ಬ್ರೇಕಿಂಗ್ ನ್ಯೂಸ್
13-04-22 10:33 pm Mangalore Correspondent ಕರಾವಳಿ
ಉಳ್ಳಾಲ, ಎ.13 : ಮನೆಯಿಂದ ಧಿಡೀರ್ ಕಾಣೆಯಾಗಿ ಮನೆಯವರನ್ನು ದಂಗುಬಡಿಸಿದ್ದ ಬಾಲಕ ಕೊನೆಗೆ ಹುಡುಕಾಟದ ಬಳಿಕ ಅಜ್ಜಿ ಮನೆಯಲ್ಲಿ ಪತ್ತೆಯಾಗಿದ್ದು ಪೊಲೀಸರು, ಪೋಷಕರು ಮತ್ತು ಸ್ಥಳೀಯರನ್ನು ಬೇಸ್ತು ಬೀಳಿಸಿದೆ.
ಉಳ್ಳಾಲ ಬೈಲು ಗಣೇಶನಗರದ ಬಾಡಿಗೆ ಮನೆ ನಿವಾಸಿಗಳಾದ ಜಿತನ್ ರೆಸ್ಕಿನ ಮತ್ತು ರೋಹಿತ ಬ್ರಾಕ್ಸ್ ದಂಪತಿಯ ಪುತ್ರ ರಿಯಾನ್ (9) ಇಂದು ಮಧ್ಯಾಹ್ನ ಧಿಡೀರ್ ನಾಪತ್ತೆಯಾಗಿದ್ದ. ಬೆಳಗ್ಗೆ ಸ್ನೇಹಿತರೊಂದಿಗೆ ತೊಕ್ಕೊಟ್ಟು ಚರ್ಚ್ ಗೆ ತೆರಳಿದ್ದು ಮಧ್ಯಾಹ್ನ ವಾಪಾಸಾಗಿದ್ದ. ಆಬಳಿಕ ಪಕ್ಕದಲ್ಲೇ ಇರುವ ದೊಡ್ಡಮ್ಮನ ಮನೆಗೆ ತೆರಳಿದ್ದು ಅಲ್ಲಿದ್ದ ರಿಯಾನ್ ತಾಯಿ ಮನೆಯ ಕೀಲಿ ಕೈ ಕೊಟ್ಟು ರಿಯಾನಲ್ಲಿ ಮನೆಗೆ ಹೋಗಲು ಹೇಳಿದ್ದರು. ಆದರೆ 2 ಗಂಟೆ ಸುಮಾರಿಗೆ ತಾಯಿ ಮನೆಗೆ ತೆರಳಿದಾಗ ಕಿಟಕಿಯಲ್ಲಿ ಮನೆಯ ಕೀಲಿ ಕೈ ಮಾತ್ರ ಇದ್ದು ರಿಯಾನ್ ನಾಪತ್ತೆಯಾಗಿದ್ದ. ಗಾಬರಿಗೊಂಡ ರಿಯಾನ್ ಪೋಷಕರು, ಸ್ಥಳೀಯರು ಶೋಧ ನಡೆಸಿದ್ದು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಸಿಸಿಟಿವಿ ಪೂಟೇಜ್ ಪರಿಶೀಲಿಸಿ ಶೋಧ ಕಾರ್ಯ ಆರಂಭಿಸಿದ್ದರು.

ಅಜ್ಜಿ ಮನೆ ತೋಟದಲ್ಲಿದ್ದ ಬಾಲಕ !
ಇತ್ತ ಮನೆಮಂದಿ ರಿಯಾನ್ ಹುಡುಕಾಟದಲ್ಲಿ ತೊಡಗಿದ್ದರೆ, ಸಂಜೆ ಹೊತ್ತಲ್ಲಿ ಪಾವೂರು ಗ್ರಾಮದ ಇನೋಳಿಯ ಮಜಿಕಟ್ಟ ಎಂಬಲ್ಲಿ ತನ್ನ ಅಜ್ಜಿ ಮನೆಯ ತೋಟದಲ್ಲಿ ರಿಯಾನ್ ಪತ್ತೆಯಾಗಿದ್ದಾನೆ. ಒಂಬತ್ತು ವರ್ಷದ ಹುಡುಗ ಒಬ್ಬಂಟಿಯಾಗಿಯೇ ತೊಕ್ಕೊಟ್ಟಿನಿಂದ ಸಿಟಿ ಬಸ್ಸೊಂದನ್ನ ಏರಿ ಇನೋಳಿಗೆ ತೆರಳಿದ್ದು ಅಲ್ಲಿನ ಮನೆಗೂ ಹೋಗದೆ ತೋಟದಲ್ಲಿ ಅಡಿಕೆ ಹೆಕ್ಕುತ್ತಿರುವಂತೆ ನಟಿಸಿದ್ದಾನೆ.
ಅಜ್ಜ , ಅಜ್ಜಿ ಸಾವನ್ನಪ್ಪಿದ್ದು ಮನೆಯಲ್ಲಿದ್ದ ಚಿಕ್ಕಮ್ಮನಿಗೆ ರಿಯಾನ್ ಬಂದ ವಿಚಾರ ತಡವಾಗಿ ತಿಳಿದುಬಂದಿತ್ತು. ರಿಯಾನ್ ನಾಪತ್ತೆ ಬಗ್ಗೆ ಜಾಲತಾಣದಲ್ಲಿ ಸಂದೇಶವನ್ನು ನೋಡಿದ ಚಿಕ್ಕಮ್ಮ ರಿಯಾನ್ ತಮ್ಮಲ್ಲಿ ಇರುವ ಬಗ್ಗೆ ಪೋಷಕರಿಗೆ ತಿಳಿಸಿದ್ದಾರೆ. ಸಂಜೆ ರಿಯಾನ್ ಮತ್ತೆ ನಗು, ನಗುತ್ತಾ ತಾಯಿ ಮನೆಗೆ ಮರಳಿದ್ದು ಪೋಷಕರು, ಸ್ಥಳೀಯರು ನೆಮ್ಮದಿಯ ನಗು ಬೀರಿದ್ದಾರೆ.
ಬಾಲಕ ದಿಢೀರ್ ನಾಪತ್ತೆ ; ಉಳ್ಳಾಲದ ಮನೆಯಿಂದಲೇ ಅಪಹರಣ ಶಂಕೆ, ಪೊಲೀಸರಿಂದ ಶೋಧ ಕಾರ್ಯ
Ullal missing youth found in grannys house finally in Mangalore. The nine year old boy was found missing after he came back from the church.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm