ಬ್ರೇಕಿಂಗ್ ನ್ಯೂಸ್
10-04-22 08:52 pm Mangalore Correspondent ಕರಾವಳಿ
ಮಂಗಳೂರು, ಎ.10: ನಿರ್ಲಕ್ಷ್ಯ ಮತ್ತು ಅತಿವೇಗದ ಚಾಲನೆಯಿಂದಾಗಿ ಡಿವೈಡರ್ ಮೇಲೆರಗಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ವಾಹನಗಳಿಗೆ ಡಿಕ್ಕಿಯಾಗಿ ಸರಣಿ ಅಪಘಾತಕ್ಕೆ ಕಾರಣವಾದ ಪ್ರಕರಣದಲ್ಲಿ ಆರೋಪಿ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದು, ಕೋರ್ಟಿಗೆ ಹಾಜರು ಪಡಿಸಿ ಮೂರು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಶನಿವಾರ ಮಧ್ಯಾಹ್ನ ಮಂಗಳೂರು ನಗರದ ಎಂಜಿ ರಸ್ತೆಯಲ್ಲಿ ಅಪಘಾತ ನಡೆದಿತ್ತು. ಮಣ್ಣಗುಡ್ಡ ನಿವಾಸಿ ಶ್ರವಣ್ ದೇವಾಡಿಗ ಎಂಬಾತ ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಕಾರನ್ನು ಚಲಾಯಿಸಿ ಅಪಘಾತಕ್ಕೆ ಕಾರಣವಾಗಿದ್ದ. ಘಟನೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಎರಡು ಕಾರು ಮತ್ತು ಸ್ಕೂಟರ್ ಗೆ ಬಿಎಂಡಬ್ಲ್ಯು ಕಾರು ಡಿಕ್ಕಿಯಾಗಿತ್ತು. ಇದರಿಂದ ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ಮಂಗಳಾದೇವಿ ನಿವಾಸಿ ಪ್ರೀತಿ (47) ಎಂಬ ಮಹಿಳೆಗೆ ಗಂಭೀರ ಗಾಯವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.





ಪೊಲೀಸರು ಆರೋಪಿ ಶ್ರವಣ್ ದೇವಾಡಿಗ ಮೇಲೆ ಅಪರಾಧ ಕಲಂ 279ಸ 337, 338 ಪ್ರಕಾರ ಕೇಸು ದಾಖಲಿಸಿ ಕೋರ್ಟಿಗೆ ಹಾಜರು ಪಡಿಸಿದ್ದರು. ಅತಿ ವೇಗ ಮತ್ತು ನಿರ್ಲಕ್ಷ್ಯ ಚಾಲನೆಯಿಂದ ಜನರ ಪ್ರಾಣಕ್ಕೆ ಕುತ್ತು ಬರುವ ರೀತಿ ವರ್ತಿಸಿದ್ದರಿಂದ ಹೆಚ್ಚುವರಿಯಾಗಿ 308 ಕಲಂ ಅಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯ ಕೃತ್ಯ ಗಂಭೀರ ರೀತಿಯದಾಗಿದ್ದು ಕೊಲೆಯತ್ನಕ್ಕೆ ಸಮಾನ ಎನ್ನುವ ರೀತಿ ಪರಿಗಣಿಸಲಾಗಿದೆ. ಅಪಘಾತ ಪ್ರಕರಣದಲ್ಲಿ 308 ಪ್ರಕರಣ ದಾಖಲಿಸುವುದು ಅಪರೂಪವಾಗಿದ್ದು, ಗಂಭೀರ ಪ್ರಮಾದ ಆಗಿದ್ದಲ್ಲಿ ಮಾತ್ರ ದಾಖಲು ಮಾಡುತ್ತಾರೆ. ಈ ಕಲಂ ಅಡಿ ಆರೋಪಿಯನ್ನು ಮೂರು ದಿನಗಳ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಸೆಕ್ಷನ್ 308 ಪ್ರಕಾರ ಉದ್ದೇಶಪೂರ್ವಕವಾಗಿ ಮಾನವ ಹತ್ಯೆಯಾಗುವ ರೀತಿ ವರ್ತಿಸುವುದಾಗಿದ್ದು, ಆರೋಪ ಸಾಬೀತಾದಲ್ಲಿ ಮೂರು ವರ್ಷಕ್ಕಿಂತ ಹೆಚ್ಚು ಸಜೆ ನೀಡಬೇಕಾಗುತ್ತದೆ.




ಕಾನೂನು ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಈ ಸೆಕ್ಷನ್ ಅಳವಡಿಸಲಾಗಿದೆ. ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದ್ದು, ಕಾರಿನ ಇನ್ಶೂರೆನ್ಸ್ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಜೊತೆಗೆ ಆರೋಪಿ ಶ್ರವಣ್ ಡ್ರಗ್ಸ್ ಅಥವಾ ಮದ್ಯ ಸೇವನೆ ಮಾಡಿದ್ದನೇ ಎಂಬ ಬಗ್ಗೆಯೂ ತಪಾಸಣೆ ನಡೆಸಲಾಗುವುದು ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
Bmw car accident in Mangalore, driver taken into custody, attempt to murder case booked. The driver has been identified as Sharvan. A woman riding a scooter sustained serious injuries on Saturday after being hit by a speeding BMW car in Mangaluru.The incident took place at Ballalbagh junction around 1:20 in the afternoon and was captured on CCTV. As per reports the speeding BMW car jumped over a divider and crashed into the victim, throwing her under another car before the vehicle came to a stop.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
34 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm