ಬ್ರೇಕಿಂಗ್ ನ್ಯೂಸ್
13-04-22 06:34 pm Mangalore Correspondent ಕರಾವಳಿ
ಮಂಗಳೂರು, ಎ.13 : ಮುಂಬೈನಲ್ಲಿ ಪ್ರಸಿದ್ಧಿ ಪಡೆದಿರುವ ಶ್ರೀಕೃಷ್ಣ ಬಟಾಟ ವಡ ಈಗ ಮಂಗಳೂರಿಗೂ ಬಂದಿದೆ. ನಗರದ ಮಂಗಳಾದೇವಿ ಬಳಿ ಮುಂಬೈನ ನವಮಿ ಗ್ರೂಪ್ ಸಂಸ್ಥೆಯ ನವಮಿ ವೆಜ್ ರೆಸ್ಟೋರೆಂಟ್ ಆರಂಭವಾಗಲಿದ್ದು ಬಟಾಟ ವಡಾ ಸೇರಿದಂತೆ ಮುಂಬೈ ಮತ್ತು ಕರಾವಳಿಯ ಅಪ್ಪಟ ತಿಂಡಿ ತಿನಿಸುಗಳು ಸಿಗಲಿವೆ.
ಬಟಾಟ ವಡಾ, ಸಾಬುದಾನ ವಡಾ, ಪೋಹಾ ಸಮೋಸ, ಕೊತ್ಮಿರ್ ವಡಾ ಮುಂತಾದ ಸವಿ, ಸವಿಯಾದ ಮುಂಬೈ ನಗರದ ಫಾಸ್ಟ್ ಫುಡ್ ಗಳನ್ನು ಕೂಡ ಇಲ್ಲಿ ಸವಿಯಬಹುದಾಗಿದೆ. ಎ.15 ರಂದು ನವಮಿ ವೆಜ್ ರೆಸ್ಟೋರೆಂಟ್ ಶುಭಾರಂಭ ಆಗಲಿದ್ದು ಈ ಬಗ್ಗೆ ಮಾಹಿತಿ ನೀಡಲು ನವಮಿ ಗ್ರೂಪ್ ಸಂಸ್ಥೆಯ ನರೇಶ್ ಎನ್. ಕುಡ್ವಾ, ನಂದ ಕುಮಾರ್ ಆರ್. ಕುಡ್ವಾ, ಅಶ್ವಥ್ ಎನ್. ಪೂಜಾರಿ, ಸಿಂಧು ಬಾಳಿಗಾ, ಮೀನಾಕ್ಷಿ ಬಾಳಿಗಾ ಸುದ್ದಿಗೋಷ್ಟಿ ಕರೆದಿದ್ದರು. ಹೊಟೇಲ್ ವಿಶೇಷತೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ನವಮಿ ವೆಜ್ ರೆಸ್ಟೋರೆಂಟ್ ವೈಶಿಷ್ಟ್ಯಗಳೇನು?
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆ ತಾಲೂಕಿನ ಬೆಳುವಾಯಿಯವರಾದ ರಾಮರಾಯ ಕುಡ್ವಾ ಅವರು 1916ನೇ ಇಸವಿಯಲ್ಲಿ ದೂರದ ಮುಂಬೈಗೆ ತೆರಳಿ ವಿವಿಧ ರೆಸ್ಟೋರೆಂಟ್ಗಳಲ್ಲಿ ಕೆಲಸ ಮಾಡಿ ಹೊಟೇಲ್ ಉದ್ಯಮದ ಬಗ್ಗೆ ತಿಳಿದುಕೊಂಡು 1943ರಲ್ಲಿ ಮುಂಬೈನ ದಾದರ್ ವೆಸ್ಟ್ ನಲ್ಲಿ ಶ್ರೀಕೃಷ್ಣ ಬಟಾಟ ವಡಾ ಎಂಬ ಹೆಸರಲ್ಲಿ ಹೊಟೇಲ್ ಉದ್ಯಮ ಆರಂಭಿಸಿದ್ದರು. ಮುಂದೆ ಇದೇ ಸಂಸ್ಥೆ ಚಬಿಲ್ ದಾಸ್ ಗಲ್ಲಿ ಬಟಾಟ ವಡ ಎಂದು ಜನಪ್ರಿಯತೆ ಗಳಿಸಿತ್ತು. 1974ರಲ್ಲಿ ನಂದಕುಮಾರ್ ಕುಡ್ವಾ ಅವರ ನೇತೃತ್ವದಲ್ಲಿ ಸಂಸ್ಥೆಯು ವಿವಿಧ ರೀತಿಯ ಉದ್ಯಮಗಳಿಗೆ ವಿಸ್ತರಣೆಯಾಗಿತ್ತು. ಇದೀಗ ನರೇಶ್ ಕುಡ್ವ ಉದ್ದಿಮೆ ಪರಂಪರೆಯನ್ನು ಮೂರನೇ ತಲೆಮಾರಿನಲ್ಲಿ ಜವಾಬ್ದಾರಿ ಹೊತ್ತು ಕೊಂಡಿದ್ದಾರೆ.
ಸುಮಾರು 80 ವರ್ಷಗಳ ಹಿಂದಿನ ತಲೆಮಾರಿನ ಮೂಲ ಪಾಕ ಶಾಸ್ತ್ರದ ಪ್ರಕಾರವೇ ಈಗಲೂ ವಡಾಗಳನ್ನು ತಯಾರಿಸುತ್ತೇವೆ. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಲ್ಲ. ಉತ್ತಮ, ಶುಚಿ ರುಚಿಯಾಗಿಯೇ ಆಹಾರವನ್ನು ನೀಡುತ್ತಿದ್ದೇವೆ ಎಂದು ನರೇಶ್ ಎನ್ ಕುಡ್ವಾ ಹೇಳಿದ್ದಾರೆ. ನಮ್ಮ ಮೂಲ ಶಾಖೆ ಮುಂಬೈನ ದಾದರ್ ನಲ್ಲಿ ಶ್ರೀಕೃಷ್ಣ ಬಟಾಟ ವಡಾ ಎನ್ನುವುದು ನೋಂದಾಯಿತ ಸಂಸ್ಥೆಯಾಗಿದ್ದು ಬಟಾಟ ವಡಾ ನಮ್ಮ ಬ್ರಾಂಡ್ ಆಗಿ ಬೆಳೆದಿದೆ ಎಂದು ನಂದಕುಮಾರ್ ಕುಡ್ವಾ ಹೇಳಿದ್ದಾರೆ.
Mumbai's most popular based Veg Restaurant Navmi to open it's branch now in Mangalore at Mangaladevi Temple road on 15th April.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
34 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm