕಾರದಿಂದ ಹಿಂದೂಗಳಿಗೆ ಯಾವುದೇ ಸಹಾಯ ದೊರೆಯುತ್ತಿಲ್ಲ. ಹಿಂದೂ ಕಾರ್ಯಕರ್ತರ ಮೇಲೆ ಕೇಸು ದಾಖಲಿಸಲಾಗುತ್ತಿದ್ದು , ಅದಕ್ಕಾಗಿ ಹಿಂದು ಸಮಾಜವೇ ಸ್ವತಃ ಕಾರ್ಯಾಚರಣೆಗೆ ಇಳಿದಿದೆ ಎನ್ನುವ ವಾದವನ್ನು ಹಿಂಜಾವೇ ಮುಖಂಡರು ಮುಂದಿಟ್ಟಿದ್ದಾರೆ. ಹಿಂಜಾವೇ ಕಾರ್ಯಕರ್ತರ ಹೊಸ ನಡೆ ಚರ್ಚೆಗೆ ಕಾರಣವಾಗಿದ್ದು, ಧರ್ಮ ಸಂಘರ್ಷಕ್ಕೆ ಮತ್ತೊಂದು ಕಾರಣ ಸಿಕ್ಕಂತಾಗಿದೆ.
ಇತ್ತೀಚೆಗೆ ಪುತ್ತೂರು ಜಾತ್ರೆ ಸಂದರ್ಭದಲ್ಲಿ ಅನ್ಯಧರ್ಮೀಯರಿಗೆ ಅವಕಾಶ ಇಲ್ಲವೆಂದು ದೇವಸ್ಥಾನದ ಆಡಳಿತ ಮಂಡಳಿಯೇ ನಿರ್ಧಾರ ಮಾಡಿದ್ದಲ್ಲದೆ, ವ್ಯಾಪಾರಸ್ಥರ ಏಲಂ ಪ್ರಕಟಣೆಯಲ್ಲಿ ಬಹಿರಂಗವಾಗಿಯೇ ಹೇಳಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಆಡಳಿತ ಮಂಡಳಿ ಸದಸ್ಯರು, 2013 ರಿಂದಲೇ ಇದೇ ನೀತಿ ಅನುಸರಿಸಲಾಗುತ್ತಿದೆ ಎಂದು ಹೇಳಿದ್ದರು.
Amid Hindu Muslim row in Karnataka a new controversy has erupted in Mangalore Dakshina Kannada at Puttur Shree Mahalingeshwara Temple annual feast where Muslim vehicles like auto cars two wheelers are not allowed inside the temple premises.
13-09-25 07:50 pm
Bangalore Correspondent
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm