ಬ್ರೇಕಿಂಗ್ ನ್ಯೂಸ್
12-04-22 02:48 pm Mangalore Correspondent ಕರಾವಳಿ
ಮಂಗಳೂರು, ಎ.12: ಸಚಿವ ಈಶ್ವರಪ್ಪ ವಿರುದ್ಧ ಆರೋಪಿಸಿ ಸಾವಿಗೆ ಶರಣಾಗಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಸಂಪೂರ್ಣ ತನಿಖೆ ನಡೆಸಲಿದ್ದಾರೆ. ಮಂಗಳೂರಿನಿಂದ ವಿಧಿ ವಿಜ್ಞಾನ ಇಲಾಖೆಯ ತಜ್ಞರನ್ನು ಕಳಿಸಲು ಪೊಲೀಸರಿಗೆ ಸೂಚಿಸಿದ್ದೇನೆ. ಪ್ರಾಥಮಿಕ ತನಿಖೆಯ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಂತೋಷ್ ಪಾಟೀಲ್ ಸಾವಿಗೆ ಸಂಬಂಧಿಸಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಆ ಬಗ್ಗೆ ಪ್ರಾಥಮಿಕ ಮಾಹಿತಿಯನ್ನಷ್ಟೇ ಪಡೆದಿದ್ದೇನೆ. ಪೊಲೀಸರ ತನಿಖೆಯಲ್ಲಿ ನಾವು ಯಾವುದೇ ಒತ್ತಡ ಹೇರುವುದಿಲ್ಲ. ಪೊಲೀಸರು ಸ್ವತಂತ್ರವಾಗಿ ತನಿಖೆ ನಡೆಸಲಿದ್ದಾರೆ. ಸಂತೋಷ್ ಪಾಟೀಲ್ ಎನ್ನುವ ವ್ಯಕ್ತಿ ಯಾತಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಸಲಿದ್ದಾರೆ. ಆತ ಮಾಡಿದ್ದ ಆರೋಪದ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಈಶ್ವರಪ್ಪ ಸಾವಿಗೆ ಕಾರಣ ಎಂದು ನೇರ ಆರೋಪ ಮಾಡಲಾಗಿದೆ. ಇದಕ್ಕಾಗಿ ಈಶ್ವರಪ್ಪ ರಾಜಿನಾಮೆ ಕೇಳುತ್ತೀರಾ.. ಪ್ರತಿಪಕ್ಷದವರು ಮುಖ್ಯಮಂತ್ರಿ ರಾಜಿನಾಮೆಯನ್ನೂ ಕೇಳುತ್ತಿದ್ದಾರೆ ಎಂಬ ಪ್ರಶ್ನೆಗೆ ಈ ಹಿಂದೆ ಸಿದ್ದರಾಮಯ್ಯ ಸರಕಾರ ಇದ್ದಾಗ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿದ್ದರಾಮಯ್ಯ ರಾಜಿನಾಮೆ ನೀಡಿದ್ದರಾ ಎಂದು ಪ್ರಶ್ನೆ ಮಾಡಿದರು. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ ಎಂದು ಕೇಳಿದ್ದಕ್ಕೆ, ಪ್ರಾಥಮಿಕ ತನಿಖೆ ಆಗಲಿ ಎಂದಷ್ಟೇ ಹೇಳಿದರು.

ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದನ್ನು ನೀವು ತನಿಖೆ ಮಾಡಿದ್ದೀರಾ ಎಂಬ ಪ್ರಶ್ನೆಗೆ, ಗುತ್ತಿಗೆದಾರರು ಆರೋಪ ಮಾತ್ರ ಮಾಡಿದ್ದರು. ಆ ಕುರಿತು ಯಾವುದೇ ದಾಖಲೆಯನ್ನು ಸರಕಾರಕ್ಕಾಗಲೀ, ಯಾವುದೇ ತನಿಖಾ ತಂಡಕ್ಕೂ ಸಲ್ಲಿಸಿಲ್ಲ ಎಂದು ಹೇಳಿ ನುಣುಚಿಕೊಂಡರು.
The police are conducting a full investigation into the suicide of contractor Santosh Patil, who is accused of murdering minister Eshwarappa. I have instructed the police to send a specialist in the field of science from Mangalore. Chief Minister Basavaraja Bommai said the next decision will be taken after the preliminary inquiry.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm