ಬ್ರೇಕಿಂಗ್ ನ್ಯೂಸ್
18-04-22 10:00 am Mangalore Correspondent ಕರಾವಳಿ
ಮಂಗಳೂರು, ಎ.18: ಮಂಗಳೂರು ಹೊರವಲಯದ ಎಸ್ಇಝೆಡ್ ವ್ಯಾಪ್ತಿಯಲ್ಲಿರುವ ಫಿಶ್ ಮಿಲ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾಗಿ ದುರಂತ ಸಂಭವಿಸಿದ್ದು ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಭಾನುವಾರ ರಾತ್ರಿ ಫಿಶ್ ಮಿಲ್ ಫ್ಯಾಕ್ಟರಿಯ ಟ್ಯಾಂಕ್ ಸ್ವಚ್ಚಗೊಳಿಸುವ ಸಂದರ್ಭ ಘಟನೆ ನಡೆದಿದೆ. ಮೃತರು ಪಶ್ಚಿಮ ಬಂಗಾಳ ಮೂಲದವರು ಎನ್ನಲಾಗುತ್ತಿದೆ. ಮೊಹಮ್ಮದ್ ಸಮೀವುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಆಲಿಸ್, ಮಿರಾಜುಲ್ ಇಸ್ಲಾಂ, ಸರಾಫತ್ ಆಲಿ ಮೃತರು. ಹಸನ್ ಆಲಿ, ಮೊಹಮ್ಮದ್ ಕರೀಬುಲ್ಲ, ಹಫೀಜುಲ್ಲಾ ಎಂಬವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಾನುವಾರ ರಾತ್ರಿ ಟ್ಯಾಂಕ್ ಕ್ಲೀನ್ ನಡೆಸಲೆಂದು ಕಾರ್ಮಿಕನೊಬ್ಬ ಕೆಳಗಿಳಿದಿದ್ದ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು ಇತರ ಏಳು ಮಂದಿ ಕಾರ್ಮಿಕರು ಒಳಕ್ಕಿಳಿದಿದ್ದು, ಎಲ್ಲರೂ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಳಕ್ಕೆ ಮಂಗಳೂರು ನಗರ ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊದಲಿಗೆ ಮೂವರು ಸಾವು ಕಂಡಿದ್ದರು. ಬೆಳಗ್ಗಿನ ಆಸ್ಪತ್ರೆಯಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದಾರೆ.
ಫಿಶ್ ಮಿಲ್, ಮುಂಬೈ ಮೂಲದ ರಾಜು ಎಂಬವರಿಗೆ ಸೇರಿದ್ದಾಗಿದ್ದು ಶ್ರೀ ಉಲ್ಕಾ ಎಲ್ಎಲ್ ಪಿ ಹೆಸರಿನಲ್ಲಿ ಕಾರ್ಯಾಚರಿಸುತ್ತಿತ್ತು. ಕಾರ್ಮಿಕರಿಗೆ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸದೆ ನಿರ್ಲಕ್ಷ್ಯ ವಹಿಸಿದ ಬಗ್ಗೆ ಬಜಪೆ ಠಾಣೆಯಲ್ಲಿ 337, 338, 304 ಅಡಿ ಪ್ರಕರಣ ದಾಖಲಾಗಿದೆ. ಕಂಪನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್ ಗಾಡೆ, ಫ್ಯಾಕ್ಟರಿ ಸೂಪರ್ ವೈಸರ್ ಮೊಹಮ್ಮದ್ ಅನ್ವರ್, ಕಂಪೆನಿಯ ಕಾರ್ಮಿಕರನ್ನು ನೋಡಿಕೊಳ್ಳುತ್ತಿದ್ದ ಉಳ್ಳಾಲದ ಆಜಾದ್ ನಗರ ನಿವಾಸಿ ಫಾರೂಕ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Five youth were killed after they reportedly inhaled toxic gas at a fish processing centre in Mangaluru Special Economic Zone (MSEZ) on city”s outskirts on Sunday night.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm