ಬ್ರೇಕಿಂಗ್ ನ್ಯೂಸ್
21-04-22 11:45 am Mangalore Correspondent ಕರಾವಳಿ
ಮಂಗಳೂರು, ಎ.21: 'ಒಂದು ದೇಶ, ಒಂದೇ ಜನ’ ಎಂಬ ಸಂದೇಶ ಹಿಡಿದು ತನ್ನ 21ನೇ ವಯಸ್ಸಿನಲ್ಲಿ ಏಕಾಂಗಿಯಾಗಿ ಬೈಕಿನಲ್ಲಿ ಭಾರತ ಪರ್ಯಟನೆ ಆರಂಭಿಸಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ ನಿವಾಸಿ ಅಮೃತಾ ಜೋಶಿ 60 ದಿವಸಗಳ ಸಂಚಾರ ಪೂರೈಸಿದ್ದಾರೆ.
2022ರ ಫೆಬ್ರವರಿ 5ರಂದು ಕೇರಳದ ಕಲ್ಲಿಕೋಟೆಯಿಂದ ಸಂಚಾರ ಆರಂಭಿಸಿದ್ದ ಅಮೃತಾ ಜೋಶಿ ತಮಿಳುನಾಡು, ಆಂಧ್ರ ಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಲ, ಅಸ್ಸಾಂ, ಮೇಘಾಲಯ, ತ್ರಿಪುರಾ, ಮಿಜೋರಾಂ, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಸಿಕ್ಕಿಂ ರಾಜ್ಯಗಳನ್ನು ಸಂದರ್ಶಿಸಿದ್ದಾರೆ. ಈಶಾನ್ಯ ರಾಜ್ಯಗಳ ಭೇಟಿಯ ಜೊತೆಗೆ ನೆರೆಯ ಬಾಂಗ್ಲಾದೇಶ, ಮ್ಯಾನ್ಮಾರ್ಗಳನ್ನು ಕೂಡ ಅಮೃತಾ ಸಂದರ್ಶಿಸಿದ್ದಾರೆ. ಇದುವರೆಗೆ 8,040 ಕಿ.ಮೀ. ಯಾನ ಪೂರೈಸಿದ್ದಾಗಿ ಅಮೃತಾ ತಿಳಿಸಿದ್ದಾರೆ.
ಮುಂದೆ ನೇಪಾಳದಿಂದ ಆರಂಭಿಸಿ ಬಿಹಾರ, ಝಾರ್ಖಂಡ್, ಛತ್ತೀಸ್ಗಢ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಲಡಾಖ್, ಪಂಜಾಬ್, ಹರಿಯಾಣ, ದಿಲ್ಲಿ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಗೋವಾ, ಕರ್ನಾಟಕ ತಲುಪಲಿದ್ದು ಕೊನೆಯಲ್ಲಿ ಕೇರಳದ ಕಾಸರಗೋಡಿನಲ್ಲಿ ಯಾತ್ರೆಯನ್ನು ಮುಕ್ತಾಯ ಮಾಡಲಿದ್ದಾರೆ.
“ಸಿ.ಆರ್.ಎಫ್ ವುಮೆನ್ ಆನ್ ವೀಲ್ಸ್’ ಎಂಬ ಕ್ಲಬ್ ಸದಸ್ಯೆಯಾಗಿರುವ ಅಮೃತಾ ಜೋಶಿ ಕುಂಬಳೆ ನಿವಾಸಿಗಳಾದ ದಿ| ಅಶೋಕ್ ಜೋಶಿ ಮತ್ತು ಅನ್ನಪೂರ್ಣ ಜೋಶಿ ದಂಪತಿಯ ಕಿರಿಯ ಪುತ್ರಿ. ಅಮೃತಾ ಜೋಶಿ ದೇಶ ಸಂಚಾರಕ್ಕೆ ವಿವಿಧ ಸಂಘಟನೆಗಳ ಬೆಂಬಲವೂ ಸಿಕ್ಕಿದೆ.
ಈಶಾನ್ಯ ರಾಜ್ಯದ ಪ್ರಯಾಣದ ಬಗ್ಗೆ ಎಲ್ಲರೂ ಆ ರಾಜ್ಯಗಳು ಸುರಕ್ಷಿತವಲ್ಲ ಎಂದಿದ್ದರು. ಆದರೆ ಈ ಯಾನದ ಬಳಿಕ ಈಶಾನ್ಯ ರಾಜ್ಯಗಳು ಸುರಕ್ಷಿತ ಸ್ಥಳ ಮತ್ತು ಅಲ್ಲಿನ ಜನರು ಮೃದು ಮನಸ್ಸಿನವರು ಎಂದು ಹೇಳುತ್ತೇನೆ. ಅವರ ಪ್ರೀತಿ ಮತ್ತು ಬೆಂಬಲದಿಂದಾಗಿ ಇಡೀ ಭಾರತ ಯಾನವನ್ನು ಪೂರ್ಣಗೊಳಿಸಲು ನಿರ್ಧರಿಸಿದ್ದೇನೆ ಎಂದು ಅಮೃತಾ ಜೋಶಿ ಹೇಳಿದ್ದಾರೆ.
Youngest solo rider Amrutha Joshi from Kerala to cover northeast by bike.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm