ಬ್ರೇಕಿಂಗ್ ನ್ಯೂಸ್
13-04-22 05:20 pm Mangalore Correspondent ಕರಾವಳಿ
ಉಳ್ಳಾಲ, ಎ.13 : ಚರ್ಚ್ ತೆರಳಿ ಮನೆಗೆ ವಾಪಾಸಾಗಿದ್ದ ಬಾಲಕ ಧಿಡೀರ್ ನಾಪತ್ತೆಯಾದ ಘಟನೆ ಉಳ್ಳಾಲ ಬೈಲಿನ ಗಣೇಶನಗರದಲ್ಲಿ ನಡೆದಿದೆ. ಬಾಲಕ ಅಪಹರಣಕ್ಕೀಡಾದ ಶಂಕೆ ವ್ಯಕ್ತವಾಗಿದ್ದು ಉಳ್ಳಾಲ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಉಳ್ಳಾಲ ಬೈಲು, ಗಣೇಶ ನಗರದ ಬಾಡಿಗೆ ಮನೆ ನಿವಾಸಿಗಳಾದ ಜಿತನ್ ರೆಸ್ಕಿನ್ಹಾ - ರೋಹಿತ ಬ್ರಾಕ್ಸ್ ದಂಪತಿಯ ಪ್ರಥಮ ಪುತ್ರ ರಿಯಾನ್ (9) ನಾಪತ್ತೆಯಾದ ಬಾಲಕ. ರಿಯಾನ್ ತೊಕ್ಕೊಟ್ಟು ಸಂತ ಸೆಬಾಸ್ಟಿಯನ್ ಶಾಲೆಯಲ್ಲಿ ಮೂರನೇ ತರಗತಿ ಮುಗಿಸಿದ್ದ. ರಿಯಾನ್ ಇಂದು ಬೆಳಗ್ಗೆ ಸ್ನೇಹಿತರೊಂದಿಗೆ ತೊಕ್ಕೊಟ್ಟು ಚರ್ಚ್ ತೆರಳಿದ್ದು ಮಧ್ಯಾಹ್ನ 1.35 ಗಂಟೆಗೆ ವಾಪಾಸಾಗಿದ್ದ. ಚರ್ಚಿನಿಂದ ವಾಪಸಾದ ರಿಯಾನ್ ಗಣೇಶ್ ನಗರದ ತನ್ನ ದೊಡ್ಡಮ್ಮನ ಮನೆಗೆ ತೆರಳಿದ್ದು ಅಲ್ಲಿದ್ದ ತಾಯಿ ತಮ್ಮ ಬಾಡಿಗೆ ಮನೆಯ ಕೀಲಿ ಕೈಯನ್ನ ರಿಯಾನಲ್ಲಿ ನೀಡಿ ಮನೆಗೆ ಹೋಗಲು ಹೇಳಿದ್ದಾರೆ. ರಿಯಾನ್ ತಾಯಿ ರೋಹಿತ ಅವರು 2 ಗಂಟೆ ಸುಮಾರಿಗೆ ಮನೆಗೆ ತೆರಳಿದಾಗ ಕಿಟಕಿಯಲ್ಲಿ ಮನೆಯ ಕೀಲಿ ಕೈ ಇದ್ದು ರಿಯಾನ್ ನಾಪತ್ತೆಯಾಗಿದ್ದಾನೆ. ಗಲಿ ಬಿಲಿಗೊಂಡ ರಿಯಾನ್ ಕುಟುಂಬಸ್ಥರು ಮತ್ತು ಸ್ಥಳೀಯರು ಬಾಲಕನಿಗಾಗಿ ಶೋಧ ನಡೆಸಿದ್ದಾರೆ.






ರಿಯಾನ್ 1.30 ಗಂಟೆಗೆ ಚರ್ಚಿಂದ ವಾಪಸಾದದ್ದನ್ನ ಸ್ಥಳೀಯರು ಗಮನಿಸಿದ್ದಾರೆ. ಘಟನೆಯ ಬಗ್ಗೆ ರಿಯಾನ್ ಪೋಷಕರು ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಸ್ಥಳೀಯ ಮನೆಯೊಂದರ ಸಿಸಿಟಿವಿ ಪೂಟೇಜನ್ನ ಪರಿಶೀಲನೆ ನಡೆಸುತ್ತಿದ್ದಾರೆ.ರಿಯಾನ್ ಗೆ ಇದೇ ಬರುವ ಎಪ್ರಿಲ್ 24 ರಂದು ಪೋಷಕರು ಹೋಲಿ ಕಮಿನಿಯನ್ ನಡೆಸಲು ತಯಾರಿಯಲ್ಲಿದ್ದರು ಎನ್ನಲಾಗಿದೆ.
Mangalore Nine year old boy goes missing after coming from church, kidnap suspected in Ullal. Riyan is the boy found missing. Royal is said to be of class three. A missing case has been registered at Ullal police station. April 24th Riyan had his holy communion in the church.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm