ಬ್ರೇಕಿಂಗ್ ನ್ಯೂಸ್
16-04-22 07:49 pm Mangalore Correspondent ಕರಾವಳಿ
ಮಂಗಳೂರು, ಎ.16: ಹಿಂದಿನವರು ಹಾಗೆ ಮಾಡಿದ್ದಾರೆ, ಹೀಗೆ ಮಾಡಿದ್ದಾರೆ ಎಂದು ಸಮರ್ಥಿಸಲು ಇವರೇನು ವ್ಯಾಪಾರ ಮಾಡುತ್ತಿದ್ದಾರೆಯೇ.. ಹಿಂದಿನವರು ಭ್ರಷ್ಟಾಚಾರದಲ್ಲಿ ತೊಡಗಿದ್ದರೆ, ಇವರೀಗ ಸರಕಾರ ನಡೆಸುತ್ತಿದ್ದಾರೆ. ಹಿಂದಿನದ್ದೆಲ್ಲವನ್ನೂ ತನಿಖೆ ನಡೆಸಲಿ, ಯಡಿಯೂರಪ್ಪ ಕಾಲದಲ್ಲಿ ಏನಾಗಿದೆ, ಎಸ್ಸೆಂ ಕೃಷ್ಣ ಕಾಲದಲ್ಲಿ ಏನೆಲ್ಲಾ ಆಗಿತ್ತು ಎಲ್ಲವೂ ತನಿಖೆ ಆಗಲಿ. ಅದಕ್ಕೊಂದು ಆಯೋಗ ರಚಿಸಲಿ. ನಾವು ಕೇಳ್ತಾ ಇರೋದು, ಈಗ ಆಗ್ತಿರೋ ಭ್ರಷ್ಟಾಚಾರದ ಬಗ್ಗೆ. ಹಳೆಯದನ್ನು ಹೇಳಿಕೊಂಡು ಸಮರ್ಥನೆ ಮಾಡೋದು ಮುಖ್ಯಮಂತ್ರಿ ಹುದ್ದೆಗೆ ಶೋಭೆ ತರಲ್ಲ ಎಂದು ಮಾಜಿ ಡಿಸಿಎಂ, ಹಿರಿಯ ಕಾಂಗ್ರೆಸ್ ಮುಖಂಡ ಜಿ.ಪರಮೇಶ್ವರ್, ಸಿಎಂ ಬೊಮ್ಮಾಯಿಗೆ ತಿರುಗೇಟು ನೀಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಪ್ರತೀ ಬಾರಿಯೂ ಸಿದ್ದರಾಮಯ್ಯ ಕಾಲದಲ್ಲಿ ಮಾಡಿಲ್ಲವೇ ಎಂದು ಮರು ಪ್ರಶ್ನೆ ಹಾಕುತ್ತಾರೆ. ಹಿಂದಿನ ಸರಕಾರದಲ್ಲಿ ತಪ್ಪು ಆಗಿದ್ದರೆ ಇವರು ತನಿಖೆ ಮಾಡಿಸಲಿ. ಯಾರು ಬೇಡ ಎಂದಿದ್ದು. ಇವರು ಹಳೆಯದನ್ನು ಹೇಳಿ ಈಗಿನದ್ದನ್ನು ಮರೆ ಮಾಚಲು ಸಾಧ್ಯವಾಗಲ್ಲ. ಈಶ್ವರಪ್ಪ ಮತ್ತು ಬಿಜೆಪಿ ಸರಕಾರದ ವಿರುದ್ಧ ನಲ್ವತ್ತು ಪರ್ಸೆಂಟ್ ಕಮಿಷನ್ ಪಡೆಯುತ್ತಿರುವ ಬಗ್ಗೆ ಒಂದು ವರ್ಷದ ಹಿಂದೆಯೇ ಗುತ್ತಿಗೆದಾರರ ಸಂಘದ ಕೃಷ್ಣಪ್ಪ ಎಂಬವರು ಪ್ರಧಾನಿಗೆ ದೂರು ನೀಡಿದ್ದರು. ಯಾಕೆ ಪ್ರಧಾನಿ ಮೋದಿ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು.

ಗುತ್ತಿಗೆದಾರರ ಸಂಘದ ಕೆಂಪಣ್ಣ ಸರಣಿಯಾಗಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕಾಮಗಾರಿ ನಿಲ್ಲಿಸುವ ಬೆದರಿಕೆ ಹಾಕಿದ್ದಾರೆ. ಇಂಥ ಭ್ರಷ್ಟರು ಸರಕಾರ ನಡೆಸುತ್ತಿದ್ದಾರೆ ಎನ್ನುವುದಕ್ಕೆ ಬೇರೆ ದಾಖಲೆ ಬೇಕೆ ಎಂದು ಹೇಳಿದ ಪರಮೇಶ್ವರ್, ಕುಮಾರಸ್ವಾಮಿಯವರು ಯಾವ ಆಧಾರದಲ್ಲಿ ಸಮರ್ಥನೆ ಮಾಡಿದ್ದಾರೋ ಗೊತ್ತಿಲ್ಲ. ಈಶ್ವರಪ್ಪ ವಿರುದ್ಧದ ಭ್ರಷ್ಚಾಚಾರವನ್ನು ಸಮರ್ಥನೆ ಮಾಡೋದಾದ್ರೆ ಇವರಿಗೆ ಸಾರ್ವಜನಿಕ ಜೀವನದಲ್ಲಿರುವ ನೈತಿಕತೆ ಇಲ್ಲ. ಅವರು ಸಮರ್ಥನೆ ಮಾಡಿಕೊಂಡು ಹೋಗಲಿ. ನಾವು ಗುತ್ತಿಗೆದಾರನಿಗೆ ನ್ಯಾಯ ಸಿಗಬೇಕೆಂದು ಹೋರಾಟ ಮಾಡುತ್ತೇವೆ. ಈಶ್ವರಪ್ಪ ಬಂಧಿಸದೆ ನಾವು ಹೋರಾಟ ನಿಲ್ಲಿಸಲ್ಲ ಎಂದು ಹೇಳಿದರು.
The district Congress staged protest here at Clock Tower on Saturday April 16 against minister K S Eshwarappa in connection to contractor Santhosh Patil suicide case.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm