ಬ್ರೇಕಿಂಗ್ ನ್ಯೂಸ್
13-04-22 06:34 pm Mangalore Correspondent ಕರಾವಳಿ
ಮಂಗಳೂರು, ಎ.13 : ಮುಂಬೈನಲ್ಲಿ ಪ್ರಸಿದ್ಧಿ ಪಡೆದಿರುವ ಶ್ರೀಕೃಷ್ಣ ಬಟಾಟ ವಡ ಈಗ ಮಂಗಳೂರಿಗೂ ಬಂದಿದೆ. ನಗರದ ಮಂಗಳಾದೇವಿ ಬಳಿ ಮುಂಬೈನ ನವಮಿ ಗ್ರೂಪ್ ಸಂಸ್ಥೆಯ ನವಮಿ ವೆಜ್ ರೆಸ್ಟೋರೆಂಟ್ ಆರಂಭವಾಗಲಿದ್ದು ಬಟಾಟ ವಡಾ ಸೇರಿದಂತೆ ಮುಂಬೈ ಮತ್ತು ಕರಾವಳಿಯ ಅಪ್ಪಟ ತಿಂಡಿ ತಿನಿಸುಗಳು ಸಿಗಲಿವೆ.
ಬಟಾಟ ವಡಾ, ಸಾಬುದಾನ ವಡಾ, ಪೋಹಾ ಸಮೋಸ, ಕೊತ್ಮಿರ್ ವಡಾ ಮುಂತಾದ ಸವಿ, ಸವಿಯಾದ ಮುಂಬೈ ನಗರದ ಫಾಸ್ಟ್ ಫುಡ್ ಗಳನ್ನು ಕೂಡ ಇಲ್ಲಿ ಸವಿಯಬಹುದಾಗಿದೆ. ಎ.15 ರಂದು ನವಮಿ ವೆಜ್ ರೆಸ್ಟೋರೆಂಟ್ ಶುಭಾರಂಭ ಆಗಲಿದ್ದು ಈ ಬಗ್ಗೆ ಮಾಹಿತಿ ನೀಡಲು ನವಮಿ ಗ್ರೂಪ್ ಸಂಸ್ಥೆಯ ನರೇಶ್ ಎನ್. ಕುಡ್ವಾ, ನಂದ ಕುಮಾರ್ ಆರ್. ಕುಡ್ವಾ, ಅಶ್ವಥ್ ಎನ್. ಪೂಜಾರಿ, ಸಿಂಧು ಬಾಳಿಗಾ, ಮೀನಾಕ್ಷಿ ಬಾಳಿಗಾ ಸುದ್ದಿಗೋಷ್ಟಿ ಕರೆದಿದ್ದರು. ಹೊಟೇಲ್ ವಿಶೇಷತೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ನವಮಿ ವೆಜ್ ರೆಸ್ಟೋರೆಂಟ್ ವೈಶಿಷ್ಟ್ಯಗಳೇನು?
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆ ತಾಲೂಕಿನ ಬೆಳುವಾಯಿಯವರಾದ ರಾಮರಾಯ ಕುಡ್ವಾ ಅವರು 1916ನೇ ಇಸವಿಯಲ್ಲಿ ದೂರದ ಮುಂಬೈಗೆ ತೆರಳಿ ವಿವಿಧ ರೆಸ್ಟೋರೆಂಟ್ಗಳಲ್ಲಿ ಕೆಲಸ ಮಾಡಿ ಹೊಟೇಲ್ ಉದ್ಯಮದ ಬಗ್ಗೆ ತಿಳಿದುಕೊಂಡು 1943ರಲ್ಲಿ ಮುಂಬೈನ ದಾದರ್ ವೆಸ್ಟ್ ನಲ್ಲಿ ಶ್ರೀಕೃಷ್ಣ ಬಟಾಟ ವಡಾ ಎಂಬ ಹೆಸರಲ್ಲಿ ಹೊಟೇಲ್ ಉದ್ಯಮ ಆರಂಭಿಸಿದ್ದರು. ಮುಂದೆ ಇದೇ ಸಂಸ್ಥೆ ಚಬಿಲ್ ದಾಸ್ ಗಲ್ಲಿ ಬಟಾಟ ವಡ ಎಂದು ಜನಪ್ರಿಯತೆ ಗಳಿಸಿತ್ತು. 1974ರಲ್ಲಿ ನಂದಕುಮಾರ್ ಕುಡ್ವಾ ಅವರ ನೇತೃತ್ವದಲ್ಲಿ ಸಂಸ್ಥೆಯು ವಿವಿಧ ರೀತಿಯ ಉದ್ಯಮಗಳಿಗೆ ವಿಸ್ತರಣೆಯಾಗಿತ್ತು. ಇದೀಗ ನರೇಶ್ ಕುಡ್ವ ಉದ್ದಿಮೆ ಪರಂಪರೆಯನ್ನು ಮೂರನೇ ತಲೆಮಾರಿನಲ್ಲಿ ಜವಾಬ್ದಾರಿ ಹೊತ್ತು ಕೊಂಡಿದ್ದಾರೆ.
ಸುಮಾರು 80 ವರ್ಷಗಳ ಹಿಂದಿನ ತಲೆಮಾರಿನ ಮೂಲ ಪಾಕ ಶಾಸ್ತ್ರದ ಪ್ರಕಾರವೇ ಈಗಲೂ ವಡಾಗಳನ್ನು ತಯಾರಿಸುತ್ತೇವೆ. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಲ್ಲ. ಉತ್ತಮ, ಶುಚಿ ರುಚಿಯಾಗಿಯೇ ಆಹಾರವನ್ನು ನೀಡುತ್ತಿದ್ದೇವೆ ಎಂದು ನರೇಶ್ ಎನ್ ಕುಡ್ವಾ ಹೇಳಿದ್ದಾರೆ. ನಮ್ಮ ಮೂಲ ಶಾಖೆ ಮುಂಬೈನ ದಾದರ್ ನಲ್ಲಿ ಶ್ರೀಕೃಷ್ಣ ಬಟಾಟ ವಡಾ ಎನ್ನುವುದು ನೋಂದಾಯಿತ ಸಂಸ್ಥೆಯಾಗಿದ್ದು ಬಟಾಟ ವಡಾ ನಮ್ಮ ಬ್ರಾಂಡ್ ಆಗಿ ಬೆಳೆದಿದೆ ಎಂದು ನಂದಕುಮಾರ್ ಕುಡ್ವಾ ಹೇಳಿದ್ದಾರೆ.
Mumbai's most popular based Veg Restaurant Navmi to open it's branch now in Mangalore at Mangaladevi Temple road on 15th April.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm