ಬ್ರೇಕಿಂಗ್ ನ್ಯೂಸ್
11-04-22 10:28 pm Mangalore Correspondent ಕರಾವಳಿ
ಮಂಗಳೂರು, ಎ.11: ಸ್ನೇಹಿತರಿಂದ ಸಾಲ ಮಾಡಿ ಹಿಂತಿರುಗಿಸಲಾಗದ ಬೇಸರದಲ್ಲಿ ಯುವಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.
ಕಾಟಿಪಳ್ಳ ನಿವಾಸಿ ಕ್ಯಾಂಡ್ರಿಕ್ ಲಾರೆನ್ಸ್ ಡಿಸೋಜ(24) ಮೃತ ವ್ಯಕ್ತಿ. ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಸೋಮವಾರ ಬೆಳಗ್ಗೆ 11 ಗಂಟೆಗೆ ಮನೆ ಬಿಟ್ಟು ಹೋಗಿದ್ದ. ಪತ್ರವನ್ನು ನೋಡಿದ ತಾಯಿ ಬಳಿಕ ಹುಡುಕಾಟಕ್ಕೆ ತೊಡಗಿದ್ದರು. ಸುರತ್ಕಲ್ ಪೊಲೀಸರಿಗೂ ಮಾಹಿತಿ ನೀಡಿದ್ದರು. ಇದೇ ವೇಳೆ, ಮಧ್ಯಾಹ್ನ 3 ಗಂಟೆ ವೇಳೆಗೆ ಸುರತ್ಕಲ್ ಬಳಿಯ ಮಲ್ಲಮಾರು ಬೀಚ್ ನಲ್ಲಿ ಕ್ಯಾಂಡ್ರಿಕ್ ಲಾರೆನ್ಸ್ ಶವ ಪತ್ತೆಯಾಗಿದೆ.
ಡೆತ್ ನೋಟ್ ನಲ್ಲಿ ಕೆಲವರ ಹೆಸರು ಬರೆದಿದ್ದು ಅವರಿಗೆ ಆಗಬೇಕಾದ ಸಣ್ಣ ಪುಟ್ಟ ಹಣದ ಅವಶ್ಯಕತೆಗಳನ್ನು ಬರೆದಿದ್ದಾನೆ. ಅಲ್ಲದೆ, ಈ ಹಣವನ್ನು ಹಿಂತಿರುಗಿಸುವುದಕ್ಕಾಗಿ ತಾಯಿಯ ಬಂಗಾರವನ್ನು ಕೊಂಡೊಯ್ದಿದ್ದು 12 ಸಾವಿರ ರೂ.ಗೆ ಅಡವಿಟ್ಟಿದ್ದ. ಆದರೆ ಹಣವನ್ನು ಆಗಬೇಕಾದವರಿಗೆ ಹಿಂತಿರುಗಿಸಲಾಗದೆ ಕೈಯಲ್ಲಿ ಖರ್ಚಾಗಿ ಖಾಲಿಯಾಗಿತ್ತು ಎಂದು ಬರೆದಿದ್ದಾನೆ. ಜೊತೆಗೆ ಕುಡಿತದ ಚಟ ಹೊಂದಿದ್ದರಿಂದ ಅದಕ್ಕೇ ಹಣ ಖಾಲಿಯಾಗಿತ್ತು ಎನ್ನಲಾಗಿದೆ.
ಅಲ್ಲದೆ, ತನ್ನ ಮೊಬೈಲ್ ವಿವರಗಳನ್ನೂ ಡೆತ್ ನೋಟ್ ನಲ್ಲಿ ಬರೆದಿದ್ದಾನೆ. ಗೂಗಲ್ ಪೇ, ಎಟಿಎಂ ಇತ್ಯಾದಿ ಪಾಸ್ ವರ್ಡ್ ಗಳನ್ನು ಬರೆದಿದ್ದಲ್ಲದೆ, ಮೇಲಿನ ಕಾರಣವಲ್ಲದೆ ಸಾವಿಗೆ ಪ್ರಮುಖ ಕಾರಣವೊಂದು ಮೊಬೈಲಿನಲ್ಲಿದೆ. ಸಾರಿ ಅಮ್ಮಾ ಎನ್ನುತ್ತಾ ಪತ್ರವನ್ನು ಬರೆದು ಮುಗಿಸಿದ್ದಾನೆ. ತುಳು ಭಾಷೆಯಲ್ಲಿ ಇಂಗ್ಲಿಷ್ ವರ್ಣಮಾಲೆಯಲ್ಲಿ ಪತ್ರವನ್ನು ಬರೆಯಲಾಗಿದೆ. ಸಾಮಾನ್ಯ ಕುಟುಂಬದ ಲಾರೆನ್ಸ್ ಸಣ್ಣ ವಯಸ್ಸಿನಲ್ಲಿಯೇ ಖಾಸಗಿಯಾಗಿ ಕೆಲಸಕ್ಕೆ ಸೇರಿದ್ದು ಕುಡಿಯುವುದನ್ನೂ ರೂಢಿಸಿಕೊಂಡಿದ್ದ. ಇದೀಗ ಸಣ್ಣ ಮಟ್ಟಿನ ಸಾಲದ ಮೊತ್ತವನ್ನೇ ದೊಡ್ಡ ಸಮಸ್ಯೆಯನ್ನಾಗಿಸಿ ಜೀವನ ಮುಗಿಸಿದ್ದಾನೆ. ಸುರತ್ಕಲ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
A 20-year-old young man killed himself by drowning in Surathkal poice station limits on Monday, April 11. The deceased youth is Kandrik Lawrence D'Souza, son of 65-year-old Karnel D'Souza, a resident of Katipalla in Surathkal.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm