ಬ್ರೇಕಿಂಗ್ ನ್ಯೂಸ್
12-04-22 10:25 pm Mangalore Correspondent ಕರಾವಳಿ
ಮಂಗಳೂರು, ಎ.12: ವರ್ಷದ ಮೊದಲೇ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ವಿಭಾಗ ಮಟ್ಟದ ಪ್ರಮುಖರ ಸಭೆ ನಡೆಸುತ್ತಿದೆ. ಏಕಕಾಲದಲ್ಲಿ ಮಂಗಳೂರು, ಬೆಳಗಾವಿ, ಮೈಸೂರಿನಲ್ಲಿ ಸಭೆ ನಡೆಸಲಾಗಿದ್ದು 2023ರ ಚುನಾವಣೆಯಲ್ಲಿ ಸ್ವಂತ ಶಕ್ತಿಯಲ್ಲಿ ಬಿಜೆಪಿಯನ್ನು ಗೆಲ್ಲಿಸುವುದಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಇದರ ಜೊತೆಗೆ ರಾಜ್ಯದಾದ್ಯಂತ ಏ.11ರಿಂದಲೇ ಮೂರು ತಂಡಗಳ ಮೂಲಕ ರಾಜ್ಯ ನಾಯಕರು ಪ್ರವಾಸ ಹಮ್ಮಿಕೊಂಡಿದ್ದಾರೆ.
ಮಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ತಂಡವು, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯ ಪಕ್ಷದ ಪ್ರಮುಖರನ್ನು ಸೇರಿಸಿ ಚರ್ಚೆ ನಡೆಸಿದೆ. ಸದ್ಯದ ಬೆಳವಣಿಗೆ ಹಿನ್ನೆಲೆಯಲ್ಲಿ ವಸ್ತುಸ್ಥಿತಿ ಹೇಗಿದೆ, ಕ್ಷೇತ್ರವಾರು ಶಾಸಕರ ಬಗೆಗೆ ಜನರ ಪ್ರತಿಕ್ರಿಯೆ, ಹಿಜಾಬ್ ವಿವಾದ ಮತ್ತು ಆನಂತರದ ಬೆಳವಣಿಗೆಯಿಂದ ಪಕ್ಷಕ್ಕೆ ಆಗಿರುವ ಹಿನ್ನಡೆ ಮತ್ತು ಲಾಭಗಳೇನು ಎನ್ನುವ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಸಲಾಗಿದೆ.


ಈಗಾಗಲೇ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಮಾಹಿತಿ ಸಂಗ್ರಹ ನಡೆಯುತ್ತಿದ್ದು ಅದರ ನಡುವಲ್ಲೇ ಪಕ್ಷದ ಪ್ರಮುಖರನ್ನು ಕರೆಸಿ ನಾಯಕರು ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ 150 ಪ್ಲಸ್ ಸ್ಥಾನಗಳನ್ನು ಗೆಲ್ಲಬೇಕೆಂಬ ಅಮಿತ್ ಷಾ ಸೂಚನೆ ಹಿನ್ನೆಲೆಯಲ್ಲಿ ಏನೇನು ಕಾರ್ಯ ಆಗಬೇಕು, ಹಿಂದುತ್ವ ಮತ್ತು ಅಭಿವೃದ್ಧಿ ಕಾರ್ಯ ಮುಂದಿಟ್ಟು ಮತ ಗಳಿಸುವ ವಿಚಾರದ ಬಗ್ಗೆ ಚರ್ಚೆ ನಡೆಸಲಾಗಿದೆ. ಇದರ ಜೊತೆಗೆ ಮುಸ್ಲಿಮ್ ವ್ಯಾಪಾರಸ್ಥರ ನಿಷೇಧ ಪ್ರಕ್ರಿಯೆಯಿಂದಾಗಿ ಕರಾವಳಿಯಲ್ಲಿ ಮತ ಕಳಕೊಳ್ಳುವ ಸ್ಥಿತಿ ಬರದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಇದಕ್ಕಾಗಿ ಆ ರೀತಿಯ ಸನ್ನಿವೇಶವನ್ನು ಸಮತೋಲಿತವಾಗಿ ನೋಡಿಕೊಂಡು ಅಂತಹ ಪ್ರಕ್ರಿಯೆಗಳಿಗೆ ಹೆಚ್ಚು ಮಹತ್ವ ನೀಡದಂತೆ ನಾಯಕರು ಸೂಚನೆ ನೀಡಿದ್ದಾರೆ.


ಮಂಗಳೂರಿನ ಸಭೆಯಲ್ಲಿ ಸಿಎಂ ಬೊಮ್ಮಾಯಿ ಜೊತೆಗೆ ಸಂಸದ ಸದಾನಂದ ಗೌಡ, ಸಚಿವರಾದ ಅಶ್ವತ್ಥ ನಾರಾಯಣ, ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, ಶ್ರೀರಾಮುಲು, ಲಕ್ಷ್ಮಣ ಸವದಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಸೇರಿದಂತೆ ಮೂರು ಜಿಲ್ಲೆಗಳ ಪಕ್ಷದ ಜಿಲ್ಲಾಧ್ಯಕ್ಷರು, ಕಾರ್ಯದರ್ಶಿ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.
The BJP, which has begun assembly polls earlier in the year, is holding a meeting with division-level leaders. The meeting was held simultaneously in Mangalore, Belgaum and Mysore and led by CM Basavaraja Bommai and Arun Singh to win the BJP in their own power in the 2023 elections. In addition, the state leaders have toured the country through three teams since the A11.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm