ಬ್ರೇಕಿಂಗ್ ನ್ಯೂಸ್
13-04-22 10:33 pm Mangalore Correspondent ಕರಾವಳಿ
ಉಳ್ಳಾಲ, ಎ.13 : ಮನೆಯಿಂದ ಧಿಡೀರ್ ಕಾಣೆಯಾಗಿ ಮನೆಯವರನ್ನು ದಂಗುಬಡಿಸಿದ್ದ ಬಾಲಕ ಕೊನೆಗೆ ಹುಡುಕಾಟದ ಬಳಿಕ ಅಜ್ಜಿ ಮನೆಯಲ್ಲಿ ಪತ್ತೆಯಾಗಿದ್ದು ಪೊಲೀಸರು, ಪೋಷಕರು ಮತ್ತು ಸ್ಥಳೀಯರನ್ನು ಬೇಸ್ತು ಬೀಳಿಸಿದೆ.
ಉಳ್ಳಾಲ ಬೈಲು ಗಣೇಶನಗರದ ಬಾಡಿಗೆ ಮನೆ ನಿವಾಸಿಗಳಾದ ಜಿತನ್ ರೆಸ್ಕಿನ ಮತ್ತು ರೋಹಿತ ಬ್ರಾಕ್ಸ್ ದಂಪತಿಯ ಪುತ್ರ ರಿಯಾನ್ (9) ಇಂದು ಮಧ್ಯಾಹ್ನ ಧಿಡೀರ್ ನಾಪತ್ತೆಯಾಗಿದ್ದ. ಬೆಳಗ್ಗೆ ಸ್ನೇಹಿತರೊಂದಿಗೆ ತೊಕ್ಕೊಟ್ಟು ಚರ್ಚ್ ಗೆ ತೆರಳಿದ್ದು ಮಧ್ಯಾಹ್ನ ವಾಪಾಸಾಗಿದ್ದ. ಆಬಳಿಕ ಪಕ್ಕದಲ್ಲೇ ಇರುವ ದೊಡ್ಡಮ್ಮನ ಮನೆಗೆ ತೆರಳಿದ್ದು ಅಲ್ಲಿದ್ದ ರಿಯಾನ್ ತಾಯಿ ಮನೆಯ ಕೀಲಿ ಕೈ ಕೊಟ್ಟು ರಿಯಾನಲ್ಲಿ ಮನೆಗೆ ಹೋಗಲು ಹೇಳಿದ್ದರು. ಆದರೆ 2 ಗಂಟೆ ಸುಮಾರಿಗೆ ತಾಯಿ ಮನೆಗೆ ತೆರಳಿದಾಗ ಕಿಟಕಿಯಲ್ಲಿ ಮನೆಯ ಕೀಲಿ ಕೈ ಮಾತ್ರ ಇದ್ದು ರಿಯಾನ್ ನಾಪತ್ತೆಯಾಗಿದ್ದ. ಗಾಬರಿಗೊಂಡ ರಿಯಾನ್ ಪೋಷಕರು, ಸ್ಥಳೀಯರು ಶೋಧ ನಡೆಸಿದ್ದು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಸಿಸಿಟಿವಿ ಪೂಟೇಜ್ ಪರಿಶೀಲಿಸಿ ಶೋಧ ಕಾರ್ಯ ಆರಂಭಿಸಿದ್ದರು.

ಅಜ್ಜಿ ಮನೆ ತೋಟದಲ್ಲಿದ್ದ ಬಾಲಕ !
ಇತ್ತ ಮನೆಮಂದಿ ರಿಯಾನ್ ಹುಡುಕಾಟದಲ್ಲಿ ತೊಡಗಿದ್ದರೆ, ಸಂಜೆ ಹೊತ್ತಲ್ಲಿ ಪಾವೂರು ಗ್ರಾಮದ ಇನೋಳಿಯ ಮಜಿಕಟ್ಟ ಎಂಬಲ್ಲಿ ತನ್ನ ಅಜ್ಜಿ ಮನೆಯ ತೋಟದಲ್ಲಿ ರಿಯಾನ್ ಪತ್ತೆಯಾಗಿದ್ದಾನೆ. ಒಂಬತ್ತು ವರ್ಷದ ಹುಡುಗ ಒಬ್ಬಂಟಿಯಾಗಿಯೇ ತೊಕ್ಕೊಟ್ಟಿನಿಂದ ಸಿಟಿ ಬಸ್ಸೊಂದನ್ನ ಏರಿ ಇನೋಳಿಗೆ ತೆರಳಿದ್ದು ಅಲ್ಲಿನ ಮನೆಗೂ ಹೋಗದೆ ತೋಟದಲ್ಲಿ ಅಡಿಕೆ ಹೆಕ್ಕುತ್ತಿರುವಂತೆ ನಟಿಸಿದ್ದಾನೆ.
ಅಜ್ಜ , ಅಜ್ಜಿ ಸಾವನ್ನಪ್ಪಿದ್ದು ಮನೆಯಲ್ಲಿದ್ದ ಚಿಕ್ಕಮ್ಮನಿಗೆ ರಿಯಾನ್ ಬಂದ ವಿಚಾರ ತಡವಾಗಿ ತಿಳಿದುಬಂದಿತ್ತು. ರಿಯಾನ್ ನಾಪತ್ತೆ ಬಗ್ಗೆ ಜಾಲತಾಣದಲ್ಲಿ ಸಂದೇಶವನ್ನು ನೋಡಿದ ಚಿಕ್ಕಮ್ಮ ರಿಯಾನ್ ತಮ್ಮಲ್ಲಿ ಇರುವ ಬಗ್ಗೆ ಪೋಷಕರಿಗೆ ತಿಳಿಸಿದ್ದಾರೆ. ಸಂಜೆ ರಿಯಾನ್ ಮತ್ತೆ ನಗು, ನಗುತ್ತಾ ತಾಯಿ ಮನೆಗೆ ಮರಳಿದ್ದು ಪೋಷಕರು, ಸ್ಥಳೀಯರು ನೆಮ್ಮದಿಯ ನಗು ಬೀರಿದ್ದಾರೆ.
ಬಾಲಕ ದಿಢೀರ್ ನಾಪತ್ತೆ ; ಉಳ್ಳಾಲದ ಮನೆಯಿಂದಲೇ ಅಪಹರಣ ಶಂಕೆ, ಪೊಲೀಸರಿಂದ ಶೋಧ ಕಾರ್ಯ
Ullal missing youth found in grannys house finally in Mangalore. The nine year old boy was found missing after he came back from the church.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm